AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಹುಡುಗನ ಮದುವೆ ಆದ ಸೋನಾಕ್ಷಿ ಬಗ್ಗೆ ಟೀಕೆ; ಪ್ರತಿಕ್ರಿಯಿಸಿದ ಶತ್ರುಘ್ನ ಸಿನ್ಹಾ

ಸೋನಾಕ್ಷಿ ಸಿನ್ಹಾ ಅವರ ಅಂತರ್ಧರ್ಮೀಯ ವಿವಾಹದ ಬಗ್ಗೆ ಮುಖೇಶ್ ಖನ್ನಾ ಮತ್ತು ಕುಮಾರ ವಿಶ್ವಾಸ್ ಅವರು ಮಾಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಸೋನಾಕ್ಷಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಲವು ಕಾಂಗ್ರೆಸ್ ನಾಯಕರು ಸಹ ಸೋನಾಕ್ಷಿಯ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮುಸ್ಲಿಂ ಹುಡುಗನ ಮದುವೆ ಆದ ಸೋನಾಕ್ಷಿ ಬಗ್ಗೆ ಟೀಕೆ; ಪ್ರತಿಕ್ರಿಯಿಸಿದ ಶತ್ರುಘ್ನ ಸಿನ್ಹಾ
Sonakshi Sinha
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Dec 29, 2024 | 12:23 PM

Share

ಕೆಲವು ದಿನಗಳ ಹಿಂದೆ ‘ಶಕ್ತಿಮಾನ್’ ಖ್ಯಾತಿಯ ನಟ ಮುಖೇಶ್ ಖನ್ನಾ ಅವರು ನಟಿ ಸೋನಾಕ್ಷಿ ಸಿನ್ಹಾ ಅವರ ರಾಮಾಯಣದ ಜ್ಞಾನದ ಬಗ್ಗೆ ಟಾರ್ಗೆಟ್ ಮಾಡಿದ್ದರು. ‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಸೋನಾಕ್ಷಿ ರಾಮಾಯಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ. ಅದರಿಂದ ಅವನು ಅವಳನ್ನು ಮತ್ತು ಅವಳ ಪಾಲನೆಯನ್ನು ಟೀಕಿಸಿದನು. ಆ ನಂತರ ಸೋನಾಕ್ಷಿ ಬಗ್ಗೆ ಮುಖೇಶ್ ಖನ್ನಾ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಈ ವಿಷಯವನ್ನು ಮತ್ತೆ ಪ್ರಸ್ತಾಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಾದ ನಂತರ ವಿಷಯ ಅಲ್ಲಿಗೆ ಮುಗಿಯಿತು ಎಂದುಕೊಂಡಾಗ ಖ್ಯಾತ ಕವಿ ಕುಮಾರ್ ವಿಶ್ವಾಸ್ ಅವರು ಕಾರ್ಯಕ್ರಮವೊಂದರಲ್ಲಿ ಸೋನಾಕ್ಷಿಯವರ ಅಂತರ್ಧರ್ಮೀಯ ವಿವಾಹದ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಇದೀಗ ಶತ್ರುಘ್ನ ಸಿನ್ಹಾ ಈ ಬಗ್ಗೆ ಮೌನ ಮುರಿದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಕುಮಾರ್ ವಿಶ್ವಾಸ್, ‘ನಿಮ್ಮ ಮಕ್ಕಳಿಗೆ ಸೀತಾಜಿಯ ಸಹೋದರಿಯರ ಹೆಸರುಗಳನ್ನು, ಭಗವಾನ್ ರಾಮನ ಒಡಹುಟ್ಟಿದವರ ಹೆಸರನ್ನು ಹೇಳಿಕೊಡಿ. ಅವರಿಗೂ ಹೇಳುವಂತೆ ಮಾಡಿ. ಸುಳಿವು ನೀಡಿ, ಅರ್ಥವಾಗುವವರಿಗೆ ಚಪ್ಪಾಳೆ ತಟ್ಟಿ. ನಿಮ್ಮ ಮಕ್ಕಳು ರಾಮಾಯಣ ಕೇಳುವಂತೆ, ಗೀತೆಯನ್ನು ಓದುವಂತೆ ಮಾಡಿ. ನಿಮ್ಮ ಮನೆ ಹೆಸರು ರಾಮಾಯಣ ಆಗಿರುತ್ತದೆ. ಆದರೆ, ನಿಮ್ಮ ಮನೆಯ ಲಕ್ಷ್ಮೀಯನ್ನು ಬೇರೆ ಯಾರಾದರೂ ತೆಗೆದುಕೊಂಡು ಹೋಗುತ್ತಾರೆ’ ಎಂದಿದ್ದಾರೆ ಅವರು.

ಸೋನಾಕ್ಷಿ ಅವರು ನಟ ಜಹೀರ್ ಇಕ್ಬಾಲ್ ಅವರನ್ನು ಅಂತರ್ಧರ್ಮೀಯ ವಿವಾಹವಾದರು. ಇದರಿಂದ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶತ್ರುಘ್ನ ಸಿನ್ಹಾ ಅವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಬರೆದಿದ್ದಾರೆ. ‘ನಿಮ್ಮ ಅವಲೋಕನ ಮತ್ತು ಮಾಹಿತಿಗಾಗಿ ನಾನು ಇತ್ತೀಚಿನ ಕೆಲವು ಘಟನೆಗಳು, ಹೇಳಿಕೆಗಳು, ಪ್ರತಿಕ್ರಿಯೆಗಳ ಭಾಗವನ್ನು ಇಲ್ಲಿ ಲಗತ್ತಿಸುತ್ತಿದ್ದೇನೆ. ನನ್ನ ಕಣ್ಮಣಿ.. ನನ್ನ ಮಗಳು ಸೋನಾಕ್ಷಿ ಸಿನ್ಹಾ ಅವರಿಗೆ ನನ್ನ ಸಂಪೂರ್ಣ ಬೆಂಬಲ, ಪ್ರೀತಿ ಮತ್ತು ಆಶೀರ್ವಾದ ಸದಾ ಇರುತ್ತದೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ.

ಇದನ್ನೂ ಓದಿ:ಪತಿಯ ಜೊತೆ ಹಿಂದೂ ಹಬ್ಬ ಆಚರಿಸಿದ ಸೋನಾಕ್ಷಿ ಸಿನ್ಹಾ

‘ಇದು ಅವರಿಗೆ ಸಂಬಂಧಿಸಿದ ಪ್ರತಿಕ್ರಿಯೆಗಳು. ಈ ವಿಷಯವನ್ನು ನನ್ನ ಮಗಳು ಬಹಳ ಜಾಣತನದಿಂದ ಸರಿಯಾದ ಸಮಯಕ್ಕೆ ಸರಿಯಾಗಿ ನಿಭಾಯಿಸಿದ್ದಾಳೆ ಎಂದೇ ಹೇಳಬೇಕು. ಆಕೆಯ ಪ್ರತಿಕ್ರಿಯೆಯು ತುಂಬಾ ಮೆಚ್ಚುಗೆ ಪಡೆದಿದೆ. ರಾಜಕೀಯ ಮತ್ತು ಕಾಂಗ್ರೆಸ್ ಪಕ್ಷದ ಕೆಲವು ಸ್ನೇಹಿತರು ನೀಡಿದ ಪ್ರತಿಕ್ರಿಯೆಯಿಂದ ನನಗೆ ಖುಷಿಯಾಗಿದೆ’ ಎಂದಿದ್ದಾರೆ ಅವರು.

‘ಸೋನಾಕ್ಷಿ ಮತ್ತು ನಮ್ಮ ಕಡೆಯಿಂದ ಈ ವಿಷಯ ಇತ್ಯರ್ಥವಾಗಿದೆ. ಇನ್ನೇನಾದರೂ ಹೇಳಬೇಕೆ? ನಿಮ್ಮ ಮಾಹಿತಿಗಾಗಿ ನಾನು ಇಲ್ಲಿ ವಿವಿಧ ಅಂಶಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಜೈ ಹಿಂದ್!’ ಎಂದಿದ್ದಾರೆ ಅವರು. ಇತ್ತೀಚೆಗೆ ಮಾತನಾಡಿರುವ ಕೆಲವು ಕಾಂಗ್ರೆಸ್ ನಾಯಕರು ಸೋನಾಕ್ಷಿ ನಿರ್ಧಾರವನ್ನು ಬೆಂಬಲಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!