AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿತೆರೆಗೆ ಬರಲಿರುವ ಸ್ಮೈಲ್ ಗುರು, ಹಿರಿಯ ನಿರ್ದೇಶಕ ಮಹೇಶ್ ಬಾಬು ಆಕ್ಷನ್-ಕಟ್

ಕಿರುತೆರೆಯಿಂದ ಹಿರಿತೆರೆಗೆ ಬಂದು ಹಲವರು ಸ್ಟಾರ್​ಗಳಾಗಿದ್ದಾರೆ. ಇದೀಗ ಮತ್ತೊಬ್ಬ ಕಿರುತೆರೆ ನಟ ಹಿರಿತೆರೆಗೆ ಬರಲು ಸಜ್ಜಾಗಿದ್ದಾರೆ. ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ನಟಿಸಿರುವ ಸ್ಮೈಲ್ ಗುರು ರಕ್ಷಿತ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಅವರ ಮೊದಲ ಸಿನಿಮಾವನ್ನು ಅನುಭವಿ ನಿರ್ದೇಶಕ ಮಹೇಶ್ ಬಾಬು ನಿರ್ದೇಶಿಸುತ್ತಿದ್ದಾರೆ.

ಹಿರಿತೆರೆಗೆ ಬರಲಿರುವ ಸ್ಮೈಲ್ ಗುರು, ಹಿರಿಯ ನಿರ್ದೇಶಕ ಮಹೇಶ್ ಬಾಬು ಆಕ್ಷನ್-ಕಟ್
ಮಂಜುನಾಥ ಸಿ.
|

Updated on: May 25, 2024 | 10:34 PM

Share

ಕಿರುತೆರೆಯಿಂದ (Srial) ಹಿರಿತೆರೆಗೆ ಬಂದು ಒಳ್ಳೆಯ ನಟರಾಗಿ, ಸ್ಟಾರ್​ಗಳಾಗಿ ಗುರುತಿಸಿಕೊಂಡಿರುವ ಹಲವು ನಟರಿದ್ದಾರೆ. ಯಶ್, ಗೋಲ್ಡನ್ ಸ್ಟಾರ್ ಗಣೇಶ್, ರಾಧಿಕಾ ಪಂಡಿತ್, ಅಚ್ಯುತ್ ಕುಮಾರ್ ಹೀಗೆ ಪಟ್ಟಿ ಉದ್ದವಾಗುತ್ತಾ ಹೋಗುತ್ತದೆ. ಇದೀಗ ಮತ್ತೊಬ್ಬ ಕಿರುತೆರೆ ಸೆಲೆಬ್ರಿಟಿ ಹಿರಿತೆರೆಗೆ ಬಡ್ತಿ ಪಡೆಯಲು ಸಜ್ಜಾಗಿದ್ದಾರೆ. ಅವರಿಗೆ ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ಮಹೇಶ್ ಬಾಬು ಬೆಂಬಲ ಹಾಗೂ ಮಾರ್ಗದರ್ಶನ ದೊರೆಯುತ್ತಿದೆ.

ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಸ್ಮೈಲ್ ಗುರು ರಕ್ಷಿತ್ ಈಗ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ಸ್ಮೈಲ್ ಗುರು ರಕ್ಷಿತ್ ಅವರ ಮೊದಲ ಸಿನಿಮಾಕ್ಕೆ ಮಹೇಶ್ ಬಾಬು ನಿರ್ದೇಶನ ಮಾಡಲಿದ್ದಾರೆ. ಕನ್ನಡ ಚಿತ್ರರಂಗಕ್ಕೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಹೊಸ ನಟ ರಕ್ಷಿತ್​ಗೆ ನಿರ್ದೇಶನ ಮಾಡುತ್ತಿರುವುದು ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಈ ಸಿನಿಮಾ ಮೂಲಕ ಎ ಕ್ಲಾಸ್ ರಿಯಲ್ ಎಟರ್ಸ್ಸ್ ಸಂಸ್ಥಾಪರಾಗಿರುವ ಅನುರಾಗ್ ಆರ್ ಹಾಗೂ ಮಿಥುನ್ ಅವರುಗಳು ನಿರ್ಮಾಪಕರಾಗುತ್ತಿದ್ದಾರೆ. ಇವರಿಗೂ ಇದು ನಿರ್ಮಾಪಕರಾಗಿ ಮೊದಲ ಸಿನಿಮಾ.

ಇದನ್ನೂ ಓದಿ:ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ

ಈ ಸಿನಿಮಾದ ಮೂಲಕ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ನಾಯಕಿಯಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ಸಿನಿಮಾನಲ್ಲಿ ಮತ್ತೊಬ್ಬ ನಾಯಕಿ ಸಹ ಇರಲಿದ್ದು, ಅವರ ಪರಿಚಯವನ್ನು ಶೀಘ್ರವೇ ಚಿತ್ರತಂಡ ಮಾಡಲಿದೆ. ಮಹೇಶ್ ಬಾಬು ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಚೊಚ್ಚಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ರಕ್ಷಿತ್ ಅದಕ್ಕೆ ಬೇಕಾಗಿರೋ ತಯಾರಿಯನ್ನು ಮಾಡಿಕೊಂಡಿದ್ದಾರೆ. ಸಿನಿಮಾದ ಹೆಸರನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಜೂನ್ 15ರಿಂದ ಶೂಟಿಂಗ್ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಸಿನಿಮಾದ ನಿರ್ಮಾಪಕರಾದ ಅನುರಾಗ್ ಆರ್ ಮೂಲತಃ ಬೆಂಗಳೂರಿನವರೇ. ಅವರಿಗೆ ಸಿನಿಮಾ ಮೇಲಿನ ಒಲವು ಅವರನ್ನು ಚಿತ್ರರಂಗಕ್ಕೆ ಕರೆದುಕೊಂಡು ಬಂದಿದೆ. ಸದಭಿರುಚಿಯ ಸಿನಿಮಾ ಕೊಡಬೇಕೆಂಬ ಕಾರಣಕ್ಕೆ ಅನುಭವಿ ನಿರ್ದೇಶಕ ಮಹೇಶ್ ಬಾಬುವರಂತಹ ದಿಗ್ಗಜ ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ. ಇನ್ನು ಸಿನಿಮಾದ ಮತ್ತೊಬ್ಬ ನಿರ್ಮಾಪಕ ಸ್ಟ್ಯಾಂಡಿ ಮೇಕರ್ಸ್ಸ್ ಎಂಎಂಎಂ ಗ್ರೂಪ್ಸ್ ನ ಒಡೆಯ ಮಿಥುನ್ ಕೆ.ಎಸ್ ಸಹ ಸಿನಿಮಾ ಪ್ರೇಮಿಯಾಗಿದ್ದು, ಎ ಕ್ಲಾಸ್ ಸಿನಿ ಫಿಲ್ಮಂಸ್ ಹಾಗೂ ಎಂಎಂಎಂ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಮಿಥುನ್​ಗೆ ಚಿತ್ರರಂಗ ಹೊಸದಲ್ಲಿ, ಕೆಲವಾರು ಸಿನಿಮಾಗಳಿಗೆ ಅವರು ತಂತ್ರಜ್ಞರಾಗಿ ದುಡಿದಿದ್ದಾರೆ. ಈ ಸಿನಿಮಾ ಮೂಲಕ ಅವರು ನಿರ್ಮಾಪಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?