AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ಹರಿಣಿ ತಂದೆ ಎ.ಕೆ. ರಾವ್ ಸಂಶಯಾಸ್ಪದ​ ಸಾವಿಗೆ ಬರೋಬ್ಬರಿ 390 ಕೋಟಿ ಸಾಲದ ನಂಟು

AK Rao Death: ಉದ್ಯಮಿ ಗಿರೀಶ್‌ಗೆ 150 ಕೋಟಿ ರೂಪಾಯಿ ಹಾಗೂ ಪಣಿತರನ್‌ಗೆ 240 ಕೋಟಿ ರೂಪಾಯಿ ಸಾಲ ಕೊಡಿಸಲು ಎ.ಕೆ. ರಾವ್​ ಮುಂದಾಗಿದ್ದರು. ಬಳಿಕ ಅವರು ಶವವಾಗಿ ಪತ್ತೆಯಾದರು. ಈ ಸಂಬಂಧ ತನಿಖೆ ನಡೆಯುತ್ತಿದೆ.​

ಗಾಯಕಿ ಹರಿಣಿ ತಂದೆ ಎ.ಕೆ. ರಾವ್ ಸಂಶಯಾಸ್ಪದ​ ಸಾವಿಗೆ ಬರೋಬ್ಬರಿ 390 ಕೋಟಿ ಸಾಲದ ನಂಟು
ಹರಿಣಿ. ಎ.ಕೆ. ರಾವ್
TV9 Web
| Edited By: |

Updated on: Nov 27, 2021 | 9:23 AM

Share

ಸಿನಿಮಾ ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆ ಎ.ಕೆ. ರಾವ್​ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆಯ ಜಾಲವನ್ನು ಪೊಲೀಸರು ಭೇದಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಯಲಹಂಕ ಬಳಿ ರೈಲ್ವೆ ಹಳಿ ಮೇಲೆ ಎ.ಕೆ. ರಾವ್ ಶವ ಪತ್ತೆ ಆಗಿತ್ತು. ಅಚ್ಚರಿ ಏನೆಂದರೆ, ಈ ಸಾವಿಗೆ ಬರೋಬ್ಬರಿ 390 ಕೋಟಿ ರೂಪಾಯಿ ಸಾಲದ ನಂಟು ಇದೆ ಎಂಬುದು ಈಗ ಬಯಲಾಗಿದೆ. ಉದ್ಯಮಿ ಗಿರೀಶ್‌ ಸೇರಿದಂತೆ ಇನ್ನೂ ಇಬ್ಬರಿಗೆ ಸಾಲ ಕೊಡಿಸಲು ಎ.ಕೆ. ರಾವ್ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಉದ್ಯಮಿ ಗಿರೀಶ್‌ಗೆ 150 ಕೋಟಿ ರೂಪಾಯಿ ಹಾಗೂ ಪಣಿತರನ್‌ಗೆ 240 ಕೋಟಿ ರೂಪಾಯಿ ಸಾಲ ಕೊಡಿಸಲು ಎ.ಕೆ. ರಾವ್​ ಮುಂದಾಗಿದ್ದರು. ಡ್ಯಾನಿಯಲ್ ಆರ್ಮ್ ಸ್ಟ್ರಾಂಗ್‌ನಿಂದ ಸಾಲ ಕೊಡಿಸಲು ಪ್ರಯತ್ನ ಮಾಡಲಾಗಿತ್ತು.

ಡ್ಯಾನಿಯಲ್ ಮುಂಗಡವಾಗಿ 5 ಕೋಟಿ 80 ಲಕ್ಷ ಬಡ್ಡಿ ಪಡೆದುಕೊಂಡಿದ್ದ. ಬಡ್ಡಿ ಹಣ ಸಿಗುತ್ತಿದ್ದಂತೆಯೇ ಡ್ಯಾನಿಯಲ್ ನಾಪತ್ತೆಯಾಗಿದ್ದ. ಹೀಗಾಗಿ ಗಿರೀಶ್, ಪಣಿತರನ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಡ್ಯಾನಿಯಲ್, ವಿವೇಕಾನಂದ, ರಾಘವ ವಿರುದ್ಧ ವಂಚನೆ ಕೇಸ್ ದಾಖಲು ಮಾಡಲಾಗಿತ್ತು. ಆ ದೂರಿನ ಹಿನ್ನೆಲೆಯಲ್ಲಿ ಎ.ಕೆ. ರಾವ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾದ ಮರುದಿನವೇ ಅವರು ಶವವಾಗಿ ಪತ್ತೆಯಾಗಿದ್ದು, ಇನ್ನಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಯಲಹಂಕ ಬಳಿ ರೈಲ್ವೆ ಹಳಿ ಮೇಲೆ ಎ.ಕೆ. ರಾವ್ ಶವ ಪತ್ತೆ ಆಗಾದ ಆಧಾರ್​ ಕಾರ್ಡ್​ ಸಿಕ್ಕಿತ್ತು. ಅಲ್ಲದೇ, ದೂರು ನೀಡಲು ಸಿದ್ಧಪಡಿಸಿರುವ ಪತ್ರ ಹಾಗೂ ಕೆಲವು ಡಾಕ್ಯುಮೆಂಟ್​ಗಳು ಸಹ ಪತ್ತೆ ಆಗಿದ್ದವು. ತಂದೆಯ ಸಾವು ಅನುಮಾನಾಸ್ಪದ ಆಗಿದೆ ಎಂದು ಎ.ಕೆ. ರಾವ್​ ಪುತ್ರಿ ಶಾಲಿನಿ ಅವರು ಪೊಲೀಸರಿಗೆ ದೂರು ನೀಡಿದ್ದರು. ‘ನಮ್ಮ ತಂದೆ ಕೊಲೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ’ ಎಂದು ದೂರಿನಲ್ಲಿ ಹೇಳಲಾಗಿತ್ತು.

ಮೃತದೇಹದಲ್ಲಿ ಎಡಗೈ ನರ ಕಟ್ ಆಗಿತ್ತು. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿತ್ತು. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿತ್ತು. ಪ್ರಾಥಮಿಕ ತನಿಖೆ ವೇಳೆ ಇದು ಆತ್ಮಹತ್ಯೆ ಎಂದು ವೈದ್ಯರು ಹೇಳಿದ್ದರು. ಸದ್ಯ ತನಿಖೆ ಮುಂದುವರಿದಿದ್ದು ಹೊಸ ಹೊಸ ಶಾಕಿಂಗ್​ ವಿಚಾರಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು