AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೋಕೇಶ್ ನೋಡಿ ಕಲಿ, ಸಿನಿಮಾ ಬಿಟ್ಟು ಬಾ’: ಜೂ ಎನ್​ಟಿಆರ್ ಬಗ್ಗೆ ಟಿಡಿಪಿ ನಾಯಕ ಆಕ್ರೋಶ

ಟಿಡಿಪಿ ಪಕ್ಷ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಕಂಡ ಕೂಡಲೇ ಕೆಲವು ಟಿಡಿಪಿ ನಾಯಕರು ಜೂ ಎನ್​ಟಿಆರ್ ವಿರುದ್ಧ ನಾಲಗೆ ಹರಿಬಿಡುತ್ತಿದ್ದಾರೆ. ಇದು ಜೂ ಎನ್​ಟಿಆರ್ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.

‘ಲೋಕೇಶ್ ನೋಡಿ ಕಲಿ, ಸಿನಿಮಾ ಬಿಟ್ಟು ಬಾ’: ಜೂ ಎನ್​ಟಿಆರ್ ಬಗ್ಗೆ ಟಿಡಿಪಿ ನಾಯಕ ಆಕ್ರೋಶ
ಮಂಜುನಾಥ ಸಿ.
|

Updated on: Jun 05, 2024 | 12:10 PM

Share

ಆಂಧ್ರ ವಿಧಾನಸಭೆ ಚುನಾವಣೆಗೆ (Andhra Pradesh Assembly Election) ಫಲಿತಾಂಶ ರಾಜ್ಯದ ರಾಜಕೀಯದಲ್ಲಿ ದೊಡ್ಡ ಬದಲಾವಣೆ ತಂದಿದೆ. ಅಧಿಕಾರ ಕಳೆದುಕೊಂಡಿದ್ದ ಚಂದ್ರಬಾಬು ನಾಯ್ಡು ಮತ್ತೆ ಅಧಿಕಾರ ಪಡೆದುಕೊಂಡಿದ್ದಾರೆ. ರಾಜಕೀಯ ನೆಲೆಗಾಗಿ ಹೋರಾಡುತ್ತಿದ್ದ ಪವನ್ ಕಲ್ಯಾಣ್​ ತಮ್ಮ ಜನಸೇನಾದ ಅಭ್ಯರ್ಥಿಗಳನ್ನು 21 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಳ್ಳುವ ಮೂಲಕ ಆಂಧ್ರ ವಿಧಾನಸಭೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಆಂಧ್ರದಲ್ಲಿ ನೆಲೆಗಾಗಿ ಹುಡುಕಾಡುತ್ತಿದ್ದ ಬಿಜೆಪಿಗೆ ಸಹ 8 ಸೀಟುಗಳು ದೊರೆತಿವೆ. ಟಿಡಿಪಿ ಗೆದ್ದ ಬೆನ್ನಲ್ಲೆ ಜೂ ಎನ್​ಟಿಆರ್ ವಿರುದ್ಧ ಟಿಡಿಪಿಯ ನಾಯಕರು ಕೆಲವರು ನಾಲಗೆ ಹರಿಬಿಡಲು ಆರಂಭಿಸಿದ್ದಾರೆ.

ಪವನ್ ಕಲ್ಯಾಣ್ ಗೆದ್ದಿರುವ ಪೀಠಾಪುರಂ ಕ್ಷೇತ್ರದ ಮಾಜಿ ಶಾಸಕ, ಟಿಡಿಪಿ ಮುಖಂಡ ಎಸ್​ವಿಎಸ್​ಎನ್ ವರ್ಮಾ, ಜೂ ಎನ್​ಟಿಆರ್ ಬಗ್ಗೆ ಮಾತನಾಡಿದ್ದು, ‘ಜೂ ಎನ್​ಟಿಆರ್, ನಾರಾ ಲೋಕೇಶ್ (ಚಂದ್ರಬಾಬು ನಾಯ್ಡು ಪುತ್ರ) ನೋಡಿ ಕಲಿಯಬೇಕು. ಆ ಇಬ್ಬರಿಗೂ ಹೋಲಿಕೆಯೇ ಇಲ್ಲ. ನಾರಾ ಲೋಕೇಶ್, ಟಿಡಿಪಿ ಪಕ್ಷಕ್ಕಾಗಿ ಪ್ರತಿದಿನ ಕೆಲಸ ಮಾಡುತ್ತಾರೆ. ತ್ಯಾಗಗಳನ್ನು ಮಾಡಿದ್ದಾರೆ. ಪಕ್ಷಕ್ಕೆ 60 ಲಕ್ಷ ಹೊಸ ಸದಸ್ಯರನ್ನು ಸೇರಿಸಿದ್ದಾರೆ. ಪಕ್ಷಕ್ಕೆ ಹೊಸ ತಂತ್ರಜ್ಞಾನದ ಪರಿಚಯ ಮಾಡಿಸಿದ್ದಾರೆ. ಕಾರ್ಯಕರ್ತರಿಗೆ ವಿಮೆ ವ್ಯವಸ್ಥೆ ಮಾಡಿಸಿದ್ದಾರೆ’ ಎಂದಿದ್ದಾರೆ.

‘ಜೂ ಎನ್​ಟಿಆರ್ ಟಿಡಿಪಿ ಪಕ್ಷಕ್ಕೆ ಬರಬೇಕೆಂದರೆ ಸಿನಿಮಾಗಳನ್ನು ಬಿಟ್ಟು ಇಲ್ಲಿಗೆ ಬರಬೇಕು, ಆಗ ಬೇಕಾದರೆ ಯಾವುದಾದರೂ ಒಂದು ಸ್ಥಾನ ಕೊಟ್ಟು ಅವರನ್ನು ಬದಿಗಿ ಕೂಡಿಸಬಹುದು. ಅವರು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆಂದು ಬಂದರೆ ನಾನೇ ಅವರಿಗೆ ಯಾವುದಾದರೂ ಒಂದು ಹುದ್ದೆ ಕೊಡಿಸುತ್ತೇನೆ. ಅದನ್ನು ಬಿಟ್ಟು ಮನೆಯಲ್ಲಿ ಕೂತಿದ್ದರೆ ಯಾರೂ ಸಹ ಹುದ್ದೆಗಳನ್ನು ಕೊಡುವುದಿಲ್ಲ. ಅಲ್ಲದೆ ನಂದಮೂರಿ ಕುಟುಂಬದವರಿಗೆ ಜೂ ಎನ್​ಟಿಆರ್ ಬಗ್ಗೆ ಇಲ್ಲದ ಕಾಳಜಿ ಬೇರೆಯವರಿಗೆ ಏಕೆ?’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಪ್ರಶಾಂತ್ ನೀಲ್-ಜೂ ಎನ್​ಟಿಆರ್ ಸಿನಿಮಾಕ್ಕೆ ಯುವ ನಾಯಕ ನಟ ಎಂಟ್ರಿ

ತೆಲುಗುದೇಶಂ ಪಾರ್ಟಿ (ಟಿಡಿಪಿ), ನಂದಮೂರಿ ಕುಟುಂಬದ ರಾಜಕೀಯ ಪಕ್ಷ. ಸೀನಿಯರ್ ಎನ್​ಟಿಆರ್ ಕಟ್ಟಿ ಬೆಳೆಸಿದ ಪಕ್ಷವದು. ಜೂ ಎನ್​ಟಿಆರ್ ಸಹ 2009 ರ ವರೆಗೆ ಟಿಡಿಪಿ ಪರವಾಗಿ ಅಬ್ಬರದ ಪ್ರಚಾರ ಮಾಡಿದ್ದರು. ಟಿಡಿಪಿ ಪರವಾಗಿ ಕ್ರೌಡ್ ಪುಲ್ಲರ್ ಆಗಿದ್ದ ಜೂ ಎನ್​ಟಿಆರ್, ಟಿಡಿಪಿಯ ತಾರಾ ಪ್ರಚಾರಕ ಆಗಿದ್ದರು. ಆದರೆ ಆ ನಂತರದ ದಿನಗಳಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಂದಮೂರಿ ಬಾಲಕೃಷ್ಣ ಜೂ ಎನ್​ಟಿಆರ್ ಅನ್ನು ಪಕ್ಷದಿಂದ ದೂರ ಇರಿಸಿದರು.

ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಹಾಗೂ ನಂದಮೂರಿ ಬಾಲಕೃಷ್ಣ ಪುತ್ರ ಮೋಕ್ಷಜ್ಞ ಅವರನ್ನು ಟಿಡಿಪಿ ಪಕ್ಷದ ಭವಿಷ್ಯದ ನಾಯಕರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಜೂ ಎನ್​ಟಿಆರ್ ಅನ್ನು ದೂರ ಇಡಲಾಯ್ತು. ಈ ಹಿಂದೆ ನಂದಮೂರಿ ಬಾಲಕೃಷ್ಣ ಹಲವು ಬಾರಿ ಜೂ ಎನ್​ಟಿಆರ್ ವಿಷಯವಾಗಿ ಬಹಿರಂಗವಾಗಿಯೇ ಖಾರವಾಗಿ ಮಾತನಾಡಿದ್ದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ