Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿತೆರೆಗೆ ಬರಲಿರುವ ಸ್ಮೈಲ್ ಗುರು, ಹಿರಿಯ ನಿರ್ದೇಶಕ ಮಹೇಶ್ ಬಾಬು ಆಕ್ಷನ್-ಕಟ್

ಕಿರುತೆರೆಯಿಂದ ಹಿರಿತೆರೆಗೆ ಬಂದು ಹಲವರು ಸ್ಟಾರ್​ಗಳಾಗಿದ್ದಾರೆ. ಇದೀಗ ಮತ್ತೊಬ್ಬ ಕಿರುತೆರೆ ನಟ ಹಿರಿತೆರೆಗೆ ಬರಲು ಸಜ್ಜಾಗಿದ್ದಾರೆ. ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ನಟಿಸಿರುವ ಸ್ಮೈಲ್ ಗುರು ರಕ್ಷಿತ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಅವರ ಮೊದಲ ಸಿನಿಮಾವನ್ನು ಅನುಭವಿ ನಿರ್ದೇಶಕ ಮಹೇಶ್ ಬಾಬು ನಿರ್ದೇಶಿಸುತ್ತಿದ್ದಾರೆ.

ಹಿರಿತೆರೆಗೆ ಬರಲಿರುವ ಸ್ಮೈಲ್ ಗುರು, ಹಿರಿಯ ನಿರ್ದೇಶಕ ಮಹೇಶ್ ಬಾಬು ಆಕ್ಷನ್-ಕಟ್
Follow us
ಮಂಜುನಾಥ ಸಿ.
|

Updated on: May 25, 2024 | 10:34 PM

ಕಿರುತೆರೆಯಿಂದ (Srial) ಹಿರಿತೆರೆಗೆ ಬಂದು ಒಳ್ಳೆಯ ನಟರಾಗಿ, ಸ್ಟಾರ್​ಗಳಾಗಿ ಗುರುತಿಸಿಕೊಂಡಿರುವ ಹಲವು ನಟರಿದ್ದಾರೆ. ಯಶ್, ಗೋಲ್ಡನ್ ಸ್ಟಾರ್ ಗಣೇಶ್, ರಾಧಿಕಾ ಪಂಡಿತ್, ಅಚ್ಯುತ್ ಕುಮಾರ್ ಹೀಗೆ ಪಟ್ಟಿ ಉದ್ದವಾಗುತ್ತಾ ಹೋಗುತ್ತದೆ. ಇದೀಗ ಮತ್ತೊಬ್ಬ ಕಿರುತೆರೆ ಸೆಲೆಬ್ರಿಟಿ ಹಿರಿತೆರೆಗೆ ಬಡ್ತಿ ಪಡೆಯಲು ಸಜ್ಜಾಗಿದ್ದಾರೆ. ಅವರಿಗೆ ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ಮಹೇಶ್ ಬಾಬು ಬೆಂಬಲ ಹಾಗೂ ಮಾರ್ಗದರ್ಶನ ದೊರೆಯುತ್ತಿದೆ.

ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಸ್ಮೈಲ್ ಗುರು ರಕ್ಷಿತ್ ಈಗ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ಸ್ಮೈಲ್ ಗುರು ರಕ್ಷಿತ್ ಅವರ ಮೊದಲ ಸಿನಿಮಾಕ್ಕೆ ಮಹೇಶ್ ಬಾಬು ನಿರ್ದೇಶನ ಮಾಡಲಿದ್ದಾರೆ. ಕನ್ನಡ ಚಿತ್ರರಂಗಕ್ಕೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಹೊಸ ನಟ ರಕ್ಷಿತ್​ಗೆ ನಿರ್ದೇಶನ ಮಾಡುತ್ತಿರುವುದು ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಈ ಸಿನಿಮಾ ಮೂಲಕ ಎ ಕ್ಲಾಸ್ ರಿಯಲ್ ಎಟರ್ಸ್ಸ್ ಸಂಸ್ಥಾಪರಾಗಿರುವ ಅನುರಾಗ್ ಆರ್ ಹಾಗೂ ಮಿಥುನ್ ಅವರುಗಳು ನಿರ್ಮಾಪಕರಾಗುತ್ತಿದ್ದಾರೆ. ಇವರಿಗೂ ಇದು ನಿರ್ಮಾಪಕರಾಗಿ ಮೊದಲ ಸಿನಿಮಾ.

ಇದನ್ನೂ ಓದಿ:ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ

ಈ ಸಿನಿಮಾದ ಮೂಲಕ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ನಾಯಕಿಯಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ಸಿನಿಮಾನಲ್ಲಿ ಮತ್ತೊಬ್ಬ ನಾಯಕಿ ಸಹ ಇರಲಿದ್ದು, ಅವರ ಪರಿಚಯವನ್ನು ಶೀಘ್ರವೇ ಚಿತ್ರತಂಡ ಮಾಡಲಿದೆ. ಮಹೇಶ್ ಬಾಬು ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಚೊಚ್ಚಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ರಕ್ಷಿತ್ ಅದಕ್ಕೆ ಬೇಕಾಗಿರೋ ತಯಾರಿಯನ್ನು ಮಾಡಿಕೊಂಡಿದ್ದಾರೆ. ಸಿನಿಮಾದ ಹೆಸರನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಜೂನ್ 15ರಿಂದ ಶೂಟಿಂಗ್ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಸಿನಿಮಾದ ನಿರ್ಮಾಪಕರಾದ ಅನುರಾಗ್ ಆರ್ ಮೂಲತಃ ಬೆಂಗಳೂರಿನವರೇ. ಅವರಿಗೆ ಸಿನಿಮಾ ಮೇಲಿನ ಒಲವು ಅವರನ್ನು ಚಿತ್ರರಂಗಕ್ಕೆ ಕರೆದುಕೊಂಡು ಬಂದಿದೆ. ಸದಭಿರುಚಿಯ ಸಿನಿಮಾ ಕೊಡಬೇಕೆಂಬ ಕಾರಣಕ್ಕೆ ಅನುಭವಿ ನಿರ್ದೇಶಕ ಮಹೇಶ್ ಬಾಬುವರಂತಹ ದಿಗ್ಗಜ ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ. ಇನ್ನು ಸಿನಿಮಾದ ಮತ್ತೊಬ್ಬ ನಿರ್ಮಾಪಕ ಸ್ಟ್ಯಾಂಡಿ ಮೇಕರ್ಸ್ಸ್ ಎಂಎಂಎಂ ಗ್ರೂಪ್ಸ್ ನ ಒಡೆಯ ಮಿಥುನ್ ಕೆ.ಎಸ್ ಸಹ ಸಿನಿಮಾ ಪ್ರೇಮಿಯಾಗಿದ್ದು, ಎ ಕ್ಲಾಸ್ ಸಿನಿ ಫಿಲ್ಮಂಸ್ ಹಾಗೂ ಎಂಎಂಎಂ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಮಿಥುನ್​ಗೆ ಚಿತ್ರರಂಗ ಹೊಸದಲ್ಲಿ, ಕೆಲವಾರು ಸಿನಿಮಾಗಳಿಗೆ ಅವರು ತಂತ್ರಜ್ಞರಾಗಿ ದುಡಿದಿದ್ದಾರೆ. ಈ ಸಿನಿಮಾ ಮೂಲಕ ಅವರು ನಿರ್ಮಾಪಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ