AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಹಾಡನ್ನು ನಾನು ಹಾಡಬೇಕಿತ್ತು’; ಬೇಸರ ಮಾಡಿಕೊಂಡ ಸೋನು ನಿಗಮ್

ಸಲೀಂ ಮರ್ಚಂಟ್ ಅವರಿಗೆ ಸೋನು ನಿಗಮ್ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಲೀಂ ಅವರು ಸೋನು ನಿಗಮ್​ಗೆ ಒಂದು ಪ್ರಶ್ನೆ ಇಟ್ಟಿದ್ದರು. ‘ಒಂದು ಹಾಡನ್ನು ನೀವು ಹಾಡಿಲ್ಲ ಮತ್ತು ಆ ಹಾಡನ್ನು ನಿಮಗೆ ಹಾಡಬೇಕು ಎಂದು ಯಾವಾಗಲೂ ಅನಿಸುತ್ತದೆ ಎಂದರೆ ಅದು ಯಾವ ಹಾಡು’ ಎಂದು ಕೇಳಲಾಯಿತು. ಇದಕ್ಕೆ ಸೋನು ಉತ್ತರಿಸಿದ್ದರು.

‘ಆ ಹಾಡನ್ನು ನಾನು ಹಾಡಬೇಕಿತ್ತು’; ಬೇಸರ ಮಾಡಿಕೊಂಡ ಸೋನು ನಿಗಮ್
ಸೋನು ನಿಗಮ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 20, 2024 | 8:08 AM

Share

ಸೋನು ನಿಗಮ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಹಾಡಿದ ಹಾಡುಗಳು ಸೂಪರ್ ಹಿಟ್ ಆಗಿವೆ. ಕನ್ನಡದ ‘ಮಾಯಾವಿ..’ ಹಾಡನ್ನು ಹಾಡಿ ಅವರು ಮತ್ತೆ ಸುದ್ದಿ ಆಗಿದ್ದಾರೆ. ಈ ಹಾಡನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸೋನು ನಿಗಮ್ ಹಾಗೂ ಸಂಜಿತ್ ಹೆಗಡೆ ಜುಗಲ್​ಬಂದಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಸೋನು ನಿಗಮ್ ಅವರು ‘ಮಾಯಾವಿ..’ ಹಾಡಿನ ಬಗ್ಗೆ ಸಂದರ್ಶನ ನೀಡುವಾಗ ಒಂದು ವಿಚಾರ ರಿವೀಲ್ ಮಾಡಿದ್ದಾರೆ.

ಸಲೀಂ ಮರ್ಚಂಟ್ ಅವರಿಗೆ ಸೋನು ನಿಗಮ್ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಲೀಂ ಅವರು ಸೋನು ನಿಗಮ್​ಗೆ ಒಂದು ಪ್ರಶ್ನೆ ಇಟ್ಟಿದ್ದರು. ‘ಒಂದು ಹಾಡನ್ನು ನೀವು ಹಾಡಿಲ್ಲ ಮತ್ತು ಆ ಹಾಡನ್ನು ನಿಮಗೆ ಹಾಡಬೇಕು ಎಂದು ಯಾವಾಗಲೂ ಅನಿಸುತ್ತದೆ ಎಂದರೆ ಅದು ಯಾವ ಹಾಡು’ ಎಂದು ಕೇಳಲಾಯಿತು. ‘ಆ ರೀತಿಯ ಬಹಳಷ್ಟು ಹಾಡುಗಳು ಇವೆ’ ಎಂದರು ಸೋನು ನಿಗಮ್.

ಆದರೆ, ಸೋನು ನಿಗಮ್​ಗೆ ಒಂದು ಹಾಡಿನ ಬಗ್ಗೆ ವಿಶೇಷ ಪ್ರೀತಿ ಇತ್ತು. ಆ ಬಗ್ಗೆ ಹೇಳಿಕೊಂಡರು. ‘ಖುದಾ ಜಾನೆ. ಇದು ನನ್ನ ಫೇವರಿಟ್ ಹಾಡು. ಅದು ನನಗೆ ಸಿಕ್ಕರೆ ಖುಷಿ ಆಗುತ್ತಿತ್ತು. ಆದರೆ, ಕೆಕೆ ಇದನ್ನು ಚೆನ್ನಾಗಿ ಹಾಡಿದ್ದಾರೆ. ನನಗೆ ಸಿಕ್ಕರೆ ನಾನು ಹಾಡುತ್ತಿದ್ದೆ. ಆದರೆ, ಕೆಕೆ ಅಷ್ಟು ಉತ್ತಮವಾಗಿ ಆ ಹಾಡು ಮೂಡಿ ಬರಲು ಸಾಧ್ಯವಾಗುತ್ತಲೇ ಇರಲಿಲ್ಲ’ ಎಂದಿದ್ದಾರೆ ಸೋನು ನಿಗಮ್.

ಇದನ್ನೂ ಓದಿ: ಸಂಜಿತ್ ಹೆಗಡೆ-ಸೋನು ನಿಗಮ್ ಸಮ್ಮಿಲನ; ‘ಮಾಯಾವಿ..’ ಹಾಡು ಸಖತ್ ಇಂಪು

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಬಚನಾ ಯೇ ಹಸೀ’ ಚಿತ್ರದ ಹಾಡು ಇದಾಗಿದೆ. ಖ್ಯಾತ ಗಾಯಕ ಕೆಕೆ ಈ ಹಾಡನ್ನು ಹಾಡಿದ್ದರು. ಈ ಹಾಡು ಭರ್ಜರಿ ಹಿಟ್ ಆಗಿತ್ತು. ಕೆಕೆ ಅವರು ಇಂದು ನಮ್ಮ ಜೊತೆ ಇಲ್ಲ ಅನ್ನೋದು ಬೇಸರದ ವಿಚಾರ. ಅವರು ಕೋಲ್ಕತ್ತಾದಲ್ಲಿ ಕಾನ್ಸರ್ಟ್ ನಡೆಸಿದ್ದರು. ವೇದಿಕೆ ಮೇಲೆ ಹಾಡುವಾಗಲೇ ಅವರಿಗೆ ಸಮಸ್ಯೆ ಉಂಟಾಯಿತು. ಆ ಬಳಿಕ ಅವರು ನಿಧನ ಹೊಂದಿದರು. ಈ ವೇಳೆ ಸೋನು ನಿಗಮ್ ಬೇಸರ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ