AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳನ್ನು ಪ್ರಶಂಸಿಸಲು ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ; ರಿಯಾಲಿಟಿ ಶೋ ಬಗ್ಗೆ ಸೋನು ನಿಗಮ್​ ಬೇಸರ

Sonu Nigam: ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ.

ಸ್ಪರ್ಧಿಗಳನ್ನು ಪ್ರಶಂಸಿಸಲು ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ; ರಿಯಾಲಿಟಿ ಶೋ ಬಗ್ಗೆ ಸೋನು ನಿಗಮ್​ ಬೇಸರ
ಸ್ಪರ್ಧಿಗಳನ್ನು ಪ್ರಶಂಸಿಸಲು ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ; ರಿಯಾಲಿಟಿ ಶೋ ಬಗ್ಗೆ ಸೋನು ನಿಗಮ್​ ಬೇಸರ
TV9 Web
| Edited By: |

Updated on:Jul 19, 2021 | 10:14 PM

Share

ಇಂಡಿಯನ್​ ಐಡಲ್​ ಶೋ ಬಗ್ಗೆ ಸಾಕಷ್ಟು ಜನರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಟಿಆರ್​ಪಿಗೋಸ್ಕರ ಇಲ್ಲ-ಸಲ್ಲದ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಜಡ್ಜ್​ ಹಾಗೂ ಸ್ಪರ್ಧಿಗಳು ಕಿಡಿಕಾರಿದ್ದರು. ಈಗ ರಿಯಾಲಿಟಿ ಶೋ ಜಡ್ಜ್​ಗಳು ಮಾಡುವ ತಪ್ಪುಗಳ ಬಗ್ಗೆ ಸೋನು ನಿಗಮ್​ ಬೇಸರ ಹೊರ ಹಾಕಿದ್ದಾರೆ.

‘ಸ್ಪರ್ಧಿಗಳನ್ನು ಪ್ರಶಂಸಿಸಲು ಹೆಚ್ಚಿನ ಸಮಯ ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ. ಆದರೆ ಇದು ಸ್ಪರ್ಧಿಗಳಿಗೆ ಮತ್ತು ಅವರ ವೃತ್ತಿಜೀವನಕ್ಕೆ ಒಳ್ಳೆಯದಲ್ಲ. ನಾವು ಜಡ್ಜ್​ಗಳು, ಮಾರ್ಗದರ್ಶಕರು, ನಮಗೆ ಒಂದು ಜವಾಬ್ದಾರಿ ಇದೆ. ಜಡ್ಜ್​​ಗಳಾಗಿ ನಾವು ಅವರಿಗೆ ಪ್ರಾಮಾಣಿಕ ವಿಮರ್ಶೆ ಮತ್ತು ಪ್ರತಿಕ್ರಿಯೆಯನ್ನು ನೀಡಬೇಕು’ ಎಂದಿದ್ದಾರೆ ಸೋನು ನಿಗಮ್.

‘ನೀವು ಅವರನ್ನು ಹೊಗಳುತ್ತಲೇ ಇದ್ದರೆ ಅವರಿಗೆ ಎಂದಿಗೂ ಸತ್ಯ ತಿಳಿಯುವುದಿಲ್ಲ. ಅವರ ಪರ್ಫಾರ್ಮೆನ್ಸ್​ ಉತ್ತಮವಾಗಿದೆಯೋ ಅಥವಾ ಇಲ್ಲವೋ ಎನ್ನುವುದನ್ನು ಅವರು ಹೇಗೆ ಅರ್ಥಮಾಡಿಕೊಳ್ಳುತ್ತಾರೆ? ನಿಮ್ಮ ತಪ್ಪುಗಳ ಮೂಲಕ ನೀವು ಕಲಿಯುತ್ತೀರಿ, ಅದು ಒಳ್ಳೆಯದು. ವೇದಿಕೆಯಲ್ಲಿ ಏನಾದರೂ ತಪ್ಪಾದಲ್ಲಿ, ನಿಮಗೆ ಸಹಾಯ ಮಾಡಲು ನಾವು ಇಲ್ಲಿದ್ದೇವೆ’ ಎಂದಿದ್ದಾರೆ ಸೋನು ನಿಗಮ್.

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ‘ಇಂಡಿಯನ್​ ಐಡಲ್​’  ಎಲಿಮಿನೇಷನ್​ ಪ್ರಕ್ರಿಯೆಯಲ್ಲಿ ಗಾಯಕ ಆಶಿಷ್​ ಕುಲಕರ್ಣಿ ಅವರನ್ನು ಎಲಿಮಿನೇಟ್​ ಮಾಡಲಾಗಿದೆ. ಈ ಬಗ್ಗೆ ಪ್ರೇಕ್ಷಕರಿಗೆ ತೀವ್ರ ಬೇಸರ ಆಗಿದೆ. ಮತ್ತೋರ್ವ ಗಾಯಕಿ ಷಣ್ಮುಖಪ್ರಿಯಾ ಅವರು ಎಲಿಮಿನೇಷನ್​ನಿಂದ ಬಜಾವ್​ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆದಿತ್ತು. ಇಂಡಿಯನ್​ ಐಡಲ್​ ಶೋನಲ್ಲಿ ಮೋಸದ ಎಲಿಮಿನೇಷನ್​ ನಡೆದಿದೆ ಎಂದು ನೆಟ್ಟಿಗರು ಟ್ವೀಟ್​ಮಾಡಿದ್ದರು.

ಇದನ್ನೂ ಓದಿ: ನಿರಂತರ ಬೆದರಿಕೆ; ದರ್ಶನ್​ ಹಿಂಬಾಲಕ ವಿರುದ್ಧ ಸೈಬರ್​ ಪೊಲೀಸರಿಗೆ ಇಂದ್ರಜಿತ್​ ದೂರು

‘ನನ್ನ ಪ್ರೀತಿ, ನಂಬಿಕೆ, ಸ್ಫೂರ್ತಿಗೆ ಇನ್ನೊಂದು ಹೆಸರು ಡಿ ಬಾಸ್’; ದರ್ಶನ್​ ಬೆಂಬಲಕ್ಕೆ ನಿಂತ ಯುವ ನಟ

Published On - 9:36 pm, Mon, 19 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ