AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sivan Death: ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ನಿಧನ; ಕಂಬನಿ ಮಿಡಿದ ಗಣ್ಯರು

Sivan: ಪತ್ರಿಕಾ ಛಾಯಾಗ್ರಾಹಕನಾಗಿ, ಸಿನಿಮಾಗಳ ಸ್ಟಿಲ್​ ಫೋಟೋಗ್ರಾಫರ್​ ಆಗಿ, ಸಿನಿಮಾ ಕ್ಯಾಮರಾಮ್ಯಾನ್​ ಆಗಿ, ನಿರ್ದೇಶಕನಾಗಿ ಶಿವನ್​ ಕೆಲಸ ಮಾಡಿದ್ದರು. ಯಾಗಂ, ಅಭಯಂ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.

Sivan Death: ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ನಿಧನ; ಕಂಬನಿ ಮಿಡಿದ ಗಣ್ಯರು
ಶಿವನ್​
ಮದನ್​ ಕುಮಾರ್​
| Edited By: |

Updated on: Jun 24, 2021 | 2:58 PM

Share

ಮಲಯಾಳಂ ಚಿತ್ರರಂಗದ ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ಅವರು ಗುರುವಾರ (ಜೂ.24) ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಶಿವನ್​ ನಿಧನದ ಸುದ್ದಿಯನ್ನು ಅವರ ಪುತ್ರ ಸಂಗೀತ್​ ಶಿವನ್​ ಖಚಿತಪಡಿಸಿದ್ದಾರೆ. ‘ನಮ್ಮ ತಂದೆ ಕೊನೆಯುಸಿರೆಳೆದರು ಎಂಬ ಸುದ್ದಿಯನ್ನು ತುಂಬ ನೋವಿನಿಂದ ನಿಮಗೆಲ್ಲ ತಿಳಿಸುತ್ತಿದ್ದೇನೆ. ಅವರೇ ನಮಗೆ ಸ್ಫೂರ್ತಿ ಮತ್ತು ಮಾದರಿ ಆಗಿದ್ದರು. ಪರಿಶ್ರಮ, ಬದ್ಧತೆ, ಶಿಸ್ತಿನಿಂದ ಅವರು ಎಲ್ಲವನ್ನೂ ಸಂಪಾದಿಸಿದ್ದರು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಸಂಗೀತ್​ ಶಿವನ್​ ಬರೆದುಕೊಂಡಿದ್ದಾರೆ.

‘ಮುಂದೆಯೂ ಕೂಡ ಅವರು ನಮಗೆ ದಾರಿ ತೋರಿಸುತ್ತಾರೆ. ಅವರಿಗೆ ನಾವು ಯಾವಾಗಲೂ ಋಣಿ ಆಗಿರುತ್ತೇನೆ. ಅವರು ನಮ್ಮ ಹೃದಯದಲ್ಲೇ ಇರುತ್ತಾರೆ. ಲವ್​ ಯೂ ಅಪ್ಪ. ಮೋಡ ಮತ್ತು ನಕ್ಷತ್ರಗಳ ಜೊತೆ ಇದ್ದುಕೊಂಡು ನೀವು ನಮ್ಮನ್ನು ನೋಡುತ್ತಿರುತ್ತೀರಿ ಎಂದು ನಾನು ನಂಬಿದ್ದೇನೆ. ಓಂ ಶಾಂತಿ’ ಎಂದು ಸಂಗೀತ್​ ಶಿವನ್​ ಪೋಸ್ಟ್​ ಮಾಡಿದ್ದಾರೆ.

ಪತ್ರಿಕಾ ಛಾಯಾಗ್ರಾಹಕನಾಗಿ, ಸಿನಿಮಾಗಳಿಗೆ ಸ್ಟಿಲ್​ ಫೋಟೋಗ್ರಾಫರ್​ ಆಗಿ, ಸಿನಿಮಾ ಕ್ಯಾಮರಾಮ್ಯಾನ್​ ಆಗಿ, ನಿರ್ದೇಶಕನಾಗಿ ಶಿವನ್​ ಕೆಲಸ ಮಾಡಿದ್ದರು. ಯಾಗಂ, ಅಭಯಂ, ಒರು ಯಾತ್ರ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು. ಶಿವನ್​ ಅವರ ಪುತ್ರರಾದ ಸಂತೋಷ್​, ಸಂಗೀತ್ ಹಾಗೂ ಸಂಜೀವ್​ ಅವರು ಕೂಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು (ಸರಿತಾ) ಶಿವನ್​ ಅಗಲಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​, ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿಯಾಳ್​, ಸ್ಪೀಕರ್ ಎಂ.ಬಿ. ರಾಜೇಶ್​ ಸೇರಿದಂತೆ ಅನೇಕರು ಶಿವನ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಶಿವನ್​ ಅವರು ತಿರುವನಂತಪುರಂನ ಮೊದಲ ಪ್ರೆಸ್​ ಫೋಟೋಗ್ರಾಫರ್​ ಆಗಿದ್ದರು. ಅವರು ಅನೇಕ ಐತಿಹಾಸಿಕ ಕ್ಷಣಗಳನ್ನು ಸೆರೆಹಿಡಿದಿದ್ದರು. ರಾಜ್ಯ ರಾಜಧಾನಿಯ ಸಾಂಸ್ಕೃತಿಕ ವಲಯದಲ್ಲಿ ಅವರು ತುಂಬ ಸಕ್ರಿಯರಾಗಿದ್ದರು’ ಎಂದು ರಾಜೇಶ್​ ಹೇಳಿದ್ದಾರೆ. ಚಿತ್ರರಂಗದ ಅನೇಕರು ಕೂಡ ಶಿವನ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

ನಿಧನರಾದ ಮೇಲೂ ಸಂಚಾರಿ ವಿಜಯ್​ಗೆ ಅಗೌರವ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಎಡವಟ್ಟು

Milkha Singh Death: ‘ನೀವು ಸದಾ ಜೀವಂತವಾಗಿರುತ್ತೀರಿ’; ಮಿಲ್ಖಾ ಸಿಂಗ್​ ನಿಧನಕ್ಕೆ ಫರ್ಹಾನ್​ ಅಖ್ತರ್​ ಸಂತಾಪ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್