AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರಗ್ ಜಾಸ್ತಿ ಆಯ್ತು, ಆತ್ಮಹತ್ಯೆ ಪ್ರಯತ್ನವಲ್ಲ’; ಖ್ಯಾತ ಗಾಯಕಿ ಕಲ್ಪನಾ ಮಗಳ ಪ್ರತಿಕ್ರಿಯೆ

ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಅವರು ನಿದ್ರಾಮಾತ್ರೆ ಅತಿಯಾಗಿ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಆತ್ಮಹತ್ಯೆ ಪ್ರಯತ್ನವಲ್ಲ ಎಂದು ಅವರ ಮಗಳು ಸ್ಪಷ್ಟಪಡಿಸಿದ್ದಾರೆ. ನಿದ್ರಾಹೀನತೆಯಿಂದ ಬಳಲುತ್ತಿದ್ದ ಕಲ್ಪನಾ ಅವರು ಅತಿಯಾಗಿ ಮಾತ್ರೆ ಸೇವಿಸಿದ್ದಾರೆ ಎಂದು ಹೇಳಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ.

‘ಡ್ರಗ್ ಜಾಸ್ತಿ ಆಯ್ತು, ಆತ್ಮಹತ್ಯೆ ಪ್ರಯತ್ನವಲ್ಲ’; ಖ್ಯಾತ ಗಾಯಕಿ ಕಲ್ಪನಾ ಮಗಳ ಪ್ರತಿಕ್ರಿಯೆ
ಕಲ್ಪನಾ
ರಾಜೇಶ್ ದುಗ್ಗುಮನೆ
|

Updated on:Mar 05, 2025 | 3:03 PM

Share

ಖ್ಯಾತ ಗಾಯಕಿ ಕಲ್ಪಾನಾ ರಾಘವೇದ್ರ (Kalpana Raghavendra) ಅವರು ನಿದ್ರೆ ಮಾತ್ರೆ ಸೇವನೆ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂಬ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಕಲ್ಪನಾ ಅವರು ಇಷ್ಟೆಲ್ಲ ಸೂಪರ್ ಹಿಟ್ ಹಾಡುಗಳನ್ನು ನೀಡಿದರೂ ಜೀವವನ್ನು ಕೊನೆಗೊಳಿಸಿಕೊಳ್ಳುವಂಥದೇನಾಗಿತ್ತು ಎಂಬುದು ಅನೇಕರ ಪ್ರಶ್ನೆ ಆಗಿತ್ತು. ಇದಕ್ಕೆ ಅವರ ಮಗಳು ಸ್ಪಷ್ಟನೆ ನೀಡಿದ್ದಾರೆ. ಹೈದರಾಬಾದ್​ನಲ್ಲೇ ಇರೋ ಅವರು ಎಲ್ಲಾ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದು ಆತ್ಮಹತ್ಯೆ ಪ್ರಯತ್ನ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

‘ನನ್ನ ತಾಯಿಗೆ ಯಾವುದೇ ಸಮಸ್ಯೆ ಇಲ್ಲ. ಅವರು ಆರೋಗ್ಯವಾಗಿದ್ದಾರೆ. ಅವರು ಎಲ್​ಎಲ್​ಬಿ ಹಾಗೂ ಪಿಎಚ್​​ಡಿ ಮಾಡುತ್ತಿದ್ದಾರೆ. ಅವರಿಗೆ ನಿದ್ರಾಹೀನತೆ ಇದೆ. ಅವರು ನಿದ್ರೆಮಾತ್ರೆ ತೆಗೆದುಕೊಂಡಿದ್ದಾರೆ. ಇದು ಓವರ್​ಡೋಸ್ ಆಗಿದೆ. ಇದು ಆತ್ಮಹತ್ಯೆ ಪ್ರಯತ್ನವಲ್ಲ’ ಎಂದಿದ್ದಾರೆ ಕಲ್ಪನಾ ಮಗಳು.

‘ನಮಗೆ ಅವರ ಬಗ್ಗೆ ಖುಷಿ ಇದೆ. ನಡೆದ ಘಟನೆಯನ್ನು ತಿರುಚಬೇಡಿ. ಇದು ಡ್ರಗ್ (ಔಷಧ) ಓವರ್​ಡೋಸ್ ಆಗಿದೆ ಅಷ್ಟೇ’ ಎಂದು ಹೇಳುವ ಮೂಲಕ ಎಲ್ಲಾ ವಂದತಿಗಳನ್ನು ತಳ್ಳಿ ಹಾಕಿದ್ದಾರೆ. ಕಲ್ಪನಾ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ.

ಇದನ್ನೂ ಓದಿ
Image
2 ದಿನಗಳಿಂದ ಬಾಗಿಲನ್ನೇ ತೆರೆಯದ ಗಾಯಕಿ; ಒಳಗೆ ಆಗಿತ್ತು ಯಾರೂ ಊಹಿಸದ ಘಟನೆ
Image
ಶಂಕರ್​ನಾಗ್​ ಬಳಸುತ್ತಿದ್ದ ಆ ವಸ್ತುವನ್ನು ಕಂಡರೆ ಅನಂತ್​ ನಾಗ್​ಗೆ ಈಗಲೂ ಭಯ
Image
ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದ ಅಫಾನ್
Image
ಸಾಲಗಾರನ ಕಾಟಕ್ಕೆ ವ್ಯಕ್ತಿ ಆತ್ಮಹತ್ಯೆ: ಡೆತ್​ನೋಟ್​ ಸ್ಫೋಟಕ ಅಂಶ ಬಯಲು

ಕಲ್ಪನಾ ಅವರು ಮಂಗಳವಾರ (ಮಾರ್ಚ್ 4) ಮಧ್ಯಾಹ್ನ 3 ಗಂಟೆಗೆ ನಿದ್ರೆ ಮಾತ್ರೆ ಸೇವನೆ ಮಾಡಿದರು. ಅವರ ಪತಿ ಸಂಜೆ ಕರೆ ಮಾಡಿದರೂ ಕಲ್ಪನಾ ಕರೆ ಸ್ವೀಕರಿಸಿಲ್ಲ. ಆ ಬಳಿಕ ಕಲ್ಪನಾ ಪತಿ ಪರಿಚಯಸ್ಥರಿಗೆ ಕರೆ ಮಾಡಿ ತಿಳಿಸಿದರು. ಪರಿಚಯಸ್ಥರು ಮನೆ ಬಾಗಿಲು ತಟ್ಟಿದರೂ ಅವರು ತೆಗೆದಿಲ್ಲ. ನಂತರ ಬಾಗಿಲು ಒಡೆದು ಒಳ ಹೋದಾಗ ಕಲ್ಪನಾ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಇದನ್ನೂ ಓದಿ: ಎರಡು ದಿನಗಳಿಂದ ಬಾಗಿಲನ್ನೇ ತೆರೆಯದ ಗಾಯಕಿ; ಒಳಗೆ ಆಗಿತ್ತು ಯಾರೂ ಊಹಿಸದ ಘಟನೆ

ಕಲ್ಪನಾ ಅವರು ಹಲವು ಹಾಡುಗಳನ್ನು ಹಾಡಿದ್ದಾರೆ. ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರಿಗೆ ಈ ರೀತಿ ಆಗಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:59 pm, Wed, 5 March 25

ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ