Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹೀರೋ ಸೋನು ಸೂದ್​ ಕಡೆಯಿಂದ ಬೆಂಗಳೂರಿನ 5 ಸಾವಿರ ಜನರಿಗೆ ನಿತ್ಯ ಆಹಾರ ವಿತರಣೆ

ಸೂದ್​ ಚಾರಿಟಿ ಫೌಂಡೇಷನ್​ ವತಿಯಿಂದ ಈ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ‘ಫುಡ್​ ಫ್ರಮ್​ ಸೂದ್​​’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಮತ್ತು ಪೊಲೀಸರು ಕೂಡ ಸಾಥ್ ನೀಡಿದ್ದಾರೆ.

ರಿಯಲ್​ ಹೀರೋ ಸೋನು ಸೂದ್​ ಕಡೆಯಿಂದ ಬೆಂಗಳೂರಿನ 5 ಸಾವಿರ ಜನರಿಗೆ ನಿತ್ಯ ಆಹಾರ ವಿತರಣೆ
ಸೋನು ಸೂದ್​
Follow us
ಮದನ್​ ಕುಮಾರ್​
|

Updated on: May 27, 2021 | 1:19 PM

ನಟ ಸೋನು ಸೂದ್​ ಅವರು ತಮ್ಮ ಸಿನಿಮಾಗಳಿಗಿಂತಲೂ ಸಮಾಜಸೇವೆ ಕಾರಣದಿಂದಲೇ ಹೆಚ್ಚು ಫೇಮಸ್​ ಆಗಿದ್ದಾರೆ. ಒಂದು ಕಾಲದಲ್ಲಿ ಎಲ್ಲ ಸಿನಿಮಾಗಳಲ್ಲಿ ವಿಲನ್​ ಆಗಿರುತ್ತಿದ್ದ ಅವರು ಈಗ ಜನರ ಪಾಲಿನ ರಿಯಲ್​ ಹೀರೋ. ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಶುರುವಾದ ಅವರ ಸಮಾಜಮುಖಿ ಕಾರ್ಯಗಳು ಈಗಲೂ ಮುಂದುವರಿದಿವೆ. ದೇಶಾದ್ಯಂತ ಕೊವಿಡ್​ನಿಂದ ಸಂಕಷ್ಟ ಉಂಟಾಗಿದ್ದು, ಕಷ್ಟದಲ್ಲಿರುವ ಜನರಿಗೆ ಸೋನು ಸೂದ್​ ಸಹಾಯ ಮಾಡುತ್ತಿದ್ದಾರೆ. ಬೆಂಗಳೂರಿನ ಸ್ಲಂ ನಿವಾಸಿಗಳಿಗೆ ಪ್ರತಿ ದಿನ ಉಚಿತವಾಗಿ ಆಹಾರ ವಿತರಿಸಲು ಅವರ ಟ್ರಸ್ಟ್​ ಮುಂದಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಮಿತಿಮೀರಿರುವುದರಿಂದ ಆಕ್ಸಿಜನ್​ ಸಿಲಿಂಡರ್​ಗಳ ಕೊರತೆ ಉಂಟಾಗಿದೆ. ಇದನ್ನು ಮನಗಂಡಿರುವ ಸೋನು ಸೂದ್​ ಅವರು ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ಆಕ್ಸಿಜನ್​ ಕಾನ್ಸಂಟ್ರೇಟರ್​ಗಳನ್ನು ಉಚಿತವಾಗಿ ಒದಗಿಸುವ ಕಾರ್ಯಕ್ಕೆ ಜಾಲನೆ ನೀಡಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿ ದಿನ ಐದು ಸಾವಿರ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಿಸುತ್ತಿದ್ದಾರೆ.

ಸೂದ್​ ಚಾರಿಟಿ ಫೌಂಡೇಷನ್​ ವತಿಯಿಂದ ಈ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ‘ಫುಡ್​ ಫ್ರಮ್​ ಸೂದ್​’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಹಾಗೂ ಕರ್ನಾಟಕ ರಾಜ್ಯ, ರೈಲ್ವೇ ಪೊಲೀಸರು ಸಾಥ್ ನೀಡಿದ್ದಾರೆ. ಸೂದ್​ ಚಾರಿಟಿ ಫೌಂಡೇಷನ್ ಸ್ವಯಂ ಸೇವಕರ ಈ ಕೆಲಸಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಮಾಲೀಕ ಇಬ್ರಾಹಿಂ ಕೈ ಜೋಡಿಸಿದ್ದಾರೆ. ಪ್ರತಿ ದಿನ 5 ಸಾವಿರ ಜನರಿಗೆ ಉಡುಗೆ ಮಾಡಲು ಇಬ್ರಾಹಿಂ ಅವರು ಉಚಿತವಾಗಿ ತಮ್ಮ ರೆಸ್ಟೊರೆಂಟ್​ ಬಿಟ್ಟುಕೊಟ್ಟಿದ್ದಾರೆ.

ಮುಂಬೈನಲ್ಲಿ ಸಹಾಯಕ್ಕಾಗಿ ಪ್ರತಿ ದಿನ ಸೋನು ಸೂದ್​ ಅವರ ಮನೆ ಮುಂದೆ ಜನರು ಜಮಾಯಿಸುತ್ತಿದ್ದಾರೆ. ಇತ್ತೀಚೆಗೆ ಕೆಲವರು ಬಂದು ಸೋನು ಕಾಲಿಗೆ ಬೀಳಲು ಕೂಡ ಮುಂದಾಗಿದ್ದರು. ಆಪತ್ತಿನ ಕಾಲದಲ್ಲಿ ರಿಯಲ್​ ಹೀರೋ ಕಡೆಯಿಂದ ಸಿಕ್ಕ ಸೂಕ್ತ ನೆರವಿನಿಂದಾಗಿ ಅನೇಕರ ಜೀವ ಉಳಿದಿದೆ. ಕೆಲವರು ಸೋನು ಸೂದ್​ ಹೆಸರು ಹೇಳಿಕೊಂಡು ದೇಣಿಗೆ ಸಂಗ್ರಹಿಸುವ ಕಳ್ಳ ದಂದೆ ಕೂಡ ನಡೆಸುತ್ತಿದ್ದಾರೆ. ಆ ಬಗ್ಗೆ ಹುಷಾರಾಗಿ ಇರಬೇಕು ಎಂದು ಜನರಿಗೆ ಸೋನು ಸೂದ್​ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ

ರೋಗಿಗಳಿಗೆ ಚಿಕಿತ್ಸೆ ನೀಡೋದನ್ನು ನಿಮ್ಮಿಂದ ಕಲಿಯಬೇಕಿಲ್ಲ; ಸೋನು ಸೂದ್​ ವಿರುದ್ಧ ತಿರುಗಿಬಿದ್ದ ವೈದ್ಯರು

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್