AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ನಟಿ ಸಮಂತಾ ಹೆಸರು ಕೆಡಿಸಲು ಸಂಚು; ಇದರ ಹಿಂದೆ ಇರೋರು ಯಾರು?

ಸಮಂತಾ ಅವರು ‘ಪುಷ್ಪ’ ಸಿನಿಮಾದಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿನಲ್ಲಿ ಸಮಂತಾ ಡ್ಯಾನ್ಸ್ ಮಾಡಿದ ಪರಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು. ಈಗ ಸಮಂತಾ ಅವರು ವೆಬ್ ಸೀರಿಸ್​ನಲ್ಲಿ ಬ್ಯುಸಿ ಇದ್ದಾರೆ.

Samantha: ನಟಿ ಸಮಂತಾ ಹೆಸರು ಕೆಡಿಸಲು ಸಂಚು; ಇದರ ಹಿಂದೆ ಇರೋರು ಯಾರು?
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Feb 17, 2023 | 2:46 PM

Share

ನಟಿ ಸಮಂತಾ (Samantha) ಅವರು ಇತ್ತೀಚೆಗೆ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಹೀಗಿರುವಾಗಲೇ ಅವರಿಗೆ Myositis ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಇದರಿಂದ ಅವರು ಸಾಕಷ್ಟು ನೊಂದಿದ್ದಾರೆ. ಈಗ ಸಮಂತಾ ಹೆಸರು ಕೆಡಿಸಲು ಕೆಲವರಿಂದ ಹುನ್ನಾರ ನಡೆಯುತ್ತಿದೆ. ಇದನ್ನು ಮಾಡಿದವರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ‘ಪುಷ್ಪ’ ಸಿನಿಮಾದಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿನಲ್ಲಿ ಸಮಂತಾ ಡ್ಯಾನ್ಸ್ ಮಾಡಿದ ಪರಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು. ಈಗ ಸಮಂತಾ ಅವರು ವೆಬ್ ಸೀರಿಸ್​ನಲ್ಲಿ ಬ್ಯುಸಿ ಇದ್ದಾರೆ. ರಾಜ್ ಹಾಗೂ ಡಿಕೆ ನಿರ್ದೇಶನ ಮಾಡುತ್ತಿರುವ ವೆಬ್​ ಸೀರಿಸ್​​ನಲ್ಲಿ ಸಮಂತಾ ನಟಿಸುತ್ತಿದ್ದಾರೆ. ಇಂಗ್ಲಿಷ್​ ​‘ಸಿಟಾಡೆಲ್​’ ಸೀರಿಸ್​​ನ ಭಾರತದ ವರ್ಷನ್ ಇದಾಗಿದೆ. ಇದರ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದಕ್ಕಾಗಿ ಸಮಂತಾ ಮುಂಬೈನಲ್ಲಿ ಇದ್ದಾರೆ.

ಸಮಂತಾ ಇತ್ತೀಚೆಗೆ ಮುಂಬೈನಲ್ಲಿ ಮನೆ ಖರೀದಿ ಮಾಡಿದ್ದಾರೆ. ಅವರು ಮುಂಬೈನಲ್ಲೇ ಸೆಟಲ್ ಆಗಲಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಸಮಂತಾಗೆ ‘ಪುಷ್ಪ 2’ ಚಿತ್ರದಲ್ಲಿ ಹೆಜ್ಜೆ ಹಾಕೋಕೆ ಆಫರ್ ನೀಡಿದ್ದರು, ಆದರೆ ಅದನ್ನು ಅವರು ತಿರಸ್ಕರಿಸಿದರು ಎನ್ನುವ ಸುದ್ದಿ ಹೊರಬಿತ್ತು. ಇದನ್ನು ಸಮಂತಾ ಟೀಂ ಅಲ್ಲಗಳೆದಿದೆ. ‘ಪುಷ್ಪ 2 ತಂಡದಿಂದ ಯಾವುದೇ ಆಫರ್ ಬಂದಿಲ್ಲ’ ಅನ್ನೋದನ್ನು ಸ್ಪಷ್ಟಪಡಿಸಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

‘ಖುಷಿ’ ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಸದ್ಯ ಅರ್ಧಕ್ಕೆ ನಿಂತಿವೆ. ಈ ಚಿತ್ರಕ್ಕೆ ಸಮಂತಾ ಡೇಟ್ಸ್​ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಇದು ಕೂಡ ಸಮಂತಾ ಹೆಸರು ಕೆಡಿಸಲು ಮಾಡಿರೋ ಪ್ಲ್ಯಾನ್ ಎನ್ನಲಾಗುತ್ತಿದೆ. ಇದು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಸಮಂತಾ ಫ್ಯಾನ್ಸ್ ಮುಂದಾಗಿದ್ದಾರೆ.

ಇದನ್ನೂ ಓದಿ: Samantha: ದೇವರ ಮೊರೆಹೋದ ನಟಿ ಸಮಂತಾ; ಇನ್ನೂ ವಾಸಿ ಆಗಿಲ್ಲವೇ ಅಪರೂಪದ ಕಾಯಿಲೆ?

ಸಮಂತಾ ಅವರು ನಾಗಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡರು. ಆಗ ಸಮಂತಾ ತುಂಬಾನೇ ಕುಗ್ಗಿದ್ದರು. ಹೀಗಿರುವಾಗಲೇ myositis ಕಾಯಿಲೆ ಕಾಣಿಸಿಕೊಂಡಿತು. ಸಮಂತಾ ಸದ್ಯ ಇದರಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!