AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonali Phogat: ಸೋನಾಲಿ ಪೋಗಟ್ ಸಾವಿಗೆ ಟ್ವಿಸ್ಟ್​; ‘ಇದು ಹಾರ್ಟ್​ ಅಟ್ಯಾಕ್​ ಅಲ್ಲ, ಕೊಲೆ’ ಎಂದು ಪುತ್ರಿಯ ಆರೋಪ

Sonali Phogat Death Case: ‘ಸೂಕ್ತ ತನಿಖೆ ಆಗಬೇಕು. ನನ್ನ ತಾಯಿಯ ಸಾವಿಗೆ ನ್ಯಾಯ ಸಿಗಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ಸೋನಾಲಿ ಪೋಗಟ್​​ ಅವರ ಪುತ್ರಿ ಒತ್ತಾಯಿಸಿದ್ದಾರೆ.

Sonali Phogat: ಸೋನಾಲಿ ಪೋಗಟ್ ಸಾವಿಗೆ ಟ್ವಿಸ್ಟ್​; ‘ಇದು ಹಾರ್ಟ್​ ಅಟ್ಯಾಕ್​ ಅಲ್ಲ, ಕೊಲೆ’ ಎಂದು ಪುತ್ರಿಯ ಆರೋಪ
ಸೋನಾಲಿ ಪೋಗಟ್
TV9 Web
| Updated By: ಮದನ್​ ಕುಮಾರ್​|

Updated on: Aug 25, 2022 | 12:18 PM

Share

ನಟಿ-ರಾಜಕಾರಣಿ ಸೋನಾಲಿ ಪೋಗಟ್​ (Sonali Phogat) ಅವರ ನಿಧನದ ಪ್ರಕರಣ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ. 43ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ. ಅವರ ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಘಟನೆಯಿಂದ ತೀವ್ರ ಆಘಾತ ಆಗಿದೆ. ಗೋವಾದಲ್ಲಿ ಆಗಸ್ಟ್​ 23ರಂದು ಅವರು ಹೃದಯಾಘಾತದಿಂದ ಮೃತರಾದರು ಎಂದು ಸುದ್ದಿ ಆಗಿತ್ತು. ಆದರೆ ಈಗ ಅವರ ಸಾವಿನ (Sonali Phogat Death) ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕುಟುಂಬದವರೇ ಹೊಸ ಆರೋಪ ಮಾಡುತ್ತಿದ್ದಾರೆ. ಸೋನಾಲಿ ಪೋಗಟ್​​ ಸಾವಿಗೆ ಹಾರ್ಟ್​ ಅಟ್ಯಾಕ್​ (Heart Attack) ಕಾರಣ ಅಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಅವರ ಪುತ್ರಿ ಆರೋಪಿಸಿದ್ದಾರೆ. ತಾಯಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ. ಸೋನಾಲಿ ಪೋಗಟ್​ ಅವರ ಪರ್ಸನಲ್​ ಮ್ಯಾನೇಜರ್ ಸುಧೀರ್​ ಸಂಗ್ವಾನ್​ ಹಾಗೂ ಸಹಾಯಕ ಸುಖ್ವಿಂದರ್​ ಸಿಂಗ್​ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬುದು ಕುಟುಂಬದವರ ಆರೋಪ.

ಸೋಶಿಯಲ್​ ಮೀಡಿಯಾದಲ್ಲಿ ಸೋನಾಲಿ ಪೋಗಟ್​ ಫೇಮಸ್​ ಆಗಿದ್ದರು. ಟಿಕ್​ ಟಾಕ್​ ಬ್ಯಾನ್​ ಆಗುವುದಕ್ಕೂ ಮುನ್ನ ಅವರು ಅನೇಕ ವಿಡಿಯೋಗಳನ್ನು ಮಾಡಿ ಜನಪ್ರಿಯತೆ ಪಡೆದಿದ್ದರು. 2020ರಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ‘ಹಿಂದಿ ಬಿಗ್​ ಬಾಸ್​’ ಪ್ರವೇಶಿಸಿದ್ದರು. ಅಲ್ಲಿಯೂ ಅವರು ಗಮನ ಸೆಳೆದಿದ್ದರು. 2019ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಕುಲದೀಪ್ ಬಿಷ್ಣೋಯ್ ವಿರುದ್ಧ ಹರ್ಯಾಣದ ಆದಂಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋನಾಲಿ ಕಣಕ್ಕಿಳಿದಿದ್ದರು. ಈಗ ಅವರ ಸಾವಿನ ಪ್ರಕರಣ ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ.

‘ಸೂಕ್ತ ತನಿಖೆ ಆಗಬೇಕು. ನನ್ನ ತಾಯಿಯ ಸಾವಿಗೆ ನ್ಯಾಯ ಸಿಗಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ಸೋನಾಲಿ ಪೋಗಟ್​​ ಅವರ ಪುತ್ರಿ ಹೇಳಿದ್ದಾರೆ. ಎಎನ್​ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ತಿಳಿಸಿದ್ದಾರೆ ಎಂದು ವರದಿ ಆಗಿದೆ. ‘ಆರೋಪಿಗಳ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸದ ಹೊರತು ನಾವು ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಗೆ ನೀಡುವುದಿಲ್ಲ’ ಎಂದು ಸೋನಾಲಿ ಪೋಗಟ್​ ಸಹೋದರ ರಿಂಕು ಧಾಕಾ ಹೇಳಿದ್ದರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಕುಟುಂಬದವರು ಒತ್ತಾಯಿಸಿದ ಬಳಿಕ ಪೊಲೀಸರು ಕೇಸ್​ ದಾಖಲು ಮಾಡಿಕೊಂಡಿದ್ದಾರಾದರೂ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸೋನಾಲಿ ಪೋಗಟ್​ ಕುಟುಂಬದವರು ಆರೋಪಿಸುತ್ತಿದ್ದಾರೆ. ‘ಗೋವಾ ಪೊಲೀಸರು ತುಂಬ ಆರಾಮಾಗಿ ಇದ್ದಾರೆ. ಕುಟುಂಬದವರ ಜೊತೆ ಅವರು ಸಹಕರಿಸುತ್ತಿಲ್ಲ. ಕೇಸ್​ ತೆಗೆದುಕೊಂಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿ ಸರಿಯಾಗಿ ತನಿಖೆ ನಡೆಯದಿದ್ದರೆ ನಾವು ಹೊಸದಾಗಿ ಮರಣೋತ್ತರ ಪರೀಕ್ಷೆ ಮಾಡಿಸುತ್ತೇವೆ’ ಎಂದು ಸಹೋದರ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!