AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ

ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದರು. 2021ರ ಅಕ್ಟೋಬರ್​ನಲ್ಲಿ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇದು ಅನೇಕರಿಗೆ ಶಾಕಿಂಗ್ ಎನಿಸಿತ್ತು. ಆ ಬಳಿಕ ಇಬ್ಬರೂ ಮುಖಾಮುಖಿ ಆಗಿಲ್ಲ. ನಾಗ ಚೈತನ್ಯ ಅವರು ಈಗ ಶೋಭಿತಾ ಜೊತೆ ಕ್ಲೋಸ್ ಆಗಿದ್ದಾರೆ.

ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ
ಶೋಬಿತಾ-ನಾಗ ಚೈತನ್ಯ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:May 31, 2024 | 7:05 AM

Share

ಶೋಭಿತಾ ದುಲಿಪಾಲ್ (Sobhita Dhulipala) ಆಗಾಗ ಸುದ್ದಿ ಆಗುತ್ತಿದ್ದಾರೆ. ನಾಗ ಚೈತನ್ಯ ಜೊತೆಗೆ ಬೆಳೆದಿರೋ ಆಪ್ತತೆ ಇದಕ್ಕೆ ಕಾರಣ. ಇಬ್ಬರೂ ಡೇಟ್ ಮಾಡುತ್ತಿದ್ದಾರೆ ಎನ್ನುವ ವರದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಇವರ ಪ್ರೀತಿ ವಿಚಾರದಲ್ಲಿ ಸ್ಪಷ್ಟನೆ ಸಿಗೋ ಸಾಧ್ಯತೆ ಇದೆ. ಇಂದು (ಮೇ 31) ಶೋಭಿತಾ ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಬರುತ್ತಿದೆ. ಒಂದೊಮ್ಮೆ ನಾಗ ಚೈತನ್ಯ ಅವರಿಗೆ ಪ್ರೀತಿಯಿಂದ ವಿಶ್ ತಿಳಿಸಿದರೆ ಅವರ ಪ್ರೀತಿ ವಿಚಾರ ಖಚಿತ ಆಗಲಿದೆ.

ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದರು. 2021ರ ಅಕ್ಟೋಬರ್​ನಲ್ಲಿ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇದು ಅನೇಕರಿಗೆ ಶಾಕಿಂಗ್ ಎನಿಸಿತ್ತು. ಆ ಬಳಿಕ ಇಬ್ಬರೂ ಮುಖಾಮುಖಿ ಆಗಿಲ್ಲ. ಈಗ ಇಬ್ಬರೂ ತಮ್ಮ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿ ಇದ್ದಾರೆ. ನಾಗ ಚೈತನ್ಯ ಅವರು ಈಗ ಶೋಭಿತಾ ಜೊತೆ ಕ್ಲೋಸ್ ಆಗಿದ್ದಾರೆ.

ಶೋಭಿತಾ ಅವರು ಹಿಂದಿ, ತೆಲುಗು ಇಂಡಸ್ಟ್ರಿಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ನಾಗ ಚೈತನ್ಯ ಜೊತೆ ಒಳ್ಳೆಯ ಗೆಳೆತನ ಬೆಳೆದಿದೆ. ಆ ಬಳಿಕ ಗೆಳೆತನ ಪ್ರೀತಿಗೆ ತಿರುಗಿದೆ ಎನ್ನುವ ಮಾತು ಇದೆ. ಆದರೆ, ಈ ವಿಚಾರವನ್ನು ಎಲ್ಲಿಯೂ ರಿವೀಲ್ ಮಾಡಿಲ್ಲ. ಒಂದೊಮ್ಮೆ ಇಂದು ನಾಗ ಚೈತನ್ಯ ಅವರು ಶೋಭಿತಾಗೆ ಪ್ರೀತಿಯಿಂದ ಬರ್ತ್​ಡೇ ವಿಶ್ ತಿಳಿಸಿದರೆ ಡೇಟಿಂಗ್ ವಿಚಾರ ಖಚಿತವಾಗಲಿದೆ.

ಇದನ್ನೂ ಓದಿ: ನಾಗ ಚೈತನ್ಯ-ಶೋಭಿತಾ ಆಪ್ತವಾಗಿರೋದು ಹೌದು, ಆದರೆ ಮದುವೆ ಆಗೋ ಆಲೋಚನೆ ಇಲ್ಲ

ಶೋಭಿತಾ ಅವರು ಮಾಡೆಲಿಂಗ್ ಕ್ಷೇತ್ರವನ್ನು ಮೊದಲು ಆಯ್ಕೆ ಮಾಡಿಕೊಂಡರು. ಆ ಬಳಿಕ ಅವರು ಆಯ್ಕೆ ಮಾಡಿದ್ದು ಸಿನಿಮಾ ರಂಗವನ್ನು. ‘ರಮಣ್ ರಾಘವ್ 2.0’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರ 2016ರಲ್ಲಿ ಬಿಡುಗಡೆ ಆಯಿತು. ಆ ಬಳಿಕ ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು. ಶೋಭಿತಾ ನಟನೆಯ ‘ದಿ ನೈಟ್ ಮ್ಯಾನೇಜರ್’ ವೆಬ್ ಸೀರಿಸ್ ಗಮನ ಸೆಳೆದಿದೆ. ಇದರಲ್ಲಿ ಅವರು ಕಾವೇರಿ ದೀಕ್ಷಿತ್ ಹೆಸರಿನ ಪಾತ್ರ ಮಾಡಿದ್ದಾರೆ. ಇದಕ್ಕೆ ಅವರಿಗೆ ಅವಾರ್ಡ್ ಕೂಡ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:26 am, Fri, 31 May 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್