AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​
ಟೈಗರ್​​ ಶ್ರಾಫ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 07, 2021 | 2:55 PM

Share

ಟೈಗರ್ ಶ್ರಾಫ್​ ಸಿನಿಮಾ ಎಂದರೆ ಅಲ್ಲಿ ಆ್ಯಕ್ಷನ್​ ದೃಶ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಮೈನವಿರೇಳಿಸುವ ದೃಶ್ಯಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಈಗ ಅವರ ನಟನೆಯ ‘ಹೀರೋಪಂತಿ 2’ ಸಿನಿಮಾ ಬಗ್ಗೆ ಅಚ್ಚರಿಯ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳನ್ನು ನಿರ್ದೇಶಿಸಲು ಹಾಲಿವುಡ್​ ಸ್ಟಂಟ್​ ಡೈರೆಕ್ಟರ್​ ಜತೆಗೆ ಮಾತುಕತೆ ನಡೆಯುತ್ತಿದೆಯಂತೆ.

‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಎರಡನೇ ಭಾಗದ ಶೂಟಿಂಗ್​ ಈಗ ರಷ್ಯಾದಲ್ಲಿ ನಡೆಯಲಿದೆ ಎನ್ನಲಾಗಿದೆ.

ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ. ಸದ್ಯ, ಲೊಕೇಷನ್​ ಹುಡುಕುವ ಕಾರ್ಯ ನಡೆಯುತ್ತಿದೆ. ಸಾಕಷ್ಟು ಸ್ಟಂಟ್​ ಡೈರೆಕ್ಟರ್​ಗಳ ಜತೆಯೂ ಮಾತುಕತೆ ನಡೆಯುತ್ತಿದೆಯಂತೆ. 2012ರಲ್ಲಿ ತೆರೆಗೆ ಬಂದ ಜೇಮ್ಸ್​ ಬಾಂಡ್​ ಸರಣಿಯ ‘ಸ್ಕೈಫಾಲ್’​ ಸಿನಿಮಾಗೆ ಆ್ಯಕ್ಷನ್​ ದೃಶ್ಯಗಳನ್ನು ನಿರ್ದೇಶನ ಮಾಡಿದ್ದ ಮಾರ್ಟಿನೋ​ ಇವಾನೋ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ದೇಶದ ಹಲವು ಕಡೆಗಳಲ್ಲಿ ಲಾಕ್​ಡೌನ್ ಜಾರಿ ಮಾಡಲಾಗಿದೆ. ಜನಸಾಮಾನ್ಯರಿಗೆ ಮಾತ್ರವಲ್ಲದೆ ಸೆಲೆಬ್ರಿಟಿಗಳಿಗೂ ಈ ನಿಯಮಗಳು ಅನ್ವಯ ಆಗುತ್ತವೆ. ಅನವಶ್ಯಕವಾಗಿ ಹೊರಗಡೆ ಸುತ್ತಾಡಿದರೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳುತ್ತಾರೆ. ಸೆಲೆಬ್ರಿಟಿಗಳು ಕೂಡ ಲಾಕ್​ಡೌನ್​ ನಿಯಮಗಳಿಗೆ ಬದ್ಧರಾಗಿರಬೇಕು. ಆದರೆ ಕೆಲವು ಸ್ಟಾರ್​ಗಳ ತಮ್ಮ ಮನ ಬಂದಂತೆ ತಿರುಗಾಡುತ್ತ, ಪೊಲೀಸರಿಂದ ಕೇಸ್​ ಜಡಿಸಿಕೊಂಡಿದ್ದಾರೆ. ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್​ಗೆ ಹೀಗೆಯೇ ಆಗಿತ್ತು. ಬಾಂದ್ರಾ ಸುತ್ತಮುತ್ತ ಟೈಗರ್​ ಶ್ರಾಫ್​ ಮತ್ತು ದಿಶಾ ಪಟಾನಿ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ