AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಸೊಸೆಯನ್ನು ‘ಹಾಟ್ ಗರ್ಲ್​’ ಎಂದು ಕರೆದಿದ್ದ ಅಕ್ಕಿನೇನಿ ನಾಗಾರ್ಜುನ

ನಾಗ ಚೈತನ್ಯ ಹಾಗೂ ಸಮಂತಾ ಅವರದ್ದು ಮುಗಿದು ಹೋದ ಕಥೆ. ಇಬ್ಬರೂ ದೂರ ಆಗಿ ಕೆಲವು ವರ್ಷಗಳು ಕಳೆದಿವೆ. ಹೀಗಿರುವಾಗಲೇ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವರಿಸಲು ಸಿದ್ಧರಾಗಿದ್ದಾರೆ ಎಂದು ವರದಿ ಆಗಿತ್ತು. ಇದು ಈಗ ನಿಜವಾಗಿದೆ.

ಭಾವಿ ಸೊಸೆಯನ್ನು ‘ಹಾಟ್ ಗರ್ಲ್​’ ಎಂದು ಕರೆದಿದ್ದ ಅಕ್ಕಿನೇನಿ ನಾಗಾರ್ಜುನ
ಶೋಭಿತಾ-ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Aug 09, 2024 | 7:45 AM

Share

ಚಿತ್ರರಂಗದಲ್ಲಿ ಯಾರ ಮೇಲೆ ಯಾವಾಗ ಪ್ರೀತಿ ಮೂಡುತ್ತದೆ ಎಂದು ಗೊತ್ತಾಗುವುದಿಲ್ಲ. ಬಾಲಿವುಡ್​ನಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ‘ಕಜ್ರಾ ರೇ..’ ಹಾಡಿಗೆ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಐಶ್ವರ್ಯಾ ತಮ್ಮ ಸೊಸೆ ಆಗಿ ಬರುತ್ತಾರೆ ಎಂದು ಅಮಿತಾಭ್​ಗೆ ಆ ಸಂದರ್ಭದಲ್ಲಿ ಗೊತ್ತಿರಲಿಲ್ಲ. ಈಗ ಅಕ್ಕಿನೇನಿ ನಾಗಾರ್ಜುನ ಅವರ ವಿಚಾರದಲ್ಲೂ ಹಾಗೆಯೇ ಆಗಿದೆ. ಅವರು ಶೋಭಿತಾ ಬಗ್ಗೆ ನೀಡಿದ್ದ ಹೇಳಿಕೆ ಸಖತ್ ವೈರಲ್ ಆಗುತ್ತಿದೆ.

ನಾಗಾರ್ಜುನ ಅವರ ಮಗ ನಾಗ ಚೈತನ್ಯ ಅವರು ನಟಿ ಶೋಭಿತಾ ಧುಲಿಪಾಲ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರ ಎಂಗೇಜ್​ಮೆಂಟ್ ಫೋಟೋಗಳನ್ನು ಸ್ವತಃ ನಾಗಾರ್ಜುನ ಅವರು ಶೇರ್ ಮಾಡಿ ನವಜೋಡಿಗೆ ಶುಭಕೋರಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ. ಈ ಮಧ್ಯೆ ಸಮಂತಾ ಫ್ಯಾನ್ಸ್ ನಾಗ ಚೈತನ್ಯ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇವರು ಮಾಡಿದ್ದು ಸರಿ ಅಲ್ಲ ಎನ್ನುತ್ತಿದ್ದಾರೆ. ಕೆಲವರು ನಾಗಾರ್ಜುನ ಅವರ ಹಳೆಯ ವಿಡಿಯೋನ ವೈರಲ್ ಮಾಡಿದ್ದಾರೆ.

‘ಶೋಭಿತಾ ಧುಲಿಪಾಲ್ ಅವರು ಚೆನ್ನಾಗಿದ್ದಾರೆ. ನಾನು ಈ ರೀತಿ ಹೇಳಬಾರದು. ಅವರು ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಸಿನಿಮಾದಲ್ಲಿ ಅಟ್ರ್ಯಾಕ್ಟಿವ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ’ ಎಂದು ಅಕ್ಕಿನೇನಿ ನಾಗಾರ್ಜುನ ಹೇಳಿದ್ದರು. ಈ ವಿಡಿಯೋನ ಈಗ ವೈರಲ್ ಆಗುತ್ತಿದೆ.

View this post on Instagram

A post shared by Be Like Shiva (@belikeshiva)

ಇದನ್ನೂ ಓದಿ: ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..

ಸಮಂತಾ ಹಾಗೂ ನಾಗ ಚೈತನ್ಯ 2021ರಲ್ಲಿ ವಿಚ್ಛೇದನ ಪಡೆದರು. ಆ ಬಳಿಕ ನಾಗ ಚೈತನ್ಯ ಅವರು ಸಿಂಗಲ್ ಆಗಿದ್ದರು. ಆ ಬಳಿಕೆ ಅವರಿಗೆ ಶೋಭಿತಾ ಜೊತೆ ಪ್ರೀತಿ ಮೂಡಿತು. ಈಗ ಶೋಭಿತಾ ಹಾಗೂ ನಾಗ ಚೈತನ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇವರ ಮದುವೆ ಯಾವಾಗ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ