AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ. ಈ ಮದುವೆಯಲ್ಲಿ ಆದ ತೊಂದರೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ
ಝಹೀರ್-ಸೋನಾಕ್ಷಿ
ರಾಜೇಶ್ ದುಗ್ಗುಮನೆ
|

Updated on: Jun 27, 2024 | 11:00 AM

Share

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇತ್ತೀಚೆಗೆ ಝಹೀರ್ ಇಖ್ಬಾಲ್​ನ ಮದುವೆ ಆದರು. ಸಿಂಪಲ್ ಆಗಿ ಈ ವಿವಾಹ ಕಾರ್ಯ ನಡೆದಿತ್ತು. ಆ ಬಳಿಕ ಸೋನಾಕ್ಷಿ ಅವರು ಭರ್ಜರಿಯಾಗಿ ರಿಸೆಪ್ಷನ್ ಆಯೋಜನೆ ಮಾಡಿದ್ದರು. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಈ ಮಧ್ಯೆ ಒಂದು ತೊಂದರೆ ಆಗಿದೆ. ಫ್ಯಾನ್ಸ್ ಭರ್ಜರಿಯಾಗಿ ರೆಡಿ ಆಗಿ ಬಂದಿದ್ದರು. ಅವರು ಕೂಡ ಅತಿಥಿಗಳಂತೆ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಈ ವೇಳೆ ಅವಘಡ ಉಂಟಾಗಿದೆ.

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ.

‘ಸೆಲೆಬ್ರಿಟಿ ಮದುವೆ ರಿಸೆಪ್ಷನ್​ನಲ್ಲಿ ಅಭಿಮಾನಿಗಳು ಗೇಟ್​ನ ಮುರಿದು ಒಳಗೆ ಬರೋದನ್ನು ನೋಡಿದೆ. ಜನರು ಟಿಪ್​-ಟಾಪ್ ಆಗಿ ಡ್ರೆಸ್ ಹಾಕಿ ಬಂದಿದ್ದರು. ತಾವೂ ಅತಿಥಿಗಳು ಎಂದು ತೋರಿಸುವ ಪ್ರಯತ್ನದಲ್ಲಿದ್ದರು. ಇದೆಲ್ಲ ಯಾವ ಖುಷಿಗೆ? ರೀಲ್ಸ್ ಮಾಡೋದಕ್ಕಾ? ಜನರು ಇಷ್ಟೊಂದು ಅನುಪಯುಕ್ತ ಎಂದು ಗೊತ್ತಿರಲಿಲ್ಲ’ ಎಂದು ಸುಶಾಂತ್ ಪೋಸ್ಟ್ ಮಾಡಿದ್ದಾರೆ.

ಜೂನ್ 23ರಂದು ಸೋನಾಕ್ಷಿ ಹಾಗೂ ಝಹೀರ್ ಅವರು ಮದುವೆ ಆಗಿದ್ದಾರೆ. ಮನೆಯಲ್ಲಿ ಸಿಂಪಲ್ ಆಗಿ ಮದುವೆ ನಡೆದಿದೆ. ಇಬ್ಬರೂ ಏಳು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. ಆ ಬಳಿಕ ಇವರು ವಿವಾಹ ಆಗುವ ನಿರ್ಧಾರ ತೆಗೆದುಕೊಂಡರು.

ಇದನ್ನೂ ಓದಿ: ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?

ಸಲ್ಮಾನ್ ಖಾನ್, ಕಾಜೋಲ್, ವಿದ್ಯಾ ಬಾಲನ್, ರೇಖಾ, ಹುಮಾ ಖುರೇಶಿ, ಅದಿತಿ ರಾವ್ ಹೈದರಿ, ಆದಿತ್ಯ ರಾಯ್ ಕಪೂರ್, ಅನಿಲ್ ಕಪೂರ್ ಮೊದಲಾದವರು ಮದುವೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!