AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?

ಈ ಅಭಿಮಾನಿಯ ಹೆಸರು ವೆಂಕಟೇಶ್​. ಸೋನು ಸೂದ್​ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ.

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?
ಸೋನು ಸೂದ್​ ಜೊತೆ ಅಭಿಮಾನಿ ವೆಂಕಟೇಶ್​
ಮದನ್​ ಕುಮಾರ್​
|

Updated on: Jun 11, 2021 | 8:12 AM

Share

ನಟ ಸೋನು ಸೂದ್​ ಅವರು ಲಕ್ಷಾಂತರ ಜನರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗಿನಿಂದಲೂ ಅವರು ಹಲವು ಬಗೆಯಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ. ಹಾಗಾಗಿ ಅವರಿಗೆ ಅಸಂಖ್ಯ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ನೂರಾರು ಬಗೆಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುವ ಜನರಿದ್ದಾರೆ. ಇತ್ತೀಚೆಗೆ ವೆಂಕಟೇಶ್​ ಎಂಬ ಯುವಕ ಎಲ್ಲರ ಗಮನ ಸೆಳೆದಿದ್ದಾನೆ. ಸೋನು ಸೂದ್​ ಅವರನ್ನು ಭೇಟಿ ಮಾಡಬೇಕು ಎಂಬ ಕಾರಣಕ್ಕೆ ಆತ ಬರೋಬ್ಬರಿ 700 ಕಿಲೋ ಮೀಟರ್​ ನಡೆದಿದ್ದಾನೆ.

ಈ ಅಭಿಮಾನಿಯ ಹೆಸರು ವೆಂಕಟೇಶ್​. ಹೈದರಾಬಾದ್​ ಮೂಲದ ಈತನಿಗೆ ಸೋನು ಸೂದ್​ ಕಂಡರೆ ಅಪಾರ ಗೌರವ. ಹಾಗಾಗಿ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ. ಈತನ ಅಭಿಮಾನ ಕಂಡು ಸೋನು ಸೂದ್​ ಖುಷಿ ಆಗಿದ್ದಾರೆ ಎಂಬುದೇನೋ ನಿಜ. ಆದರೆ ಬೇರೆ ಯಾರೂ ಹೀಗೆ ಮಾಡಬೇಡಿ ಎಂದು ತಮ್ಮ ಅಭಿಮಾನಿ ಬಳಗಕ್ಕೆ ಅವರು ಬುದ್ಧಿಮಾತು ಹೇಳಿದ್ದಾರೆ.

‘ನನ್ನನ್ನು ಭೇಟಿಯಾಗಲು ವೆಂಕಟೇಶ್​ ಹೈದರಾಬಾದ್​ನಿಂದ ಮುಂಬೈವರೆಗೆ ಬರಿಗಾಲಿನಲ್ಲಿ ನಡೆದುಕೊಂಡು ಬಂದಿದ್ದಾನೆ. ಅವನಿಗೆ ವಾಹನದ ವ್ಯವಸ್ಥೆ ಮಾಡಿದರೂ ಕೂಡ ಅವನು ಅದನ್ನು ಒಪ್ಪಲಿಲ್ಲ. ಅವನು ನನಗೆ ಸ್ಫೂರ್ತಿದಾಯಕವಾಗಿದ್ದಾನೆ. ಆದರೆ ಬೇರೆ ಯಾರೂ ಕೂಡ ಈ ರೀತಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವ ಕಷ್ಟವನ್ನು ತೆಗೆದುಕೊಳ್ಳಲು ನಾನು ಪ್ರೇರಣೆ ನೀಡುವುದಿಲ್ಲ’ ಎಂದು ಸೋನು ಸೂದ್​ ಅವರು ಟ್ವೀಟರ್​ ಮೂಲಕ ತಿಳಿಸಿದ್ದಾರೆ.

ಈ ವರ್ಷ ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದಾಗ ಸೋನು ಸೂದ್​ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದರು. ಅವರ ಸೂದ್​ ಚಾರಿಟಿ ಫೌಂಡೇಶನ್​ ಮೂಲಕ ಲಕ್ಷಾಂತರ ಜನರಿಗೆ ಅವರ ನೆರವಾಗಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ ಮಾಡಿಸುವುದು, ಆಕ್ಸಿಜನ್​ ಸಿಲಿಂಡರ್​ಗಳನ್ನು ಪೂರೈಸುವುದು, ಹಸಿದವರಿಗೆ ಉಚಿತವಾಗಿ ಊಟ ಒದಗಿಸುವುದು ಸೇರಿದಂತೆ ನೂರಾರು ಕೆಲಸಗಳನ್ನು ಅವರು ಮಾಡಿದ್ದಾರೆ. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಪ್ರೀತಿ.

ಇತ್ತೀಚೆಗೆ ಸೋನು ಸೂದ್​ ಬಗ್ಗೆ ಮಾತನಾಡಿದ್ದ ಹುಮಾ ಖುರೇಶಿ. ‘ಸೋನು ಪ್ರಧಾನಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಬೇಕು. ನಾವೆಲ್ಲ ಅವರಿಗೆ ಖಂಡಿತವಾಗಿ ವೋಟ್​ ಹಾಕುತ್ತೇವೆ’ ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್​, ‘ಇದೆಲ್ಲ ಜಾಸ್ತಿ ಆಯಿತು’ ಎಂದಿದ್ದರು.

ಇದನ್ನೂ ಓದಿ:

ಸೋನು ಸೂದ್​ ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು? ಈ ನಟನಿಗೆ ಎಲ್ಲಿಂದ ಬರುತ್ತೆ ಇಷ್ಟೊಂದು ಹಣ?

ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!