AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಹಾಡನ್ನು ನಾನು ಹಾಡಬೇಕಿತ್ತು’; ಬೇಸರ ಮಾಡಿಕೊಂಡ ಸೋನು ನಿಗಮ್

ಸಲೀಂ ಮರ್ಚಂಟ್ ಅವರಿಗೆ ಸೋನು ನಿಗಮ್ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಲೀಂ ಅವರು ಸೋನು ನಿಗಮ್​ಗೆ ಒಂದು ಪ್ರಶ್ನೆ ಇಟ್ಟಿದ್ದರು. ‘ಒಂದು ಹಾಡನ್ನು ನೀವು ಹಾಡಿಲ್ಲ ಮತ್ತು ಆ ಹಾಡನ್ನು ನಿಮಗೆ ಹಾಡಬೇಕು ಎಂದು ಯಾವಾಗಲೂ ಅನಿಸುತ್ತದೆ ಎಂದರೆ ಅದು ಯಾವ ಹಾಡು’ ಎಂದು ಕೇಳಲಾಯಿತು. ಇದಕ್ಕೆ ಸೋನು ಉತ್ತರಿಸಿದ್ದರು.

‘ಆ ಹಾಡನ್ನು ನಾನು ಹಾಡಬೇಕಿತ್ತು’; ಬೇಸರ ಮಾಡಿಕೊಂಡ ಸೋನು ನಿಗಮ್
ಸೋನು ನಿಗಮ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 20, 2024 | 8:08 AM

ಸೋನು ನಿಗಮ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಹಾಡಿದ ಹಾಡುಗಳು ಸೂಪರ್ ಹಿಟ್ ಆಗಿವೆ. ಕನ್ನಡದ ‘ಮಾಯಾವಿ..’ ಹಾಡನ್ನು ಹಾಡಿ ಅವರು ಮತ್ತೆ ಸುದ್ದಿ ಆಗಿದ್ದಾರೆ. ಈ ಹಾಡನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸೋನು ನಿಗಮ್ ಹಾಗೂ ಸಂಜಿತ್ ಹೆಗಡೆ ಜುಗಲ್​ಬಂದಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಸೋನು ನಿಗಮ್ ಅವರು ‘ಮಾಯಾವಿ..’ ಹಾಡಿನ ಬಗ್ಗೆ ಸಂದರ್ಶನ ನೀಡುವಾಗ ಒಂದು ವಿಚಾರ ರಿವೀಲ್ ಮಾಡಿದ್ದಾರೆ.

ಸಲೀಂ ಮರ್ಚಂಟ್ ಅವರಿಗೆ ಸೋನು ನಿಗಮ್ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಲೀಂ ಅವರು ಸೋನು ನಿಗಮ್​ಗೆ ಒಂದು ಪ್ರಶ್ನೆ ಇಟ್ಟಿದ್ದರು. ‘ಒಂದು ಹಾಡನ್ನು ನೀವು ಹಾಡಿಲ್ಲ ಮತ್ತು ಆ ಹಾಡನ್ನು ನಿಮಗೆ ಹಾಡಬೇಕು ಎಂದು ಯಾವಾಗಲೂ ಅನಿಸುತ್ತದೆ ಎಂದರೆ ಅದು ಯಾವ ಹಾಡು’ ಎಂದು ಕೇಳಲಾಯಿತು. ‘ಆ ರೀತಿಯ ಬಹಳಷ್ಟು ಹಾಡುಗಳು ಇವೆ’ ಎಂದರು ಸೋನು ನಿಗಮ್.

ಆದರೆ, ಸೋನು ನಿಗಮ್​ಗೆ ಒಂದು ಹಾಡಿನ ಬಗ್ಗೆ ವಿಶೇಷ ಪ್ರೀತಿ ಇತ್ತು. ಆ ಬಗ್ಗೆ ಹೇಳಿಕೊಂಡರು. ‘ಖುದಾ ಜಾನೆ. ಇದು ನನ್ನ ಫೇವರಿಟ್ ಹಾಡು. ಅದು ನನಗೆ ಸಿಕ್ಕರೆ ಖುಷಿ ಆಗುತ್ತಿತ್ತು. ಆದರೆ, ಕೆಕೆ ಇದನ್ನು ಚೆನ್ನಾಗಿ ಹಾಡಿದ್ದಾರೆ. ನನಗೆ ಸಿಕ್ಕರೆ ನಾನು ಹಾಡುತ್ತಿದ್ದೆ. ಆದರೆ, ಕೆಕೆ ಅಷ್ಟು ಉತ್ತಮವಾಗಿ ಆ ಹಾಡು ಮೂಡಿ ಬರಲು ಸಾಧ್ಯವಾಗುತ್ತಲೇ ಇರಲಿಲ್ಲ’ ಎಂದಿದ್ದಾರೆ ಸೋನು ನಿಗಮ್.

ಇದನ್ನೂ ಓದಿ: ಸಂಜಿತ್ ಹೆಗಡೆ-ಸೋನು ನಿಗಮ್ ಸಮ್ಮಿಲನ; ‘ಮಾಯಾವಿ..’ ಹಾಡು ಸಖತ್ ಇಂಪು

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಬಚನಾ ಯೇ ಹಸೀ’ ಚಿತ್ರದ ಹಾಡು ಇದಾಗಿದೆ. ಖ್ಯಾತ ಗಾಯಕ ಕೆಕೆ ಈ ಹಾಡನ್ನು ಹಾಡಿದ್ದರು. ಈ ಹಾಡು ಭರ್ಜರಿ ಹಿಟ್ ಆಗಿತ್ತು. ಕೆಕೆ ಅವರು ಇಂದು ನಮ್ಮ ಜೊತೆ ಇಲ್ಲ ಅನ್ನೋದು ಬೇಸರದ ವಿಚಾರ. ಅವರು ಕೋಲ್ಕತ್ತಾದಲ್ಲಿ ಕಾನ್ಸರ್ಟ್ ನಡೆಸಿದ್ದರು. ವೇದಿಕೆ ಮೇಲೆ ಹಾಡುವಾಗಲೇ ಅವರಿಗೆ ಸಮಸ್ಯೆ ಉಂಟಾಯಿತು. ಆ ಬಳಿಕ ಅವರು ನಿಧನ ಹೊಂದಿದರು. ಈ ವೇಳೆ ಸೋನು ನಿಗಮ್ ಬೇಸರ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್