AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangli: ಅಪಘಾತಕ್ಕೆ ಒಳಗಾಯ್ತು ಖ್ಯಾತ ಗಾಯಕಿ ಮಂಗ್ಲಿ ಕಾರು

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ಭಾನುವಾರ (ಮಾರ್ಚ್ 17) ತಡರಾತ್ರಿ ಈ ಘಟನೆ ನಡೆದಿದೆ.

Mangli: ಅಪಘಾತಕ್ಕೆ ಒಳಗಾಯ್ತು ಖ್ಯಾತ ಗಾಯಕಿ ಮಂಗ್ಲಿ ಕಾರು
ಮಂಗ್ಲಿ
ರಾಜೇಶ್ ದುಗ್ಗುಮನೆ
|

Updated on:Mar 18, 2024 | 11:23 AM

Share

‘ಹೂ ಅಂತೀಯಾ ಮಾವ…’ ಹಾಡನ್ನು ಹಾಡಿ ಕನ್ನಡದ ಜನತೆಗೂ ಪರಿಚಯಗೊಂಡಿರುವ ಗಾಯಕಿ ಮಂಗ್ಲಿ (Mangli) ಅವರು ಕಾರು ಅಪಘಾತಕ್ಕೆ ಒಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅವರು ತೆಲುಗು ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ಭಾನುವಾರ (ಮಾರ್ಚ್ 17) ತಡರಾತ್ರಿ ಈ ಘಟನೆ ನಡೆದಿದೆ. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಳ್ಳಾರಿ ಉತ್ಸವದಲ್ಲಿ ಸಿಂಗರ್​ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ ಆಗಿಲ್ಲ, ಆದ್ರೂ ಗ್ಲಾಸ್ ಒಡೆದಿದ್ಯಾಕೆ? ಎಸ್ಪಿ ಸ್ಪಷ್ಟನೆ ಇಲ್ಲಿದೆ

ಕಾರಿನಲ್ಲಿ ಇದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ದಿವ್ಯಾ ಪ್ರಿಯಾ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಹೈದರಾಬಾದ್-ಬೆಂಗಳೂರು ಹೆದ್ದಾರಿಯ ತೊಂಡುಪಲ್ಲಿ ಸೇತುವೆ ಬಳಿಕ ಗಾಯಕ ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದಿದೆ. ಮಂಗ್ಲಿ ಹಾಗೂ ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಬರೆಯಲಾಗಿದೆ.

ಮಂಗ್ಲಿ ಬಗ್ಗೆ ಮಾಡಿದ ಟ್ವೀಟ್

ಮಂಗ್ಲಿ ಅವರು 2018ರಲ್ಲಿ ಸಿನಿಮಾ ರಂಗಕ್ಕೆ ಗಾಯಕಿ ಆಗಿ ಕಾಲಿಟ್ಟರು. ಆರಂಭದಲ್ಲಿ ಅವರು ತೆಲುಗು ಚಿತ್ರರಂಗದಲ್ಲಿ ಮಿಂಚಿದರು. ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ನಲ್ಲಿ ಬರುವ ‘ಹೂ ಅಂತೀಯಾ ಮಾವ..’ ಹಾಡನ್ನು ಹಾಡಿ ಗಮನ ಸೆಳೆದರು. ನಂತರ ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Mon, 18 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ