AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ. ಈ ಮದುವೆಯಲ್ಲಿ ಆದ ತೊಂದರೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ
ಝಹೀರ್-ಸೋನಾಕ್ಷಿ
ರಾಜೇಶ್ ದುಗ್ಗುಮನೆ
|

Updated on: Jun 27, 2024 | 11:00 AM

Share

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಇತ್ತೀಚೆಗೆ ಝಹೀರ್ ಇಖ್ಬಾಲ್​ನ ಮದುವೆ ಆದರು. ಸಿಂಪಲ್ ಆಗಿ ಈ ವಿವಾಹ ಕಾರ್ಯ ನಡೆದಿತ್ತು. ಆ ಬಳಿಕ ಸೋನಾಕ್ಷಿ ಅವರು ಭರ್ಜರಿಯಾಗಿ ರಿಸೆಪ್ಷನ್ ಆಯೋಜನೆ ಮಾಡಿದ್ದರು. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಈ ಮಧ್ಯೆ ಒಂದು ತೊಂದರೆ ಆಗಿದೆ. ಫ್ಯಾನ್ಸ್ ಭರ್ಜರಿಯಾಗಿ ರೆಡಿ ಆಗಿ ಬಂದಿದ್ದರು. ಅವರು ಕೂಡ ಅತಿಥಿಗಳಂತೆ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಈ ವೇಳೆ ಅವಘಡ ಉಂಟಾಗಿದೆ.

ಡಿಜಿಟಲ್ ಕ್ರಿಯೇಟರ್ ಸುಶಾಂತ್ ಅವರು ಇತ್ತೀಚೆಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಇತ್ತೀಚೆಗೆ ನಡೆದ ಸೆಲೆಬ್ರಿಟಿ ಮದುವೆ ರಿಸೆಪ್ಷನ್ ಘಟನೆ ವಿವರಿಸಿದ್ದಾರೆ. ಇದು ಸೋನಾಕ್ಷಿ ರಿಸೆಪ್ಷನ್​ನ ಘಟನೆ ಎಂದು ಕೆಲವರು ಊಹಿಸಿದ್ದಾರೆ.

‘ಸೆಲೆಬ್ರಿಟಿ ಮದುವೆ ರಿಸೆಪ್ಷನ್​ನಲ್ಲಿ ಅಭಿಮಾನಿಗಳು ಗೇಟ್​ನ ಮುರಿದು ಒಳಗೆ ಬರೋದನ್ನು ನೋಡಿದೆ. ಜನರು ಟಿಪ್​-ಟಾಪ್ ಆಗಿ ಡ್ರೆಸ್ ಹಾಕಿ ಬಂದಿದ್ದರು. ತಾವೂ ಅತಿಥಿಗಳು ಎಂದು ತೋರಿಸುವ ಪ್ರಯತ್ನದಲ್ಲಿದ್ದರು. ಇದೆಲ್ಲ ಯಾವ ಖುಷಿಗೆ? ರೀಲ್ಸ್ ಮಾಡೋದಕ್ಕಾ? ಜನರು ಇಷ್ಟೊಂದು ಅನುಪಯುಕ್ತ ಎಂದು ಗೊತ್ತಿರಲಿಲ್ಲ’ ಎಂದು ಸುಶಾಂತ್ ಪೋಸ್ಟ್ ಮಾಡಿದ್ದಾರೆ.

ಜೂನ್ 23ರಂದು ಸೋನಾಕ್ಷಿ ಹಾಗೂ ಝಹೀರ್ ಅವರು ಮದುವೆ ಆಗಿದ್ದಾರೆ. ಮನೆಯಲ್ಲಿ ಸಿಂಪಲ್ ಆಗಿ ಮದುವೆ ನಡೆದಿದೆ. ಇಬ್ಬರೂ ಏಳು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. ಆ ಬಳಿಕ ಇವರು ವಿವಾಹ ಆಗುವ ನಿರ್ಧಾರ ತೆಗೆದುಕೊಂಡರು.

ಇದನ್ನೂ ಓದಿ: ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?

ಸಲ್ಮಾನ್ ಖಾನ್, ಕಾಜೋಲ್, ವಿದ್ಯಾ ಬಾಲನ್, ರೇಖಾ, ಹುಮಾ ಖುರೇಶಿ, ಅದಿತಿ ರಾವ್ ಹೈದರಿ, ಆದಿತ್ಯ ರಾಯ್ ಕಪೂರ್, ಅನಿಲ್ ಕಪೂರ್ ಮೊದಲಾದವರು ಮದುವೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ