AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಲ್ ಹಾಗೂ ತರುಣ್ ಸುಧೀರ್ ನಡುವಿನ ವಯಸ್ಸಿನ ಅಂತರ ಎಷ್ಟು?

ತರುಣ್ ಸುಧೀರ್ ಅವರು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ. ನಟಿ ಸೋನಲ್ ಮೊಂತೆರೋ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ಸ್ಯಾಂಡಲ್​ವುಡ್​ನ ಭರವಸೆಯ ನಟಿ ಎನಿಸಿಕೊಂಡಿದ್ದಾರೆ. ಈಗ ಇಬ್ಬರೂ ವಿವಾಹ ಆಗುತ್ತಿದ್ದಾರೆ. ಇವರ ವಯಸ್ಸಿನ ಅಂತರದ ಬಗ್ಗೆ ಇಲ್ಲಿದೆ ವಿವರ.

ಸೋನಲ್ ಹಾಗೂ ತರುಣ್ ಸುಧೀರ್ ನಡುವಿನ ವಯಸ್ಸಿನ ಅಂತರ ಎಷ್ಟು?
ತರುಣ್-ಸೋನಲ್
ರಾಜೇಶ್ ದುಗ್ಗುಮನೆ
|

Updated on: Jul 23, 2024 | 2:19 PM

Share

ನಟಿ ಸೋನಲ್ ಮೊಂತೆರೋ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರ ಮದುವೆ ವಿಚಾರ. ಸೋನಲ್ ಅವರು ಶೀಘ್ರವೇ ವಿವಾಹ ಆಗುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಜೊತೆ ಇವರ ಮದುವೆ ನಡೆಯಲಿದೆ. ಇವರು ಮಾಡಿರೋ ಪ್ರೀವೆಡ್ಡಿಂಗ್ ವಿಡಿಯೋ ಬಗ್ಗೆ ಸಖತ್ ಸದ್ದು ಮಾಡಿದೆ. ಹಾಗಾದರೆ, ಸೋನಲ್ ಹಾಗೂ ತರುಣ್ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

ತರುಣ್ ಸುಧೀರ್ ಅವರು ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ನಿರ್ದೇಶಕನಾಗಿ ಸ್ಯಾಂಡಲ್​ವುಡ್​ನಲ್ಲಿ ಮೂರು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ‘ಚೌಕ’, ‘ರಾಬರ್ಟ್’ ಹಾಗೂ ‘ಕಾಟೇರ’ ಚಿತ್ರಗಳನ್ನು ತರುಣ್ ನಿರ್ದೇಶನ ಮಾಡಿದ್ದಾರೆ. ಈ ಮೂರು ಚಿತ್ರಗಳು ಮೆಚ್ಚುಗೆ ಪಡೆದಿವೆ. ‘ರಾಬರ್ಟ್’ ಸಿನಿಮಾದಲ್ಲಿ ಸೋನಲ್ ನಟಿಸಿದ್ದರು. ಇವರ ಮಧ್ಯೆ ಪ್ರೀತಿ ಮೂಡಿತು. ಈಗ ಇಬ್ಬರೂ ವಿವಾಹ ಆಗುತ್ತಿದ್ದಾರೆ.

ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಅಂದರೆ ಅವರಿಗೆ ಇನ್ನು ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ. ಚಿತ್ರರಂಗದಲ್ಲಿ ವಯಸ್ಸಿನ ಅಂತರವನ್ನು ಯಾರೂ ಅಷ್ಟು ಗಂಭೀರವಾಗಿ ಸ್ವೀಕರಿಸುವುದಿಲ್ಲ.

ಇದನ್ನೂ ಓದಿ: ಎಲ್ಲಿ ಪ್ರೀತಿ ಪ್ರಾರಂಭವಾಯಿತೋ ಅಲ್ಲಿಯೇ ಪ್ರೀ-ವೆಡ್ಡಿಂಗ್ ವಿಡಿಯೋ ಮಾಡಿಸಿದ ತರುಣ್-ಸೋನಲ್

ಸೋನಲ್ ಹಾಗೂ ತರುಣ್ ಅವರು ಆಗಸ್ಟ್ 11ರಂದು ವಿವಾಹ ಆಗುತ್ತಿದ್ದಾರೆ. ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮಗಳು ನಡೆಯಲಿದ್ದು, ಆಗಸ್ಟ್ 11ರಂದು ವಿವಾಹ ನಡೆಯಲಿದೆ. ಬೆಂಗಳೂರಿನ ಕೆಂಗೇರಿ ಸಮೀಪದ ಕಲ್ಯಾಣ ಮಂಟಪದಲ್ಲಿ ಈ ವಿವಾಹ ಮಹೋತ್ಸವ ಜರುಗಲಿದೆ. ದರ್ಶನ್ ಅವರಿಗೂ ಈ ವಿವಾಹಕ್ಕೆ ಆಮಂತ್ರಣ ಇದೆ. ಆದರೆ, ಸದ್ಯ ಅವರು ಜೈಲಿನಲ್ಲಿ ಇರುವುದರಿಂದ ಅವರಿಗೆ ಮದುವೆಗೆ ಬರಲು ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು