Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?

ಈ ಅಭಿಮಾನಿಯ ಹೆಸರು ವೆಂಕಟೇಶ್​. ಸೋನು ಸೂದ್​ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ.

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?
ಸೋನು ಸೂದ್​ ಜೊತೆ ಅಭಿಮಾನಿ ವೆಂಕಟೇಶ್​
Follow us
ಮದನ್​ ಕುಮಾರ್​
|

Updated on: Jun 11, 2021 | 8:12 AM

ನಟ ಸೋನು ಸೂದ್​ ಅವರು ಲಕ್ಷಾಂತರ ಜನರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗಿನಿಂದಲೂ ಅವರು ಹಲವು ಬಗೆಯಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ. ಹಾಗಾಗಿ ಅವರಿಗೆ ಅಸಂಖ್ಯ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ನೂರಾರು ಬಗೆಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುವ ಜನರಿದ್ದಾರೆ. ಇತ್ತೀಚೆಗೆ ವೆಂಕಟೇಶ್​ ಎಂಬ ಯುವಕ ಎಲ್ಲರ ಗಮನ ಸೆಳೆದಿದ್ದಾನೆ. ಸೋನು ಸೂದ್​ ಅವರನ್ನು ಭೇಟಿ ಮಾಡಬೇಕು ಎಂಬ ಕಾರಣಕ್ಕೆ ಆತ ಬರೋಬ್ಬರಿ 700 ಕಿಲೋ ಮೀಟರ್​ ನಡೆದಿದ್ದಾನೆ.

ಈ ಅಭಿಮಾನಿಯ ಹೆಸರು ವೆಂಕಟೇಶ್​. ಹೈದರಾಬಾದ್​ ಮೂಲದ ಈತನಿಗೆ ಸೋನು ಸೂದ್​ ಕಂಡರೆ ಅಪಾರ ಗೌರವ. ಹಾಗಾಗಿ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ. ಈತನ ಅಭಿಮಾನ ಕಂಡು ಸೋನು ಸೂದ್​ ಖುಷಿ ಆಗಿದ್ದಾರೆ ಎಂಬುದೇನೋ ನಿಜ. ಆದರೆ ಬೇರೆ ಯಾರೂ ಹೀಗೆ ಮಾಡಬೇಡಿ ಎಂದು ತಮ್ಮ ಅಭಿಮಾನಿ ಬಳಗಕ್ಕೆ ಅವರು ಬುದ್ಧಿಮಾತು ಹೇಳಿದ್ದಾರೆ.

‘ನನ್ನನ್ನು ಭೇಟಿಯಾಗಲು ವೆಂಕಟೇಶ್​ ಹೈದರಾಬಾದ್​ನಿಂದ ಮುಂಬೈವರೆಗೆ ಬರಿಗಾಲಿನಲ್ಲಿ ನಡೆದುಕೊಂಡು ಬಂದಿದ್ದಾನೆ. ಅವನಿಗೆ ವಾಹನದ ವ್ಯವಸ್ಥೆ ಮಾಡಿದರೂ ಕೂಡ ಅವನು ಅದನ್ನು ಒಪ್ಪಲಿಲ್ಲ. ಅವನು ನನಗೆ ಸ್ಫೂರ್ತಿದಾಯಕವಾಗಿದ್ದಾನೆ. ಆದರೆ ಬೇರೆ ಯಾರೂ ಕೂಡ ಈ ರೀತಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವ ಕಷ್ಟವನ್ನು ತೆಗೆದುಕೊಳ್ಳಲು ನಾನು ಪ್ರೇರಣೆ ನೀಡುವುದಿಲ್ಲ’ ಎಂದು ಸೋನು ಸೂದ್​ ಅವರು ಟ್ವೀಟರ್​ ಮೂಲಕ ತಿಳಿಸಿದ್ದಾರೆ.

ಈ ವರ್ಷ ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದಾಗ ಸೋನು ಸೂದ್​ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದರು. ಅವರ ಸೂದ್​ ಚಾರಿಟಿ ಫೌಂಡೇಶನ್​ ಮೂಲಕ ಲಕ್ಷಾಂತರ ಜನರಿಗೆ ಅವರ ನೆರವಾಗಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ ಮಾಡಿಸುವುದು, ಆಕ್ಸಿಜನ್​ ಸಿಲಿಂಡರ್​ಗಳನ್ನು ಪೂರೈಸುವುದು, ಹಸಿದವರಿಗೆ ಉಚಿತವಾಗಿ ಊಟ ಒದಗಿಸುವುದು ಸೇರಿದಂತೆ ನೂರಾರು ಕೆಲಸಗಳನ್ನು ಅವರು ಮಾಡಿದ್ದಾರೆ. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಪ್ರೀತಿ.

ಇತ್ತೀಚೆಗೆ ಸೋನು ಸೂದ್​ ಬಗ್ಗೆ ಮಾತನಾಡಿದ್ದ ಹುಮಾ ಖುರೇಶಿ. ‘ಸೋನು ಪ್ರಧಾನಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಬೇಕು. ನಾವೆಲ್ಲ ಅವರಿಗೆ ಖಂಡಿತವಾಗಿ ವೋಟ್​ ಹಾಕುತ್ತೇವೆ’ ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್​, ‘ಇದೆಲ್ಲ ಜಾಸ್ತಿ ಆಯಿತು’ ಎಂದಿದ್ದರು.

ಇದನ್ನೂ ಓದಿ:

ಸೋನು ಸೂದ್​ ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು? ಈ ನಟನಿಗೆ ಎಲ್ಲಿಂದ ಬರುತ್ತೆ ಇಷ್ಟೊಂದು ಹಣ?

ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ