AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು

Parasakthi movie: ಸೆನ್ಸಾರ್ ಮಂಡಳಿ ಸಮಸ್ಯೆಯಿಂದಾಗಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನದ ಕಲೆಕ್ಷನ್ ಉತ್ತಮವಾಗಿಯೇ ಇದೆ.

‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು
Parashakti
ಮಂಜುನಾಥ ಸಿ.
|

Updated on: Jan 11, 2026 | 4:50 PM

Share

ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 09ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್, ಜಯಂ ರವಿ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನದ ಕಲೆಕ್ಷನ್ ಉತ್ತಮವಾಗಿಯೇ ಇದೆ.

‘ಜನ ನಾಯಗನ್’ ಸಿನಿಮಾದ ಸ್ಪರ್ಧೆಯನ್ನು ಅದೃಷ್ಟವಶಾತ್ ತಪ್ಪಿಸಿಕೊಂಡಿರುವ ‘ಪರಾಶಕ್ತಿ’ ಸಿನಿಮಾಕ್ಕೆ ತಮಿಳುನಾಡು ಮಾತ್ರವೇ ಅಲ್ಲದೆ, ಕರ್ನಾಟಕ, ಕೇರಳದಲ್ಲಿಯೂ ಚಿತ್ರಮಂದಿರಗಳು ಸಿಕ್ಕಿದ್ದು, ಪ್ರೇಕ್ಷಕರು ಸಹ ಆಸಕ್ತಿವಹಿಸಿ ನೋಡಿದ್ದಾರೆ. ಇದೇ ಕಾರಣಕ್ಕೆ ‘ಪರಾಶಕ್ತಿ’ ಸಿನಿಮಾದ ಮೊದಲ ದಿನದ ಕಲೆಕ್ಷನ್ 14 ಕೋಟಿಗೂ ಹೆಚ್ಚಾಗಿದೆ. ಇನ್ನು ವಿಶ್ವ ಬಾಕ್ಸ್ ಆಫೀಸ್​ ಕಲೆಕ್ಷನ್ ಮೊದಲ ದಿನ 24 ಕೋಟಿಗೂ ಹೆಚ್ಚಾಗಿದೆ. ಶಿವಕಾರ್ತಿಕೇಯನ್ ಸಿನಿಮಾ ಒಂದು ಮೊದಲ ದಿನ ಇಷ್ಟು ದೊಡ್ಡ ಗಳಿಕೆ ಮಾಡಿರುವುದು ಇದೇ ಮೊದಲು.

ಇದನ್ನೂ ಓದಿ:ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು?

‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಿದ್ದಿದ್ದರೆ ‘ಪರಾಶಕ್ತಿ’ ಸಿನಿಮಾದ ಕಲೆಕ್ಷನ್ ಇಷ್ಟು ದೊಡ್ಡದಾಗಿರುತ್ತಿರುತ್ತಿರಲಿಲ್ಲ ಎಂಬುದು ಖಾತ್ರಿ. ಆದರೆ ಚಿತ್ರತಂಡದ ಅದೃಷ್ಟವೋ, ಉದ್ದೇಶಪೂರ್ವಕ ಯೋಜನೆಯೋ ಒಟ್ಟಾರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಿಲ್ಲ. ಅದರ ಲಾಭ ‘ಪರಾಶಕ್ತಿ’ ಸಿನಿಮಾಕ್ಕೆ ಆಗಿದೆ. ಮೊದಲ ದಿನ ಭಾರತ ಸೇರಿದಂತೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 24 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ.

‘ಪರಾಶಕ್ತಿ’ ಸಿನಿಮಾ ರಾಜಕೀಯ ವಿಷಯ ವಸ್ತುವುಳ್ಳ ಸಿನಿಮಾ ಆಗಿದೆ. ತಮಿಳುನಾಡಿನಲ್ಲಿ ದಶಕಗಳ ಹಿಂದೆ ನಡೆದ ಹಿಂದಿ ವಿರುದ್ಧ ಹೋರಾಟದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಶಿವಕಾರ್ತಿಕೇಯನ್ ನಾಯಕ, ಶ್ರೀಲೀಲಾ ನಾಯಕಿ. ಜಯಂ ರವಿ ಇದೇ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ದಿನ ಸಿನಿಮಾ ನೋಡಿದ ಮಂದಿ ಮಿಶ್ರ ಪ್ರತಿಕ್ರಿಯೆಗಳನ್ನು ಸಿನಿಮಾ ಬಗ್ಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಚಿತ್ರಕತೆ ಇನ್ನಷ್ಟು ಗಟ್ಟಿಯಾಗಿ ಇರಬೇಕಿತ್ತು ಎಂದಿದ್ದಾರೆ. ಕೆಲವು ಉತ್ತರ ಭಾರತೀಯರು ಸಹ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದು, ‘ಪರಾಶಕ್ತಿ’ ಸಿನಿಮಾ, ಉತ್ತರ ಭಾರತದವರ ಬಗ್ಗೆ ದ್ವೇಷವನ್ನು ಪಸರಿಸುತ್ತಿದೆ ಎಂದಿದ್ದಾರೆ. ಏನೇ ಆಗಲಿ ಸಿನಿಮಾ ಮೊದಲ ದಿನ ಒಳ್ಳೆಯ ಗಳಿಕೆಯನ್ನು ಮಾಡಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!