AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ

ಖ್ಯಾತ ಗಾಯಕಿ ಎಸ್. ಜಾನಕಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾನಕಿ ಅವರು ಮೈಸೂರಿನಲ್ಲಿ ಶನಿವಾರ (ಜುಲೈ 11) ನಿಧನರಾದರು. ಅವರ ಅಗಲಿಕೆಗೆ ಶಿವರಾಜ್​ಕುಮಾರ್, ಜಗ್ಗೇಶ್, ತ್ರಿಶಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ
Shivrajkumar, S Janaki, Trisha Krishnan
ಮದನ್​ ಕುಮಾರ್​
| Edited By: |

Updated on:Jul 13, 2026 | 12:08 PM

Share

ಮುಖ್ಯಾಂಶಗಳು

  • ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ.
  • ಲೆಜೆಂಡರಿ ಗಾಯಕಿಯ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ.
  • ಜಾನಕಿ ಅವರ ಕೊಡುಗೆ ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದ ಶಿವಣ್ಣ.

ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಎಸ್. ಜಾನಕಿ (S Janaki) ಅವರು ನಿಧನರಾಗಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ಅನೇಕ ಸೆಲೆಬ್ರಿಟಿಗಳು ಜಾನಕಿ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಳ್ಳಲಾಗುತ್ತಿದೆ. ನಟ ಶಿವರಾಜ್​ಕುಮಾರ್ (Shivrajkumar) ಕೂಡ ಸಂತಾಪ ಸೂಚಿಸಿದ್ದಾರೆ. ಅದೇ ರೀತಿ ಜಗ್ಗೇಶ್, ವಿನೋದ್ ರಾಜ್, ತ್ರಿಶಾ ಕೃಷ್ಣನ್, ಸುಮಲತಾ ಅಂಬರೀಷ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ಎಸ್. ಜಾನಕಿ ಅಗಲಿಕೆಗೆ ಶಿವರಾಜ್​ಕುಮಾರ್ ಸಂತಾಪ:

‘ಜಾನಕಮ್ಮ ಅವರ ನಿಧನದ ವಿಚಾರ ತಿಳಿದು ದುಃಖ ಆಗಿದೆ. ಅಪ್ಪಾಜಿ ಜೊತೆಯಲ್ಲೂ ಸಾಕಷ್ಟು ಹಾಡುಗಳನ್ನು ಹಾಡಿದ್ದರು. ಜಾನಕಿ ಅಮ್ಮನವರಿಗೆ ನಮ್ಮನ್ನು ಕಂಡರೆ ತುಂಬಾ ಪ್ರೀತಿ. ಗಾಯಕಿ ಆಗಿ ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಜಾನಕಮ್ಮನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ. ಅಭಿಮಾನಿಗಳು, ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ’ ಎಂದು ಜಾನಕಿ ನಿಧನಕ್ಕೆ ಶಿವರಾಜ್​ಕುಮಾರ್ ಸಂತಾಪ ಸೂಚಿಸಿದ್ದಾರೆ.

ಭಾವುಕರಾಗಿ ಶ್ರದ್ಧಾಂಜಲಿ ಸಲ್ಲಿಸಿದ ಜಗ್ಗೇಶ್:

ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. ‘ಯಾಕೋ ಬೆಳಿಗ್ಗೆಯಿಂದ ಈ ಹಾಡು (ದೇವರ ಆಟ ಬಲ್ಲವರಾರು..) ಬಹಳ ಕಾಡಿತು. ಇಂದು ಬೆಳಿಗ್ಗೆಯಿಂದ ಈ ತಾಯಿ ಹಾಡು ಕೇಳುತ್ತಿರುವೆ. ಕೇಳುವುದನ್ನು ಮನಸ್ಸು ನಿಲ್ಲಿಸುತ್ತಿಲ್ಲ. ಅಬ್ಬಾ ಎಂಥ ಸಿರಿಕಂಠ. ಇಂದು ಅವರು ನಮ್ಮನ್ನು ಅಗಲಿದ್ದಾರೆ. ಹೋಗಿ ಬನ್ನಿ ಸುಮಧುರ ಕಲಾಕಂಠವೆ’ ಎಂದು ಅವರು ಜಗ್ಗೇಶ್ ಬರೆದುಕೊಂಡಿದ್ದಾರೆ.

ಜಾನಕಿ ನಿಧನಕ್ಕೆ ತ್ರಿಶಾ ಕೃಷ್ಣನ್ ಕಂಬನಿ:

ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಜಾನಕಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ‘ನನ್ನ ಅತ್ಯಂತ ವಿಶೇಷವಾದ ಚಿತ್ರವೊಂದರಲ್ಲಿ ನಿಮ್ಮ ಹೆಸರಿನ ಪಾತ್ರವನ್ನು ಮಾಡಿದ್ದು ನನ್ನ ಜೀವನದ ಅತ್ಯಂತ ದೊಡ್ಡ ಗೌರವಗಳಲ್ಲಿ ಒಂದಾಗಿ ಎಂದೆಂದಿಗೂ ಉಳಿಯುತ್ತದೆ. ನಿಮ್ಮಿಂದ ಪ್ರೀತಿ ಪಡೆದಿರುವುದು ನಾನು ಜೀವನದಲ್ಲಿ ಎಂದೆಂದಿಗೂ ಸಂಭ್ರಮಿಸುವ ಸಂಗತಿಯಾಗಿದೆ. ನಿಮ್ಮ ಅಪ್ಪುಗೆಗೆ, ನಿಮ್ಮ ದಯೆಗೆ, ನಿಮ್ಮ ನಗುವಿಗೆ ಧನ್ಯವಾದಗಳು. ಕಲಾವಿದರು ಯಾವಾಗಲೂ ಅತ್ಯಂತ ವಿನಮ್ರವಾಗಿರಬೇಕು ಎಂಬುದನ್ನು ನೆನಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಧ್ವನಿ ಎಂದೆಂದಿಗೂ ಜೀವಂತವಾಗಿರುತ್ತದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಅಮ್ಮ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಪೋಸ್ಟ್ ಮಾಡಿದ್ದಾರೆ.

View this post on Instagram

A post shared by Trish (@trishakrishnan)

‘ಸಂಗೀತ ಲೋಕದ ಧ್ರುವತಾರೆ, ಪದ್ಮಭೂಷಣ್ ಎಸ್. ಜಾನಕಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ನಿಮ್ಮ ಮಧುರ ಕಂಠ ಮತ್ತು ಅಮರ ಗೀತೆಗಳು ತಲೆಮಾರುಗಳ ಹೃದಯಗಳನ್ನು ಸದಾ ಸ್ಪರ್ಶಿಸುತ್ತಲೇ ಇರುತ್ತವೆ. ನಿಮ್ಮ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ಎಂದಿಗೂ ತುಂಬಲಾರದ ನಷ್ಟ. ಆದರೆ ನಿಮ್ಮ ಸ್ವರ ಮತ್ತು ನಿಮ್ಮ ಹಾಡುಗಳು ನಮ್ಮ ನೆನಪುಗಳಲ್ಲಿ ಚಿರಕಾಲ ಜೀವಂತವಾಗಿರುತ್ತವೆ. ಓಂ ಶಾಂತಿ’ ಎಂದು ಸುಮಲತಾ ಅಂಬರೀಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಇದನ್ನೂ ಓದಿ: ಎಸ್ ಜಾನಕಿ ನಿಧನ: 20 ಭಾಷೆ, 48 ಸಾವಿರ ಹಾಡು, ಗಾಯಕಿ ನಡೆದುಬಂದ ಹಾದಿ

ನಟ ವಿನೋದ್ ರಾಜ್ ಮಾತನಾಡಿ, ‘ಜಾನಕಿ ಅವರಂತಹ ಗಾಯಕಿ ಮತ್ತೆ ಹುಟ್ಟಲ್ಲ. ಉತ್ತುಂಗದ ಸ್ಥಾನದಲ್ಲಿ ಇದ್ದಾಗಲೂ ಕೂಡ ಅವರು ವಿನಮ್ರವಾಗಿ ಇರುತ್ತಿದ್ದರು. ಇಂದಿನ ತನಕ ಅವರು ಶ್ರೇಷ್ಠ ಗಾಯಕಿಯಾಗಿ ಉಳಿದುಕೊಂಡರು. ಒಳ್ಳೆಯ ವ್ಯಕ್ತಿತ್ವ ಅವರದ್ದು. ನಮ್ಮ ತಾಯಿಯನ್ನು ಕಂಡರೆ ಅವರಿಗೆ ತುಂಬಾ ಇಷ್ಟ. ಕಷ್ಟ ಸುಖ ಹಂಚಿಕೊಳ್ಳುತ್ತಿದ್ದರು. ಇಂದು ಅವರು ಇಲ್ಲ ಎಂಬುದು ನನಗೆ ತುಂಬಾ ನೋವು ಕೊಡುತ್ತದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:42 am, Sun, 12 July 26

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ