Mrunal Thakur: ಹೆಚ್ಚಾಯ್ತು ‘ಸೀತಾ ರಾಮಂ’ ನಟಿಯ ಸಂಬಳ; ಮೃಣಾಲ್​ ಠಾಕೂರ್​ಗೆ ಈಗ ಸಿಗುತ್ತಿರುವ ಹಣ ಎಷ್ಟು?

Mrunal Thakur Remuneration: ಮೃಣಾಲ್​ ಠಾಕೂರ್​ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಕೇಳಿದಷ್ಟು ಸಂಭಾವನೆ ನೀಡಲು ಸಿದ್ಧವಾಗಿದ್ದಾರೆ.

Mrunal Thakur: ಹೆಚ್ಚಾಯ್ತು ‘ಸೀತಾ ರಾಮಂ’ ನಟಿಯ ಸಂಬಳ; ಮೃಣಾಲ್​ ಠಾಕೂರ್​ಗೆ ಈಗ ಸಿಗುತ್ತಿರುವ ಹಣ ಎಷ್ಟು?
ಮೃಣಾಲ್​ ಠಾಕೂರ್​, ದುಲ್ಕರ್​ ಸಲ್ಮಾನ್​
Follow us
|

Updated on: Jul 09, 2023 | 11:45 AM

ನಟಿ ಮೃಣಾಲ್​ ಠಾಕೂರ್​ (Mrunal Thakur) ಅವರು ಬಾಲಿವುಡ್​ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಖತ್​ ಫೇಮಸ್​ ಆಗಿದ್ದಾರೆ. ‘ಸೂಪರ್​ 30’, ‘ಸೀತಾ ರಾಮಂ’ (Sita Ramam) ಮುಂತಾದ ಸಿನಿಮಾಗಳಿಂದ ಅವರು ದೇಶಾದ್ಯಂತ ಮನೆ ಮಾತಾಗಿದ್ದಾರೆ. ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆಯಾದ ‘ಲಸ್ಟ್​ ಸ್ಟೋರೀಸ್​ 2’ ಚಿತ್ರ ಕೂಡ ಅವರಿಗೆ ಜನಪ್ರಿಯತೆ ತಂದುಕೊಟ್ಟಿದೆ. ಇದರ ಪರಿಣಾಮವಾಗಿ ಅವರೀಗ ಸಂಭಾವನೆ (Mrunal Thakur Remuneration) ಹೆಚ್ಚು ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಮೃಣಾಲ್​ ಠಾಕೂರ್​ ಅವರು ಪ್ರತಿ ಸಿನಿಮಾಗೆ ಮೂರೂವರೆ ಕೋಟಿ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಡಿಮ್ಯಾಂಡ್​ ಹೆಚ್ಚಾಗುತ್ತಿದೆ.

2022ರಲ್ಲಿ ‘ಸೀತಾ ರಾಮಂ’ ಸಿನಿಮಾ ಬಿಡುಗಡೆ ಆಯಿತು. ತೆಲುಗು ಚಿತ್ರರಂಗದಲ್ಲಿ ಮೃಣಾಲ್​ ಠಾಕೂರ್​ ಅವರಿಗೆ ದೊಡ್ಡ ಬ್ರೇಕ್​ ನೀಡಿದ ಸಿನಿಮಾ ಅದು. ಆ ಚಿತ್ರದಲ್ಲಿ ಅವರು ದುಲ್ಖರ್​ ಸಲ್ಮಾನ್​ಗೆ ಜೋಡಿಯಾಗಿ ನಟಿಸಿದರು. ಅವರು ಮಾಡಿದ ಸೀತಾ ಮಹಾಲಕ್ಷ್ಮಿ ಅಲಿಯಾಸ್​ ಪ್ರಿನ್ಸೆಸ್​ ನೂರ್​ ಜಹಾನ್​ ಪಾತ್ರ ಅಭಿಮಾನಿಗಳಿಗೆ ಸಖತ್​ ಇಷ್ಟವಾಯ್ತು. ಈಗ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಕೇಳಿದಷ್ಟು ಸಂಭಾವನೆ ನೀಡಲು ಸಿದ್ಧವಾಗಿದ್ದಾರೆ.

ಇದನ್ನೂ ಓದಿ: ‘ನ್ಯಾಷನಲ್​ ಕ್ರಶ್​’ ಬಿರುದು ಪಡೆದುಕೊಂಡ ಮೃಣಾಲ್​ ಠಾಕೂರ್​; ಈಗ ರಶ್ಮಿಕಾ ಮಂದಣ್ಣ ಪಾಡು ಏನು?

ಮೂಲಗಳ ಪ್ರಕಾರ, ‘ಸೀತಾ ರಾಮಂ’ ಚಿತ್ರದಲ್ಲಿನ ನಟನೆಗಾಗಿ ಮೃಣಾಲ್​ ಠಾಕೂರ್​ ಅವರಿಗೆ ಸಿಕ್ಕಿದ್ದು 85 ಲಕ್ಷ ರೂಪಾಯಿ ಸಂಭಾವನೆ. ಆದರೆ ಆ ಸಿನಿಮಾ ಸಕ್ಸಸ್​ ಬಳಿಕ ಅವರು ಸಂಭಾವನೆ ಹೆಚ್ಚಿಸಿಕೊಂಡರು. ಈಗ ನಾನಿ ಮತ್ತು ವಿಜಯ್​ ದೇವರಕೊಂಡ ಜೊತೆಗೆ ತಲಾ ಒಂದು ಸಿನಿಮಾ ಮಾಡುತ್ತಿದ್ದಾರೆ ಮೃಣಾಲ್​ ಠಾಕೂರ್​. ಅಚ್ಚರಿ ಏನೆಂದರೆ, ವಿಜಯ್​ ದೇವರಕೊಂಡ ಜೊತೆಗಿನ ಚಿತ್ರಕ್ಕಾಗಿ ಅವರು 3.5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

ಮೃಣಾಲ್​ ಠಾಕೂರ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಮರಾಠಿ ಸಿನಿಮಾಗಳ ಮೂಲಕ. ನಂತರ ಅವರು ಬಾಲಿವುಡ್​ಗೆ ಎಂಟ್ರಿ ಪಡೆದರು. ಈಗ ತೆಲುಗಿನಲ್ಲೂ ಮಿಂಚುತ್ತಿದ್ದಾರೆ. ಈ ನಡುವೆ ತಮಿಳು ಚಿತ್ರರಂಗದಿಂದಲೂ ಮೃಣಾಲ್​ ಠಾಕೂರ್​ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಆದರೆ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವರು ಅವಸರ ತೋರುತ್ತಿಲ್ಲ. ತಮಗೆ ಸರಿಹೊಂದುವಂತಹ ಚಿತ್ರಗಳಿಗೆ ಮಾತ್ರ ಅವರು ಸಹಿ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು