AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಸಾವು ಬಯಸಿದ ಟ್ರೋಲರ್ಸ್; ಆಕ್ರೋಶ ಹೊರಹಾಕಿದ ಗಾಯಕಿ ಚಿನ್ಮಯಿ ಶ್ರೀಪಾದ

ಇತ್ತೀಚೆಗೆ ಸಿಯಾ ಗೋಯಲ್ ತನ್ನ ಭಾವಿ ಪತಿ ಕೇತನ್ ಅಗರ್ವಾಲ್‌ನನ್ನು ಕೊಲೆ ಮಾಡಿದ ಸುದ್ದಿ ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ರಾಹುಲ್ ರವೀಂದ್ರನ್, ‘ಇದು ಕೇವಲ ವೈಯಕ್ತಿಕ ಅಪರಾಧ, ಇದನ್ನು ಪುರುಷರ ಮೇಲಿನ ವ್ಯವಸ್ಥಿತ ದಾಳಿ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ’ ಎಂದಿದ್ದರು. ಇದೇ ಮಾತು ಟ್ರೋಲರ್‌ಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಇಡೀ ಕುಟುಂಬದ ವಿರುದ್ಧ ದ್ವೇಷ ಸಾಧಿಸಲು ಶುರು ಮಾಡಿದ್ದಾರೆ.

ಮಕ್ಕಳ ಸಾವು ಬಯಸಿದ ಟ್ರೋಲರ್ಸ್; ಆಕ್ರೋಶ ಹೊರಹಾಕಿದ ಗಾಯಕಿ ಚಿನ್ಮಯಿ ಶ್ರೀಪಾದ
Chinmayi Sripaada Family
ಮದನ್​ ಕುಮಾರ್​
|

Updated on: Jul 08, 2026 | 7:03 PM

Share

ಮುಖ್ಯಾಂಶಗಳು

  • ಕೇತನ್ ಅಗರ್ವಾಲ್‌ ಕೊಲೆ ಪ್ರಕರಣದ ಬಗ್ಗೆ ಮಾತಾಡಿದ್ದಕ್ಕೆ ಟೀಕೆಗೆ ಗುರಿ.
  • ಗಾಯಕಿ ಚಿನ್ಮಯಿ ಶ್ರೀಪಾದ ಮಕ್ಕಳನ್ನು ಟಾರ್ಗೆಟ್ ಮಾಡಿದ ಟ್ರೋಲರ್ಸ್.
  • ನೀಚ ಮನಸ್ಥಿತಿಯ ಟ್ರೋಲರ್​ಗಳಿಗೆ ಚಳಿಬಿಡಿಸಿದ ಸಿಂಗರ್ ಚಿನ್ಮಯಿ ಶ್ರೀಪಾದ.

ಖ್ಯಾತ ಹಿನ್ನೆಲೆ ಗಾಯಕಿ ಚಿನ್ಮಯಿ ಶ್ರೀಪಾದ (Chinmayi Sripaada) ಹಾಗೂ ಅವರ ಪತಿ, ನಟ-ನಿರ್ದೇಶಕ ರಾಹುಲ್ ರವೀಂದ್ರನ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭೀಕರ ಆನ್‌ಲೈನ್ ದ್ವೇಷಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ನಡೆದ ಕೇತನ್ ಅಗರ್ವಾಲ್‌ (Ketan Agarwal) ಕೊಲೆ ಪ್ರಕರಣದ ಬಗ್ಗೆ ರಾಹುಲ್ ರವೀಂದ್ರನ್ ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಸಿಟ್ಟಾದ ಟ್ರೋಲರ್‌ಗಳು, ಅವರ 3 ವರ್ಷದ ಅವಳಿ ಮಕ್ಕಳ ಸಾವನ್ನು ಬಯಸುವ ಮಟ್ಟಿಗೆ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಬೇಸತ್ತು ರಾಹುಲ್ ಎಕ್ಸ್ (ಟ್ವಿಟರ್) ಖಾತೆಯನ್ನೇ ಡಿಲೀಟ್ ಮಾಡಿದ್ದರೆ, ಗಾಯಕಿ ಚಿನ್ಮಯಿ ಮಾತ್ರ ಟ್ರೋಲರ್‌ಗಳಿಗೆ ತಕ್ಕ ಉತ್ತರ ನೀಡುತ್ತಿದ್ದಾರೆ.

ವಿಡಿಯೋ ಮೂಲಕ ಕಿಡಿಕಾರಿದ ಚಿನ್ಮಯಿ

ತಮ್ಮ ಇಡೀ ಕುಟುಂಬ ಎದುರಿಸುತ್ತಿರುವ ನಿಂದನೆಗಳ ಬಗ್ಗೆ ಚಿನ್ಮಯಿ ಶ್ರೀಪಾದ ಅವರು ಎಕ್ಸ್ ಖಾತೆಯಲ್ಲಿ 7 ನಿಮಿಷಗಳ ಸುದೀರ್ಘ ವಿಡಿಯೋ ಹಂಚಿಕೊಂಡಿದ್ದಾರೆ. ‘ನನ್ನ ಮಗ ಸಾಯಲಿ ಎಂದು ಪ್ರಾರ್ಥಿಸುವುದಾಗಿ ಒಬ್ಬ ಟ್ವೀಟ್ ಮಾಡಿದ್ದ. ಅಷ್ಟೇ ಅಲ್ಲದೆ, ತನ್ನ ಭಜನಾ ಮಂಡಳಿಯನ್ನು ಕರೆದು ನನ್ನ ಮಗನ ಸಾವಿಗೆ ಒಟ್ಟಾಗಿ ಪ್ರಾರ್ಥಿಸುವಂತೆ ಕೋರಿದ್ದ. ಇದನ್ನು ನೋಡಿದ ತಕ್ಷಣ ರಾಹುಲ್ ಸಹನೆ ಕಳೆದುಕೊಂಡರು’ ಎಂದು ಚಿನ್ಮಯಿ ಹೇಳಿದ್ದಾರೆ.

‘ಅತ್ಯಂತ ಭಯಾನಕವಾದ ಜೀವನ ಸಿಗಲಿ’

ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿರುವ ಮಹಿಳಾದ್ವೇಷ, ಅತ್ಯಾಚಾರದ ಸಂಸ್ಕೃತಿ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ ಅವರು, ‘ಆನ್‌ಲೈನ್‌ನಲ್ಲಿ ನಿಂದಿಸುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ ಅಮಾಯಕ ಮಕ್ಕಳನ್ನು ಮಧ್ಯೆ ತರುವುದು ಎಲ್ಲಾ ಮಿತಿಗಳನ್ನು ಮೀರಿದಂತಾಗಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ‘ನನ್ನ ಮಕ್ಕಳಾದ ಶ್ರವಸ್ ಮತ್ತು ದೃಪ್ತಾರನ್ನು ಗುರಿಯಾಗಿಸಿಕೊಂಡು ನಿಂದಿಸುವವರಿಗೆ ನಾನು ಒಂದೇ ಹೇಳಲು ಬಯಸುತ್ತೇನೆ. ನೀವು ನನ್ನ ಮಕ್ಕಳನ್ನು ನಿಂದಿಸಿದರೆ, ನಿಮಗೆ ಸುದೀರ್ಘವಾದ ಆದರೆ ಅತ್ಯಂತ ಭಯಾನಕವಾದ ಜೀವನ ಸಿಗಲಿ ಎಂದು ನಾನು ಹಾರೈಸುತ್ತೇನೆ’ ಎಂದು ಚಿನ್ಮಯಿ ಎಚ್ಚರಿಕೆ ನೀಡಿದ್ದಾರೆ.

ಸ್ಕ್ರೀನ್‌ಶಾಟ್ ಹಂಚಿಕೊಂಡ ಗಾಯಕಿ

ಬುಧವಾರ (ಜುಲೈ 8) ತಮ್ಮ ಎಕ್ಸ್ ಖಾತೆಯಲ್ಲಿ ಕೆಲವು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಚಿನ್ಮಯಿ, ‘ಕೆಲವು ತೆಲುಗು ಸೋಷಿಯಲ್ ಮೀಡಿಯಾ ಬಳಕೆದಾರರು ನನ್ನ ಮಕ್ಕಳ ಸಾವನ್ನು ಬಯಸುತ್ತಿದ್ದಾರೆ. ನಾನು ಮಹಿಳಾ ಹಕ್ಕುಗಳ ಪರವಾಗಿ ಧ್ವನಿ ಎತ್ತುವುದರಿಂದ ಅವರು ನನ್ನನ್ನು ಆ್ಯಂಟಿ-ಫೆಮಿನಿಸ್ಟ್ ಎಂದು ಕರೆಯುತ್ತಾ ದ್ವೇಷಿಸುತ್ತಿದ್ದಾರೆ. ಇಂತಹ ಸೈಕೋಪಾತ್‌ಗಳಿಗೆ ನಾನು ಅದೇ ಧಾಟಿಯಲ್ಲಿ ಉತ್ತರ ನೀಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಖ್ಯಾತ ನಾಮನ ಕಿರುಕುಳದ ಬಗ್ಗೆ ಹೇಳಿದ್ದೇ ತಪ್ಪಾಯ್ತು; ಗಾಯಕಿಯ ಬೆತ್ತಲೆ ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ಇದಕ್ಕೂ ಮುನ್ನ ರಾಹುಲ್ ರವೀಂದ್ರನ್ ಟ್ವಿಟರ್ ತೊರೆಯುವಾಗ, ‘ಬಹುಶಃ ನಾನು ಅತಿಯಾಗಿ ಪ್ರತಿಕ್ರಿಯಿಸುತ್ತಿರಬಹುದು, ಅಥವಾ ನನ್ನದೇ ತಪ್ಪಿರಬಹುದು. ಆದರೆ ಈ ದ್ವೇಷವನ್ನು ಸಹಿಸಲು ಸಾಧ್ಯವಿಲ್ಲ. ಆ ಟ್ವೀಟ್ ಓದಿದ ಅರ್ಧ ಗಂಟೆಯ ನಂತರ ನನಗಾದ ಮಾನಸಿಕ ಆಘಾತದಿಂದಾಗಿ ಈ ಆ್ಯಪ್ ಅನ್ನು ಡಿಲೀಟ್ ಮಾಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು