AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾದರ್ಸ್​ ಡೇ ದಿನವೇ ಮಗನಿಗೆ 3 ಕೋಟಿ ರೂಪಾಯಿ ಕಾರು ಉಡುಗೊರೆ ನೀಡಿದ ಸೋನು ಸೂದ್​?

ಸೋನು ಸೂದ್​ ಹಿರಿಯ ಮಗ ಇಶಾನ್​ಗೆ 3 ಕೋಟಿ ರೂಪಾಯಿ ಕಾರ್​ ಗಿಫ್ಟ್​ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ.

ಫಾದರ್ಸ್​ ಡೇ ದಿನವೇ ಮಗನಿಗೆ 3 ಕೋಟಿ ರೂಪಾಯಿ ಕಾರು ಉಡುಗೊರೆ ನೀಡಿದ ಸೋನು ಸೂದ್​?
ಸೋನು ಸೂದ್​
ರಾಜೇಶ್ ದುಗ್ಗುಮನೆ
|

Updated on: Jun 20, 2021 | 8:18 PM

Share

ನಟ ಸೋನು ಸೂದ್​ ತಾವು ದುಡಿದ ಹಣವನ್ನು ಒಳ್ಳೆಯ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಅವರು ಎಲ್ಲರ ಸಹಾಯಕ್ಕೆ ನಿಂತಿದ್ದಾರೆ. ಟ್ವೀಟ್​ ಮಾಡಿದ ಕೆಲವೇ ಹೊತ್ತಿನಲ್ಲಿ ಜನಸಾಮಾನ್ಯರಿಗೆ ಸಹಾಯ ಸಿಗುತ್ತಿದೆ. ಈಗ ಸೋನು ಸೂದ್​ ಹಿರಿಯ ಮಗ ಇಶಾನ್​ಗೆ 3 ಕೋಟಿ ರೂಪಾಯಿ ಕಾರ್​ ಗಿಫ್ಟ್​ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸೋನು ಸೂದ್​ ಪ್ರತಿಕ್ರಿಯಿಸಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ದಿನದಂದೇ ಸೋನು ಲಕ್ಸುರಿ ಕಾರನ್ನು ಮಗನಿಗೆ ನೀಡಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸಾಕ್ಷ್ಯ ಎಂಬಂತೆ, ಶನಿವಾರ ಐಷಾರಾಮಿ ಕಾರು ಸೋನು ಸೂದ್​ ಮನೆ ಎದುರು ನಿಂತಿತ್ತು. ಇದನ್ನು ನೋಡಿದ ಸಾಕಷ್ಟು ಜನರು ‘ಸೋನು ಮಗನಿಗೆ ಕಾರ್​ ಉಡುಗೊರೆ ನೀಡಿದ್ದಾರೆ’ ಎಂದು ಹೇಳಿಕೊಂಡಿದ್ದರು. ಆದರೆ, ಇದರ ಅಸಲಿಯತ್ತನ್ನು ಸೋನು ತೆರೆದಿಟ್ಟಿದ್ದಾರೆ.

‘ಮಗನಿಗೆ ಕಾರು ನೀಡಿದ ವಿಚಾರದಲ್ಲಿ ಯಾವುದೇ ಸತ್ಯವಿಲ್ಲ. ನಾನು ನನ್ನ ಮಗನಿಗಾಗಿ ಕಾರು ಖರೀದಿ ಮಾಡಿಲ್ಲ. ಟ್ರಯಲ್​ಗೋಸ್ಕರ ಆ ಕಾರನ್ನು ನಮ್ಮ ಮನೆಗೆ ತರಲಾಗಿತ್ತು. ನಾವು ಟೆಸ್ಟ್​ ರೈಡ್​ ಮಾಡಿದ್ದೇವೆ ಅಷ್ಟೆ. ನಾವು ಆ ಕಾರನ್ನು ಖರೀದಿ ಮಾಡಿಲ್ಲ’ ಎಂದು ಸೋನು ಸ್ಪಷ್ಟನೆ ನೀಡಿದ್ದಾರೆ.

‘ಫಾದರ್ಸ್​ ಡೇ ದಿನ ನನ್ನ ಮಕ್ಕಳಿಗೆ ನಾನೇಕೆ ಉಡುಗೊರೆ ನೀಡಲಿ? ನನ್ನ ಮಕ್ಕಳೇ ನನಗೆ ಗಿಫ್ಟ್ ನೀಡಬೇಕು ಅಲ್ಲವೇ? ನಾನು ನನ್ನ ಮಕ್ಕಳ ಜತೆ ಸಮಯ ಕಳೆಯುತ್ತಿದ್ದೇನೆ. ಅದುವೇ ಖುಷಿಯ ವಿಚಾರ’ ಎಂದು ಸೋನು ಸೂದ್​ ಬರೆದುಕೊಂಡಿದ್ದಾರೆ. ಈ ಮೂಲಕ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಬ್ರೇಕ್​ ಹಾಕಿದ್ದಾರೆ.

ಇನ್ನು, ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಸೋನು ತಂದೆಯನ್ನು ನೆನಪು ಮಾಡಿಕೊಂಡಿದ್ದಾರೆ. ‘ಅಪ್ಪ ನೀವು ನಮ್ಮೊಂದಿಗಿಲ್ಲ. ಆದರೆ, ನಿಮ್ಮ ಫೇವರಿಟ್​ ಸ್ಕೂಟರ್ ನನಗೆ ಅತಿ ಹೆಚ್ಚು ಬೆಲೆಬಾಳುವ ವಸ್ತು’ ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ