Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್-ಎಸ್​ಎಂ ಕೃಷ್ಣ ಮಧ್ಯೆ ಆಗಿತ್ತು ಒಪ್ಪಂದ; ಅದನ್ನು ಮೀರಿದಾಗ ನಡೆದಿತ್ತು ಅಪಹರಣ

ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದರು. ಅವರಿಗೆ ವಯೋಸಹಜ ಕಾಯಿಲೆ ಇತ್ತು. ಈ ಸಂದರ್ಭದಲ್ಲಿ ಅವರ ಅಧಿಕಾರದ ಅವಧಿಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕೃಷ್ಣ ಅವರು ರಾಜ್​ಕುಮಾರ್ ಅಪಹರಣದ ಬಗ್ಗೆ ಮಾತನಾಡಿದ್ದರು.

ರಾಜ್​ಕುಮಾರ್-ಎಸ್​ಎಂ ಕೃಷ್ಣ ಮಧ್ಯೆ ಆಗಿತ್ತು ಒಪ್ಪಂದ; ಅದನ್ನು ಮೀರಿದಾಗ ನಡೆದಿತ್ತು ಅಪಹರಣ
ರಾಜ್​ಕುಮಾರ್-ಕೃಷ್ಣ
Follow us
ರಾಜೇಶ್ ದುಗ್ಗುಮನೆ
|

Updated on: Dec 10, 2024 | 7:28 AM

ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್​ಎಂ ಕೃಷ್ಣ ಅವರ ಮುಖ್ಯಮಂತ್ರಿ ಅವಧಿ ಎಲ್ಲರಿಗೂ ನೆನಪಿನಲ್ಲಿ ಇರುವಂಥದ್ದು. ಅದಕ್ಕೆ ಕಾರಣ ಅವರು ಎದುರಿಸಿದ ಚಾಲೆಂಜ್​. ವರನಟ ಡಾ. ರಾಜ್​ಕುಮಾರ್ ಅವರು ಅಪಹರಣ ಆಗಿದ್ದು ಕೃಷ್ಣ ಅವರ ಅಧಿಕಾರ ಅವಧಿಯಲ್ಲೇ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮರು ವರ್ಷವೇ ವೀರಪ್ಪನ್ ಕಡೆಯಿಂದ ಅಣ್ಣಾವ್ರು ಕಿಡ್ನ್ಯಾಪ್ ಆದರು. ವೀರಪ್ಪನ್ 108 ದಿನಗಳ ಕಾಲ ಅಣ್ಣಾವ್ರನ್ನು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ. ಆ ದಿನಗಳ ಬಗ್ಗೆ ಈಗಲೂ ಚರ್ಚೆಗಳು ಆಗುತ್ತವೆ. ರಾಜ್​ಕುಮಾರ್ ಅವರಿಗೂ ಕರ್ನಾಟಕ ಸರ್ಕಾರಕ್ಕೂ ಒಂದು ಒಪ್ಪಂದ ಆಗಿತ್ತು. ಆದರೆ, ಇದನ್ನು ಅಣ್ಣಾವ್ರು ಮೀರಿದಾಗ ಎಡವಟ್ಟು ಸಂಭವಿಸಿತ್ತು.

ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದರು. ಅವರಿಗೆ ವಯೋಸಹಜ ಕಾಯಿಲೆ ಇತ್ತು. ಈ ಸಂದರ್ಭದಲ್ಲಿ ಅವರ ಅಧಿಕಾರದ ಅವಧಿಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕೃಷ್ಣ ಅವರು ರಾಜ್​ಕುಮಾರ್ ಅಪಹರಣದ ಬಗ್ಗೆ ಮಾತನಾಡಿದ್ದರು. ರಾಜ್​ಕುಮಾರ್​ಗೆ ಕೊಟ್ಟ ಎಚ್ಚರಿಕೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು.

ರಾಜ್​ಕುಮಾರ್ ಅವರಿಗೆ ವೀರಪ್ಪನ್ ಕಡೆಯಿಂದ ತೊಂದರೆ ಇದೆ ಎಂಬ ಸೂಚನೆ ರಾಜ್ಯ ಸರ್ಕಾರಕ್ಕೆ ಮೊದಲೇ ಇತ್ತು. ಈ ಕಾರಣದಿಂದಲೇ ರಾಜ್​ಕುಮಾರ್ ಜೊತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಗಾಜನೂರಿನ ಭಾಗಕ್ಕೆ ತೆರಳೋದಾದರೆ ರಾಜ್ಯ ಸರ್ಕಾರಕ್ಕೆ ಮೊದಲೇ ತಿಳಿಸಬೇಕು ಎಂದು ಹೇಳಿತ್ತು. ಇದಕ್ಕೆ ರಾಜ್​ಕುಮಾರ್ ಕೂಡ ಒಪ್ಪಿದ್ದರು.

ಇದನ್ನೂ ಓದಿ: ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ

ಪ್ರತಿ ಬಾರಿಯೂ ಗಾಜನೂರಿಗೆ ತೆರಳುವಾಗ ರಾಜ್​ಕುಮಾರ್ ಅವರು ಸರ್ಕಾರಕ್ಕೆ ತಿಳಿಸುತ್ತಿದ್ದರು. ಆಗ ಅಣ್ಣಾವ್ರಿಗೆ ಸೂಕ್ತ ಪೊಲೀಸ್ ಬಧ್ರತೆಯನ್ನು ಸರ್ಕಾರ ಒದಗಿಸುತ್ತಿತ್ತು. ಆದರೆ, ಅಂದು ಮಾತ್ರ ಅವರು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ. ನೇರವಾಗಿ ಗಾಜನೂರಿಗೆ ತೆರಳಿದರು. ಈ ವೇಳೆ ವೀರಪ್ಪನ್​ ಕಡೆಯವರು ಬಂದು ರಾಜ್​ಕುಮಾರ್​ನ ಕರೆದುಕೊಂಡು ಹೋದರು. ಇದು ಸರ್ಕಾರಕ್ಕೆ ಹಾಗೂ ಅಣ್ಣಾವ್ರ ಕುಟುಂಬಕ್ಕೆ ದೊಡ್ಡ ಆಘಾತ ನೀಡಿತ್ತು. ಆ ಸಂದರ್ಭದಲ್ಲಿ ರಾಜ್ಯದಲ್ಲಿ ಥಿಯೇಟರ್​ಗಳು ಮುಚ್ಚಿದ್ದವು. 108 ದಿನಗಳ ಬಳಿಕ ಅವರನ್ನು ಮರಳಿ ಕರೆ ತರಲಾಯಿತು. ಈ ವೇಳೆ ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ