AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​
ಟೈಗರ್​​ ಶ್ರಾಫ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 07, 2021 | 2:55 PM

Share

ಟೈಗರ್ ಶ್ರಾಫ್​ ಸಿನಿಮಾ ಎಂದರೆ ಅಲ್ಲಿ ಆ್ಯಕ್ಷನ್​ ದೃಶ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಮೈನವಿರೇಳಿಸುವ ದೃಶ್ಯಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಈಗ ಅವರ ನಟನೆಯ ‘ಹೀರೋಪಂತಿ 2’ ಸಿನಿಮಾ ಬಗ್ಗೆ ಅಚ್ಚರಿಯ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳನ್ನು ನಿರ್ದೇಶಿಸಲು ಹಾಲಿವುಡ್​ ಸ್ಟಂಟ್​ ಡೈರೆಕ್ಟರ್​ ಜತೆಗೆ ಮಾತುಕತೆ ನಡೆಯುತ್ತಿದೆಯಂತೆ.

‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಎರಡನೇ ಭಾಗದ ಶೂಟಿಂಗ್​ ಈಗ ರಷ್ಯಾದಲ್ಲಿ ನಡೆಯಲಿದೆ ಎನ್ನಲಾಗಿದೆ.

ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ. ಸದ್ಯ, ಲೊಕೇಷನ್​ ಹುಡುಕುವ ಕಾರ್ಯ ನಡೆಯುತ್ತಿದೆ. ಸಾಕಷ್ಟು ಸ್ಟಂಟ್​ ಡೈರೆಕ್ಟರ್​ಗಳ ಜತೆಯೂ ಮಾತುಕತೆ ನಡೆಯುತ್ತಿದೆಯಂತೆ. 2012ರಲ್ಲಿ ತೆರೆಗೆ ಬಂದ ಜೇಮ್ಸ್​ ಬಾಂಡ್​ ಸರಣಿಯ ‘ಸ್ಕೈಫಾಲ್’​ ಸಿನಿಮಾಗೆ ಆ್ಯಕ್ಷನ್​ ದೃಶ್ಯಗಳನ್ನು ನಿರ್ದೇಶನ ಮಾಡಿದ್ದ ಮಾರ್ಟಿನೋ​ ಇವಾನೋ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ದೇಶದ ಹಲವು ಕಡೆಗಳಲ್ಲಿ ಲಾಕ್​ಡೌನ್ ಜಾರಿ ಮಾಡಲಾಗಿದೆ. ಜನಸಾಮಾನ್ಯರಿಗೆ ಮಾತ್ರವಲ್ಲದೆ ಸೆಲೆಬ್ರಿಟಿಗಳಿಗೂ ಈ ನಿಯಮಗಳು ಅನ್ವಯ ಆಗುತ್ತವೆ. ಅನವಶ್ಯಕವಾಗಿ ಹೊರಗಡೆ ಸುತ್ತಾಡಿದರೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳುತ್ತಾರೆ. ಸೆಲೆಬ್ರಿಟಿಗಳು ಕೂಡ ಲಾಕ್​ಡೌನ್​ ನಿಯಮಗಳಿಗೆ ಬದ್ಧರಾಗಿರಬೇಕು. ಆದರೆ ಕೆಲವು ಸ್ಟಾರ್​ಗಳ ತಮ್ಮ ಮನ ಬಂದಂತೆ ತಿರುಗಾಡುತ್ತ, ಪೊಲೀಸರಿಂದ ಕೇಸ್​ ಜಡಿಸಿಕೊಂಡಿದ್ದಾರೆ. ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್​ಗೆ ಹೀಗೆಯೇ ಆಗಿತ್ತು. ಬಾಂದ್ರಾ ಸುತ್ತಮುತ್ತ ಟೈಗರ್​ ಶ್ರಾಫ್​ ಮತ್ತು ದಿಶಾ ಪಟಾನಿ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ