AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sivan Death: ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ನಿಧನ; ಕಂಬನಿ ಮಿಡಿದ ಗಣ್ಯರು

Sivan: ಪತ್ರಿಕಾ ಛಾಯಾಗ್ರಾಹಕನಾಗಿ, ಸಿನಿಮಾಗಳ ಸ್ಟಿಲ್​ ಫೋಟೋಗ್ರಾಫರ್​ ಆಗಿ, ಸಿನಿಮಾ ಕ್ಯಾಮರಾಮ್ಯಾನ್​ ಆಗಿ, ನಿರ್ದೇಶಕನಾಗಿ ಶಿವನ್​ ಕೆಲಸ ಮಾಡಿದ್ದರು. ಯಾಗಂ, ಅಭಯಂ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.

Sivan Death: ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ನಿಧನ; ಕಂಬನಿ ಮಿಡಿದ ಗಣ್ಯರು
ಶಿವನ್​
ಮದನ್​ ಕುಮಾರ್​
| Edited By: |

Updated on: Jun 24, 2021 | 2:58 PM

Share

ಮಲಯಾಳಂ ಚಿತ್ರರಂಗದ ಹಿರಿಯ ಛಾಯಾಗ್ರಾಹಕ, ನಿರ್ದೇಶಕ ಶಿವನ್​ ಅವರು ಗುರುವಾರ (ಜೂ.24) ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಶಿವನ್​ ನಿಧನದ ಸುದ್ದಿಯನ್ನು ಅವರ ಪುತ್ರ ಸಂಗೀತ್​ ಶಿವನ್​ ಖಚಿತಪಡಿಸಿದ್ದಾರೆ. ‘ನಮ್ಮ ತಂದೆ ಕೊನೆಯುಸಿರೆಳೆದರು ಎಂಬ ಸುದ್ದಿಯನ್ನು ತುಂಬ ನೋವಿನಿಂದ ನಿಮಗೆಲ್ಲ ತಿಳಿಸುತ್ತಿದ್ದೇನೆ. ಅವರೇ ನಮಗೆ ಸ್ಫೂರ್ತಿ ಮತ್ತು ಮಾದರಿ ಆಗಿದ್ದರು. ಪರಿಶ್ರಮ, ಬದ್ಧತೆ, ಶಿಸ್ತಿನಿಂದ ಅವರು ಎಲ್ಲವನ್ನೂ ಸಂಪಾದಿಸಿದ್ದರು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಸಂಗೀತ್​ ಶಿವನ್​ ಬರೆದುಕೊಂಡಿದ್ದಾರೆ.

‘ಮುಂದೆಯೂ ಕೂಡ ಅವರು ನಮಗೆ ದಾರಿ ತೋರಿಸುತ್ತಾರೆ. ಅವರಿಗೆ ನಾವು ಯಾವಾಗಲೂ ಋಣಿ ಆಗಿರುತ್ತೇನೆ. ಅವರು ನಮ್ಮ ಹೃದಯದಲ್ಲೇ ಇರುತ್ತಾರೆ. ಲವ್​ ಯೂ ಅಪ್ಪ. ಮೋಡ ಮತ್ತು ನಕ್ಷತ್ರಗಳ ಜೊತೆ ಇದ್ದುಕೊಂಡು ನೀವು ನಮ್ಮನ್ನು ನೋಡುತ್ತಿರುತ್ತೀರಿ ಎಂದು ನಾನು ನಂಬಿದ್ದೇನೆ. ಓಂ ಶಾಂತಿ’ ಎಂದು ಸಂಗೀತ್​ ಶಿವನ್​ ಪೋಸ್ಟ್​ ಮಾಡಿದ್ದಾರೆ.

ಪತ್ರಿಕಾ ಛಾಯಾಗ್ರಾಹಕನಾಗಿ, ಸಿನಿಮಾಗಳಿಗೆ ಸ್ಟಿಲ್​ ಫೋಟೋಗ್ರಾಫರ್​ ಆಗಿ, ಸಿನಿಮಾ ಕ್ಯಾಮರಾಮ್ಯಾನ್​ ಆಗಿ, ನಿರ್ದೇಶಕನಾಗಿ ಶಿವನ್​ ಕೆಲಸ ಮಾಡಿದ್ದರು. ಯಾಗಂ, ಅಭಯಂ, ಒರು ಯಾತ್ರ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು. ಶಿವನ್​ ಅವರ ಪುತ್ರರಾದ ಸಂತೋಷ್​, ಸಂಗೀತ್ ಹಾಗೂ ಸಂಜೀವ್​ ಅವರು ಕೂಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು (ಸರಿತಾ) ಶಿವನ್​ ಅಗಲಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​, ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿಯಾಳ್​, ಸ್ಪೀಕರ್ ಎಂ.ಬಿ. ರಾಜೇಶ್​ ಸೇರಿದಂತೆ ಅನೇಕರು ಶಿವನ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಶಿವನ್​ ಅವರು ತಿರುವನಂತಪುರಂನ ಮೊದಲ ಪ್ರೆಸ್​ ಫೋಟೋಗ್ರಾಫರ್​ ಆಗಿದ್ದರು. ಅವರು ಅನೇಕ ಐತಿಹಾಸಿಕ ಕ್ಷಣಗಳನ್ನು ಸೆರೆಹಿಡಿದಿದ್ದರು. ರಾಜ್ಯ ರಾಜಧಾನಿಯ ಸಾಂಸ್ಕೃತಿಕ ವಲಯದಲ್ಲಿ ಅವರು ತುಂಬ ಸಕ್ರಿಯರಾಗಿದ್ದರು’ ಎಂದು ರಾಜೇಶ್​ ಹೇಳಿದ್ದಾರೆ. ಚಿತ್ರರಂಗದ ಅನೇಕರು ಕೂಡ ಶಿವನ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

ನಿಧನರಾದ ಮೇಲೂ ಸಂಚಾರಿ ವಿಜಯ್​ಗೆ ಅಗೌರವ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಎಡವಟ್ಟು

Milkha Singh Death: ‘ನೀವು ಸದಾ ಜೀವಂತವಾಗಿರುತ್ತೀರಿ’; ಮಿಲ್ಖಾ ಸಿಂಗ್​ ನಿಧನಕ್ಕೆ ಫರ್ಹಾನ್​ ಅಖ್ತರ್​ ಸಂತಾಪ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು