AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾದರ್ಸ್​ ಡೇ ದಿನವೇ ಮಗನಿಗೆ 3 ಕೋಟಿ ರೂಪಾಯಿ ಕಾರು ಉಡುಗೊರೆ ನೀಡಿದ ಸೋನು ಸೂದ್​?

ಸೋನು ಸೂದ್​ ಹಿರಿಯ ಮಗ ಇಶಾನ್​ಗೆ 3 ಕೋಟಿ ರೂಪಾಯಿ ಕಾರ್​ ಗಿಫ್ಟ್​ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ.

ಫಾದರ್ಸ್​ ಡೇ ದಿನವೇ ಮಗನಿಗೆ 3 ಕೋಟಿ ರೂಪಾಯಿ ಕಾರು ಉಡುಗೊರೆ ನೀಡಿದ ಸೋನು ಸೂದ್​?
ಸೋನು ಸೂದ್​
ರಾಜೇಶ್ ದುಗ್ಗುಮನೆ
|

Updated on: Jun 20, 2021 | 8:18 PM

Share

ನಟ ಸೋನು ಸೂದ್​ ತಾವು ದುಡಿದ ಹಣವನ್ನು ಒಳ್ಳೆಯ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಅವರು ಎಲ್ಲರ ಸಹಾಯಕ್ಕೆ ನಿಂತಿದ್ದಾರೆ. ಟ್ವೀಟ್​ ಮಾಡಿದ ಕೆಲವೇ ಹೊತ್ತಿನಲ್ಲಿ ಜನಸಾಮಾನ್ಯರಿಗೆ ಸಹಾಯ ಸಿಗುತ್ತಿದೆ. ಈಗ ಸೋನು ಸೂದ್​ ಹಿರಿಯ ಮಗ ಇಶಾನ್​ಗೆ 3 ಕೋಟಿ ರೂಪಾಯಿ ಕಾರ್​ ಗಿಫ್ಟ್​ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ದಿನದಂದೇ ಸೋನು ಲಕ್ಸುರಿ ಕಾರನ್ನು ಮಗನಿಗೆ ನೀಡಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸಾಕ್ಷ್ಯ ಎಂಬಂತೆ, ಶನಿವಾರ ಐಷಾರಾಮಿ ಕಾರು ಸೋನು ಸೂದ್​ ಮನೆ ಎದುರು ನಿಂತಿತ್ತು. ಇದನ್ನು ನೋಡಿದ ಸಾಕಷ್ಟು ಜನರು ‘ಸೋನು ಮಗನಿಗೆ ಕಾರ್​ ಉಡುಗೊರೆ ನೀಡಿದ್ದಾರೆ’ ಎಂದು ಹೇಳಿಕೊಂಡಿದ್ದರು. ಆದರೆ, ಇದರ ಅಸಲಿಯತ್ತನ್ನು ಸೋನು ತೆರೆದಿಟ್ಟಿದ್ದಾರೆ.

‘ಮಗನಿಗೆ ಕಾರು ನೀಡಿದ ವಿಚಾರದಲ್ಲಿ ಯಾವುದೇ ಸತ್ಯವಿಲ್ಲ. ನಾನು ನನ್ನ ಮಗನಿಗಾಗಿ ಕಾರು ಖರೀದಿ ಮಾಡಿಲ್ಲ. ಟ್ರಯಲ್​ಗೋಸ್ಕರ ಆ ಕಾರನ್ನು ನಮ್ಮ ಮನೆಗೆ ತರಲಾಗಿತ್ತು. ನಾವು ಟೆಸ್ಟ್​ ರೈಡ್​ ಮಾಡಿದ್ದೇವೆ ಅಷ್ಟೆ. ನಾವು ಆ ಕಾರನ್ನು ಖರೀದಿ ಮಾಡಿಲ್ಲ’ ಎಂದು ಸೋನು ಸ್ಪಷ್ಟನೆ ನೀಡಿದ್ದಾರೆ.

‘ಫಾದರ್ಸ್​ ಡೇ ದಿನ ನನ್ನ ಮಕ್ಕಳಿಗೆ ನಾನೇಕೆ ಉಡುಗೊರೆ ನೀಡಲಿ? ನನ್ನ ಮಕ್ಕಳೇ ನನಗೆ ಗಿಫ್ಟ್ ನೀಡಬೇಕು ಅಲ್ಲವೇ? ನಾನು ನನ್ನ ಮಕ್ಕಳ ಜತೆ ಸಮಯ ಕಳೆಯುತ್ತಿದ್ದೇನೆ. ಅದುವೇ ಖುಷಿಯ ವಿಚಾರ’ ಎಂದು ಸೋನು ಸೂದ್​ ಬರೆದುಕೊಂಡಿದ್ದಾರೆ. ಈ ಮೂಲಕ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಬ್ರೇಕ್​ ಹಾಕಿದ್ದಾರೆ.

ಇನ್ನು, ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಸೋನು ತಂದೆಯನ್ನು ನೆನಪು ಮಾಡಿಕೊಂಡಿದ್ದಾರೆ. ‘ಅಪ್ಪ ನೀವು ನಮ್ಮೊಂದಿಗಿಲ್ಲ. ಆದರೆ, ನಿಮ್ಮ ಫೇವರಿಟ್​ ಸ್ಕೂಟರ್ ನನಗೆ ಅತಿ ಹೆಚ್ಚು ಬೆಲೆಬಾಳುವ ವಸ್ತು’ ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!