ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ

Sita Ramam teaser: ಈ ಚಿತ್ರವು ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಮೂಡಿಬರಲಿದ್ದು, ಚಿತ್ರದ ಟೀಸರ್​ ಅನ್ನು ನೋಡಿದರೆ ಮನಮುಟ್ಟುವ ಪ್ರಮಕಥೆಯನ್ನು ಹೊಂದಿರುವುದರಲ್ಲಿ ಅನುಮಾನವೇ ಇಲ್ಲ.

ದುಲ್ಖರ್ ಸಲ್ಮಾನ್-ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಂ ಚಿತ್ರದ ಟೀಸರ್ ಬಿಡುಗಡೆ
Dulquer Salmaan-Rashmika Mandanna
Follow us
| Updated By: ಝಾಹಿರ್ ಯೂಸುಫ್

Updated on: Jun 26, 2022 | 9:59 PM

ಸೌತ್ ಸಿನಿರಂಗದಲ್ಲಿ ಸೆನ್ಸೇಷನ್ ಸೃಷ್ಟಿಸಿರುವ ಮಾಲಿವುಡ್ ನಟ ದುಲ್ಖರ್ ಸಲ್ಮಾನ್ (Dulquer Salmaan) ಅಭಿನಯದ ಹೊಸ ಚಿತ್ರ ಸೀತಾ ರಾಮಂ (Sita Ramam teaser) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೋಧನ ಕಥೆ ಹೇಳಲಿರುವ ಈ ಚಿತ್ರದಲ್ಲಿ ದುಲ್ಖರ್ ಲೆಫ್ಟಿನೆಂಟ್ ರಾಮ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಸೀತಾ ಪಾತ್ರದಲ್ಲಿ ಮೃಣಾಲ್ ಠಾಕೂರ್ (Mrunal Thakur) ಅಭಿನಯಿಸಿದ್ದಾರೆ. ಇನ್ನು ಮತ್ತೊಂದು ಪ್ರಮುಖ ಪಾತ್ರದಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಕಾಣಿಸಿಕೊಂಡಿರುವುದು ವಿಶೇಷ. ಸೌತ್ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ಹನು ರಾಘವಪುಡಿ.

ಚಿತ್ರದ ಟೀಸರ್ ಮೂಲಕವೇ ರೋಮ್ಯಾಂಟಿಕ್ ಕಥೆಯನ್ನು ತಿಳಿಸುವ ಸೂಚನೆ ನೀಡಿರುವ ನಿರ್ದೇಶಕ ರಾಘವಪುಡಿ, ಸೀತಾ ರಾಮಂ ಚಿತ್ರವನ್ನು ಕಾಶ್ಮೀರ ಕಣಿವೆಯಲ್ಲಿ ಚಿತ್ರವನ್ನು ಚಿತ್ರೀಕರಿಸಿರುವುದು ವಿಶೇಷ. ಅದರಲ್ಲೂ ಪಿಎಸ್ ವಿನೋದ್ ಅವರ ಸಿನಿಮಾಟೋಗ್ರಾಫಿಯು ಪ್ರತಿ ಫ್ರೇಮ್​ನಲ್ಲೂ ಎದ್ದು ಕಾಣಿಸುತ್ತಿದೆ. ಇನ್ನು ಚಿತ್ರದಲ್ಲಿ ಯೋಧನ ನಿರೀಕ್ಷೆಗಳು, ಪ್ರೀತಿಯ ಹುಡುಕಾಟವನ್ನು ನಿರೀಕ್ಷಿಸಬಹುದು. ಇನ್ನು ಈ ಚಿತ್ರಕ್ಕೆ ಬಂಡವಾಳ ಹೂಡಿರುವುದು ಅಶ್ವಿನಿ ದತ್ ಮತ್ತು ಪ್ರಿಯಾಂಕಾ ದತ್.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಈ ಚಿತ್ರವು ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಮೂಡಿಬರಲಿದ್ದು, ಚಿತ್ರದ ಟೀಸರ್​ ಅನ್ನು ನೋಡಿದರೆ ಮನಮುಟ್ಟುವ ಪ್ರಮಕಥೆಯನ್ನು ಹೊಂದಿರುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು. ಈಗಾಗಲೇ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವು ಆಗಸ್ಟ್ 5 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?