AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಅಮ್ಮನನ್ನು ವೃದ್ಧಾಶ್ರಮಕ್ಕೆ ಸೇರಿಸಬೇಡಿ; ಹಾಡಿನ ಮೂಲಕ ತಿಳಿಹೇಳಿದ ಗಾಯಕ ಶಾನ್​

ಫಾದರ್ಸ್​ ಡೇ ಪ್ರಯುಕ್ತ ಗಾಯಕ ಶಾನ್​ ಒಂದು ಹಾಡು ಬಿಡುಗಡೆ ಮಾಡಿದ್ದರು. ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಬೇಡಿ ಎಂಬ ಸಂದೇಶ ಇರುವ ಆ ಗೀತೆಗೆ ಈವರೆಗೆ 1.8 ಮಿಲಿಯನ್​ (18 ಲಕ್ಷ) ವೀವ್ಸ್​ ಸಿಕ್ಕಿದೆ.

ಅಪ್ಪ-ಅಮ್ಮನನ್ನು ವೃದ್ಧಾಶ್ರಮಕ್ಕೆ ಸೇರಿಸಬೇಡಿ; ಹಾಡಿನ ಮೂಲಕ ತಿಳಿಹೇಳಿದ ಗಾಯಕ ಶಾನ್​
ಗಾಯಕ ಶಾನ್​
ಮದನ್​ ಕುಮಾರ್​
|

Updated on:Jul 06, 2021 | 9:54 AM

Share

ಹೊಸ ಪೀಳಿಗೆಯ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಹಲವು ಬಗೆಯ ಹಾಡುಗಳು ತಯಾರಾಗುತ್ತವೆ. ಮದ್ಯಪಾನವನ್ನು ಪ್ರಚೋದಿಸುವ, ಡಬಲ್​ ಮೀನಿಂಗ್​ ಪದ ಪ್ರಯೋಗ ಮಾಡುವ, ಬೈಗುಳಗಳನ್ನೇ ಸಾಹಿತ್ಯವನ್ನಾಗಿ ಮಾಡಿಕೊಳ್ಳುವ ಹಾಡುಗಳ ಸಂಖ್ಯೆ ಹೆಚ್ಚುತ್ತಿದೆ. ಅವು ಮಿಲಿಯನ್​ಗಟ್ಟಲೆ ವೀವ್ಸ್​ ಕೂಡ ಪಡೆದುಕೊಳ್ಳುತ್ತಿವೆ. ಇಂಥ ಟ್ರೆಂಡ್​ಗೆ ವಿರುದ್ಧವಾಗಿ ಜನಪ್ರಿಯ ಗಾಯಕ ಶಾನ್​ ಅವರು ಒಂದು ಹೊಸ ಹಾಡು ರಿಲೀಸ್​​ ಮಾಡಿದ್ದು, ಅದು ಜನರಿಗೆ ತುಂಬ ಇಷ್ಟ ಆಗುತ್ತಿದೆ.

ಸಂಗೀತದ ಮೂಲಕ ಜನರಲ್ಲಿ ಪಾಸಿಟಿವ್​ ವಿಚಾರಗಳನ್ನು ತುಂಬಬೇಕು ಎಂಬುದು ಶಾನ್​ ಉದ್ದೇಶ. ಯುವಜನತೆಯನ್ನು ಕೆರಳಿಸುವಂತಹ ಮತ್ತು ಕೆಟ್ಟ ಸಂದೇಶ ನೀಡುವಂತಹ ಹಾಡುಗಳಿಗೆ ಶಾನ್​ ವಿರೋಧವಿದೆ. ಇಂಥ ಹಾಡುಗಳನ್ನೇ ಜನರು ಇಷ್ಟಪಡುತ್ತಿರುವುದು ಈಗಿನ ಟ್ರೆಂಡ್​ ಆಗಿದ್ದರೂ ಕೂಡ ಅದಕ್ಕೆ ವಿರುದ್ಧವಾಗಿ ಶಾನ್​ ಮಾಡಿದ ಒಂದು ಪಾಸಿಟಿವ್​ ಪ್ರಯತ್ನಕ್ಕೆ ಈಗ ಮೆಚ್ಚುಗೆ ಸಿಕ್ಕಿದೆ. ಇತ್ತೀಚೆಗೆ ಅವರು ಫಾದರ್ಸ್​ ಡೇ ಪ್ರಯುಕ್ತ ಒಂದು ಹಾಡು ಬಿಡುಗಡೆ ಮಾಡಿದ್ದರು. ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಬೇಡಿ ಎಂಬ ಸಂದೇಶ ಇರುವ ಆ ಗೀತೆಗೆ ಈವರೆಗೆ 1.8 ಮಿಲಿಯನ್​ (18 ಲಕ್ಷ) ವೀವ್ಸ್​ ಸಿಕ್ಕಿರುವುದು ಅವರಿಗೆ ಸಂತಸ ತಂದಿದೆ.

‘ಅಪ್ಪ-ಅಮ್ಮನ್ನನ್ನು ನೋಡಿಕೊಳ್ಳುವುದು ಮಕ್ಕಳ ಮೊದಲ ಆದ್ಯತೆ ಆಗಬೇಕು. ವಯಸ್ಸಾದ ಪೋಷಕರನ್ನು ತೊರೆಯಬಾರದು. ಅವರ ಭಾವನೆಗಳ ಬಗ್ಗೆ ಈಗ ಮಾತನಾಡುವುದು ಅವಶ್ಯಕವಾಗಿದೆ. ಅವರು ಸಾಯುವವರೆಗೂ ನಾವು ಇದನ್ನು ಅರ್ಥ ಮಾಡಿಕೊಳ್ಳದಿದ್ದರೆ ಆಗ ತುಂಬ ತಡವಾಗಿರುತ್ತದೆ’ ಎಂದು ಶಾನ್​ ಹೇಳಿದ್ದಾರೆ. ಈ ಹಾಡಿನ ಮೂಲಕ ಆದಷ್ಟು ಜನರ ಮನಸ್ಸು ಬದಲಾಯಿಸುವುದು ಅವರ ಮುಖ್ಯ ಉದ್ದೇಶ.

‘ತೇರಾ ಹಿಸ್ಸಾ ಹು’ ಎಂಬ ಈ ಹಾಡಿನಲ್ಲಿ ಸ್ವತಃ ಶಾನ್​ ನಟಿಸಿದ್ದಾರೆ. ತಂದೆ-ಮಗನ ಸಂಬಂಧದ ಬಗ್ಗೆ ಮಾತನಾಡುವ ಈ ಗೀತೆಯಲ್ಲಿ ಅವರ ಪುತ್ರ ಶುಭ್​ ಕೂಡ ಕಾಣಿಸಿಕೊಂಡಿದ್ದಾರೆ. ‘ನನ್ನ ಮಗ ನನ್ನಂತೆಯೇ ಕಾಣುತ್ತಾನೆ. ಅವನು ನನ್ನ ಬಾಲ್ಯದ ಪಾತ್ರ ಮಾಡಿರುವುದರಿಂದ ಅವನಿಗಿಂತ ಉತ್ತಮವಾದ ಬೇರೆ ಆಯ್ಕೆ ಯಾವುದೂ ಇರುವುದಿಲ್ಲ ಎನಿಸಿತು’ ಎಂದು ಶಾನ್​ ಹೇಳಿದ್ದಾರೆ.

ಹೆಚ್ಚು ಜನರು ಈ ಹಾಡನ್ನು ಶೇರ್​ ಮಾಡುತ್ತಿದ್ದು, ವೀಕ್ಷಣೆ ಸಂಖ್ಯೆ 18 ಲಕ್ಷವನ್ನೂ ದಾಟಿ ಮುಂದುವರಿಯುತ್ತಿದೆ.

ಇದನ್ನೂ ಓದಿ:

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ವೃದ್ಧಾಪ್ಯ ವೇತನದಲ್ಲಿ ಗೋಲ್​ಮಾಲ್​; ಸಾರ್ವಜನಿಕವಾಗಿ ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಶಾಸಕ

Published On - 8:10 am, Tue, 6 July 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್