AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹೀರೋ ಸೋನು ಸೂದ್​ ಕಡೆಯಿಂದ ಬೆಂಗಳೂರಿನ 5 ಸಾವಿರ ಜನರಿಗೆ ನಿತ್ಯ ಆಹಾರ ವಿತರಣೆ

ಸೂದ್​ ಚಾರಿಟಿ ಫೌಂಡೇಷನ್​ ವತಿಯಿಂದ ಈ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ‘ಫುಡ್​ ಫ್ರಮ್​ ಸೂದ್​​’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಮತ್ತು ಪೊಲೀಸರು ಕೂಡ ಸಾಥ್ ನೀಡಿದ್ದಾರೆ.

ರಿಯಲ್​ ಹೀರೋ ಸೋನು ಸೂದ್​ ಕಡೆಯಿಂದ ಬೆಂಗಳೂರಿನ 5 ಸಾವಿರ ಜನರಿಗೆ ನಿತ್ಯ ಆಹಾರ ವಿತರಣೆ
ಸೋನು ಸೂದ್​
ಮದನ್​ ಕುಮಾರ್​
|

Updated on: May 27, 2021 | 1:19 PM

Share

ನಟ ಸೋನು ಸೂದ್​ ಅವರು ತಮ್ಮ ಸಿನಿಮಾಗಳಿಗಿಂತಲೂ ಸಮಾಜಸೇವೆ ಕಾರಣದಿಂದಲೇ ಹೆಚ್ಚು ಫೇಮಸ್​ ಆಗಿದ್ದಾರೆ. ಒಂದು ಕಾಲದಲ್ಲಿ ಎಲ್ಲ ಸಿನಿಮಾಗಳಲ್ಲಿ ವಿಲನ್​ ಆಗಿರುತ್ತಿದ್ದ ಅವರು ಈಗ ಜನರ ಪಾಲಿನ ರಿಯಲ್​ ಹೀರೋ. ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಶುರುವಾದ ಅವರ ಸಮಾಜಮುಖಿ ಕಾರ್ಯಗಳು ಈಗಲೂ ಮುಂದುವರಿದಿವೆ. ದೇಶಾದ್ಯಂತ ಕೊವಿಡ್​ನಿಂದ ಸಂಕಷ್ಟ ಉಂಟಾಗಿದ್ದು, ಕಷ್ಟದಲ್ಲಿರುವ ಜನರಿಗೆ ಸೋನು ಸೂದ್​ ಸಹಾಯ ಮಾಡುತ್ತಿದ್ದಾರೆ. ಬೆಂಗಳೂರಿನ ಸ್ಲಂ ನಿವಾಸಿಗಳಿಗೆ ಪ್ರತಿ ದಿನ ಉಚಿತವಾಗಿ ಆಹಾರ ವಿತರಿಸಲು ಅವರ ಟ್ರಸ್ಟ್​ ಮುಂದಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಮಿತಿಮೀರಿರುವುದರಿಂದ ಆಕ್ಸಿಜನ್​ ಸಿಲಿಂಡರ್​ಗಳ ಕೊರತೆ ಉಂಟಾಗಿದೆ. ಇದನ್ನು ಮನಗಂಡಿರುವ ಸೋನು ಸೂದ್​ ಅವರು ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ಆಕ್ಸಿಜನ್​ ಕಾನ್ಸಂಟ್ರೇಟರ್​ಗಳನ್ನು ಉಚಿತವಾಗಿ ಒದಗಿಸುವ ಕಾರ್ಯಕ್ಕೆ ಜಾಲನೆ ನೀಡಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿ ದಿನ ಐದು ಸಾವಿರ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಿಸುತ್ತಿದ್ದಾರೆ.

ಸೂದ್​ ಚಾರಿಟಿ ಫೌಂಡೇಷನ್​ ವತಿಯಿಂದ ಈ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ‘ಫುಡ್​ ಫ್ರಮ್​ ಸೂದ್​’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಹಾಗೂ ಕರ್ನಾಟಕ ರಾಜ್ಯ, ರೈಲ್ವೇ ಪೊಲೀಸರು ಸಾಥ್ ನೀಡಿದ್ದಾರೆ. ಸೂದ್​ ಚಾರಿಟಿ ಫೌಂಡೇಷನ್ ಸ್ವಯಂ ಸೇವಕರ ಈ ಕೆಲಸಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಮಾಲೀಕ ಇಬ್ರಾಹಿಂ ಕೈ ಜೋಡಿಸಿದ್ದಾರೆ. ಪ್ರತಿ ದಿನ 5 ಸಾವಿರ ಜನರಿಗೆ ಉಡುಗೆ ಮಾಡಲು ಇಬ್ರಾಹಿಂ ಅವರು ಉಚಿತವಾಗಿ ತಮ್ಮ ರೆಸ್ಟೊರೆಂಟ್​ ಬಿಟ್ಟುಕೊಟ್ಟಿದ್ದಾರೆ.

ಮುಂಬೈನಲ್ಲಿ ಸಹಾಯಕ್ಕಾಗಿ ಪ್ರತಿ ದಿನ ಸೋನು ಸೂದ್​ ಅವರ ಮನೆ ಮುಂದೆ ಜನರು ಜಮಾಯಿಸುತ್ತಿದ್ದಾರೆ. ಇತ್ತೀಚೆಗೆ ಕೆಲವರು ಬಂದು ಸೋನು ಕಾಲಿಗೆ ಬೀಳಲು ಕೂಡ ಮುಂದಾಗಿದ್ದರು. ಆಪತ್ತಿನ ಕಾಲದಲ್ಲಿ ರಿಯಲ್​ ಹೀರೋ ಕಡೆಯಿಂದ ಸಿಕ್ಕ ಸೂಕ್ತ ನೆರವಿನಿಂದಾಗಿ ಅನೇಕರ ಜೀವ ಉಳಿದಿದೆ. ಕೆಲವರು ಸೋನು ಸೂದ್​ ಹೆಸರು ಹೇಳಿಕೊಂಡು ದೇಣಿಗೆ ಸಂಗ್ರಹಿಸುವ ಕಳ್ಳ ದಂದೆ ಕೂಡ ನಡೆಸುತ್ತಿದ್ದಾರೆ. ಆ ಬಗ್ಗೆ ಹುಷಾರಾಗಿ ಇರಬೇಕು ಎಂದು ಜನರಿಗೆ ಸೋನು ಸೂದ್​ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ

ರೋಗಿಗಳಿಗೆ ಚಿಕಿತ್ಸೆ ನೀಡೋದನ್ನು ನಿಮ್ಮಿಂದ ಕಲಿಯಬೇಕಿಲ್ಲ; ಸೋನು ಸೂದ್​ ವಿರುದ್ಧ ತಿರುಗಿಬಿದ್ದ ವೈದ್ಯರು

Follow Us
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್