15 ದಿನ ಆಸ್ಪತ್ರೆಯಲ್ಲಿದ್ದರೂ ಬದುಕಲಿಲ್ಲ; ‘ಸಿಂಗಂ’ ಖ್ಯಾತಿಯ ನಟ ಜಯಂತ್ ಸಾವರ್ಕರ್ ನಿಧನ

ಜಯಂತ್ ಸಾವರ್ಕರ್ ಅವರು ಮರಾಠಿ, ಹಿಂದಿ, ರಂಗಭೂಮಿ ಹಾಗೂ ದೂರದರ್ಶನದಲ್ಲಿ ನಟಿಸಿದ್ದಾರೆ. ಅವರು ಆರು ದಶಕಗಳು ನಟನೆಯಲ್ಲಿ ತೊಡಗಿಕೊಂಡಿದ್ದರು.

15 ದಿನ ಆಸ್ಪತ್ರೆಯಲ್ಲಿದ್ದರೂ ಬದುಕಲಿಲ್ಲ; ‘ಸಿಂಗಂ’ ಖ್ಯಾತಿಯ ನಟ ಜಯಂತ್ ಸಾವರ್ಕರ್ ನಿಧನ
ಜಯಂತ್
Follow us
|

Updated on:Jul 25, 2023 | 7:39 AM

ಹಿರಿಯ ನಟ ಜಯಂತ್ ಸಾವರ್ಕರ್ (Jayant Savarkar) ಅವರು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಈ ವಿಚಾರವನ್ನು ಅವರ ಮಗ ಕೌಸ್ತುಭ್ ಸಾವರ್ಕರ್ ಅವರು ಖಚಿತಪಡಿಸಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ಜಯಂತ್ ಅವರು ಹೆಚ್ಚಾಗಿ ಗುರುತಿಸಿಕೊಂಡಿದ್ದರು. ‘ಸಿಂಗಂ’ ಸಿನಿಮಾದಿಂದ ಅವರ ಜನಪ್ರಿಯತೆ ಹೆಚ್ಚಿತ್ತು. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಜಯಂತ್ ಸಾವರ್ಕರ್ ಅವರು ಮರಾಠಿ, ಹಿಂದಿ, ರಂಗಭೂಮಿ ಹಾಗೂ ದೂರದರ್ಶನದಲ್ಲಿ ನಟಿಸಿದ್ದಾರೆ. ಅವರು ಆರು ದಶಕಗಳು ನಟನೆಯಲ್ಲಿ ತೊಡಗಿಕೊಂಡಿದ್ದರು. ‘ಹರಿ ಓಂ ವಿಠಲ’, ‘ಗಡ್ಬಡ್​ ಗೋಂಧಾಲ್’, ‘66 ಸದಾಶಿವ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಿಂದಿಯಲ್ಲಿ 2011ರಲ್ಲಿ ರಿಲೀಸ್ ಆದ ‘ಸಿಂಗಂ’ ಸಿನಿಮಾದಲ್ಲಿ ಕಮಲಾಕಾಂತ್ ಭೋಸ್ಲೆ ಪಾತ್ರ ಮಾಡಿದ್ದರು. ನಾಯಕಿ ಕಾಜಲ್ ​ಅಗರ್​ವಾಲ್ ಅವರ ಅಜ್ಜನ ಪಾತ್ರ ಇದಾಗಿತ್ತು. ‘ರಾಕಿ ಹ್ಯಾಂಡ್ಸಮ್​’, ‘ವಾಸ್ತವ್​: ದಿ ರಿಯಾಲಿಟಿ’ ಮೊದಲಾದ ಚಿತ್ರಗಳಲ್ಲಿ ಜಯಂತ್ ಬಣ್ಣ ಹಚ್ಚಿದ್ದಾರೆ. ಹಿಂದಿಯಲ್ಲಿ ಇನ್ನೂ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: ‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

‘ತಂದೆಯವರಿಗೆ 15 ದಿನಗಳ ಹಿಂದೆ ಕಡಿಮೆ ರಕ್ತದೊತ್ತಡ ಉಂಟಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದೆವು. ಆದರೆ, ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗಿಲ್ಲ’ ಎಂದು ಕೌಸ್ತುಭ್ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಜಯಂತ್ ಅವರಿಗೆ ಪತ್ನಿ, ಓರ್ವ ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಇಂದು (ಜುಲೈ 25)  ಅವರ ಅಂತ್ಯಸಂಸ್ಕಾರ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:09 am, Tue, 25 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ