AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ಹರಿಣಿ ತಂದೆ ಎ.ಕೆ. ರಾವ್ ಸಂಶಯಾಸ್ಪದ​ ಸಾವಿಗೆ ಬರೋಬ್ಬರಿ 390 ಕೋಟಿ ಸಾಲದ ನಂಟು

AK Rao Death: ಉದ್ಯಮಿ ಗಿರೀಶ್‌ಗೆ 150 ಕೋಟಿ ರೂಪಾಯಿ ಹಾಗೂ ಪಣಿತರನ್‌ಗೆ 240 ಕೋಟಿ ರೂಪಾಯಿ ಸಾಲ ಕೊಡಿಸಲು ಎ.ಕೆ. ರಾವ್​ ಮುಂದಾಗಿದ್ದರು. ಬಳಿಕ ಅವರು ಶವವಾಗಿ ಪತ್ತೆಯಾದರು. ಈ ಸಂಬಂಧ ತನಿಖೆ ನಡೆಯುತ್ತಿದೆ.​

ಗಾಯಕಿ ಹರಿಣಿ ತಂದೆ ಎ.ಕೆ. ರಾವ್ ಸಂಶಯಾಸ್ಪದ​ ಸಾವಿಗೆ ಬರೋಬ್ಬರಿ 390 ಕೋಟಿ ಸಾಲದ ನಂಟು
ಹರಿಣಿ. ಎ.ಕೆ. ರಾವ್
TV9 Web
| Edited By: |

Updated on: Nov 27, 2021 | 9:23 AM

Share

ಸಿನಿಮಾ ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆ ಎ.ಕೆ. ರಾವ್​ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆಯ ಜಾಲವನ್ನು ಪೊಲೀಸರು ಭೇದಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಯಲಹಂಕ ಬಳಿ ರೈಲ್ವೆ ಹಳಿ ಮೇಲೆ ಎ.ಕೆ. ರಾವ್ ಶವ ಪತ್ತೆ ಆಗಿತ್ತು. ಅಚ್ಚರಿ ಏನೆಂದರೆ, ಈ ಸಾವಿಗೆ ಬರೋಬ್ಬರಿ 390 ಕೋಟಿ ರೂಪಾಯಿ ಸಾಲದ ನಂಟು ಇದೆ ಎಂಬುದು ಈಗ ಬಯಲಾಗಿದೆ. ಉದ್ಯಮಿ ಗಿರೀಶ್‌ ಸೇರಿದಂತೆ ಇನ್ನೂ ಇಬ್ಬರಿಗೆ ಸಾಲ ಕೊಡಿಸಲು ಎ.ಕೆ. ರಾವ್ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಉದ್ಯಮಿ ಗಿರೀಶ್‌ಗೆ 150 ಕೋಟಿ ರೂಪಾಯಿ ಹಾಗೂ ಪಣಿತರನ್‌ಗೆ 240 ಕೋಟಿ ರೂಪಾಯಿ ಸಾಲ ಕೊಡಿಸಲು ಎ.ಕೆ. ರಾವ್​ ಮುಂದಾಗಿದ್ದರು. ಡ್ಯಾನಿಯಲ್ ಆರ್ಮ್ ಸ್ಟ್ರಾಂಗ್‌ನಿಂದ ಸಾಲ ಕೊಡಿಸಲು ಪ್ರಯತ್ನ ಮಾಡಲಾಗಿತ್ತು.

ಡ್ಯಾನಿಯಲ್ ಮುಂಗಡವಾಗಿ 5 ಕೋಟಿ 80 ಲಕ್ಷ ಬಡ್ಡಿ ಪಡೆದುಕೊಂಡಿದ್ದ. ಬಡ್ಡಿ ಹಣ ಸಿಗುತ್ತಿದ್ದಂತೆಯೇ ಡ್ಯಾನಿಯಲ್ ನಾಪತ್ತೆಯಾಗಿದ್ದ. ಹೀಗಾಗಿ ಗಿರೀಶ್, ಪಣಿತರನ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಡ್ಯಾನಿಯಲ್, ವಿವೇಕಾನಂದ, ರಾಘವ ವಿರುದ್ಧ ವಂಚನೆ ಕೇಸ್ ದಾಖಲು ಮಾಡಲಾಗಿತ್ತು. ಆ ದೂರಿನ ಹಿನ್ನೆಲೆಯಲ್ಲಿ ಎ.ಕೆ. ರಾವ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾದ ಮರುದಿನವೇ ಅವರು ಶವವಾಗಿ ಪತ್ತೆಯಾಗಿದ್ದು, ಇನ್ನಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಯಲಹಂಕ ಬಳಿ ರೈಲ್ವೆ ಹಳಿ ಮೇಲೆ ಎ.ಕೆ. ರಾವ್ ಶವ ಪತ್ತೆ ಆಗಾದ ಆಧಾರ್​ ಕಾರ್ಡ್​ ಸಿಕ್ಕಿತ್ತು. ಅಲ್ಲದೇ, ದೂರು ನೀಡಲು ಸಿದ್ಧಪಡಿಸಿರುವ ಪತ್ರ ಹಾಗೂ ಕೆಲವು ಡಾಕ್ಯುಮೆಂಟ್​ಗಳು ಸಹ ಪತ್ತೆ ಆಗಿದ್ದವು. ತಂದೆಯ ಸಾವು ಅನುಮಾನಾಸ್ಪದ ಆಗಿದೆ ಎಂದು ಎ.ಕೆ. ರಾವ್​ ಪುತ್ರಿ ಶಾಲಿನಿ ಅವರು ಪೊಲೀಸರಿಗೆ ದೂರು ನೀಡಿದ್ದರು. ‘ನಮ್ಮ ತಂದೆ ಕೊಲೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ’ ಎಂದು ದೂರಿನಲ್ಲಿ ಹೇಳಲಾಗಿತ್ತು.

ಮೃತದೇಹದಲ್ಲಿ ಎಡಗೈ ನರ ಕಟ್ ಆಗಿತ್ತು. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿತ್ತು. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿತ್ತು. ಪ್ರಾಥಮಿಕ ತನಿಖೆ ವೇಳೆ ಇದು ಆತ್ಮಹತ್ಯೆ ಎಂದು ವೈದ್ಯರು ಹೇಳಿದ್ದರು. ಸದ್ಯ ತನಿಖೆ ಮುಂದುವರಿದಿದ್ದು ಹೊಸ ಹೊಸ ಶಾಕಿಂಗ್​ ವಿಚಾರಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?