AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ವಿತಾ ತಾಯಿಗೆ ಅನಾರೋಗ್ಯ: ಸಹಾಯಕ್ಕೆ ಬಂದ ಸೋನು ಸೂದ್; ಧನ್ಯವಾದ ಹೇಳಿದ ನಟಿ

ಮಾನ್ವಿತಾ ಅವರ ಕುಟುಂಬದಲ್ಲಿ ಸಮಸ್ಯೆ ಒಂದು ಎದುರಾಗಿತ್ತು. ಇದಕ್ಕೆ ಸೋನು ಸೂದ್ ಫೌಂಡೇಷನ್ ಮೂಲಕ ಪರಿಹಾರ ಸಿಕ್ಕಿದೆ.

ಮಾನ್ವಿತಾ ತಾಯಿಗೆ ಅನಾರೋಗ್ಯ: ಸಹಾಯಕ್ಕೆ ಬಂದ ಸೋನು ಸೂದ್; ಧನ್ಯವಾದ ಹೇಳಿದ ನಟಿ
ಮಾನ್ವಿತಾ-ಸೋನು
TV9 Web
| Edited By: |

Updated on:Aug 25, 2022 | 6:07 PM

Share

ನಟ ಸೋನು ಸೂದ್ (Sonu Sood) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಮಾಡುತ್ತಿರುವ ಒಳ್ಳೆಯ ಕೆಲಸಗಳು ಸಾಕಷ್ಟು ಸುದ್ದಿ ಆಗುತ್ತಿದೆ. ಕೊವಿಡ್ ಮೊದಲನೆ ಅಲೆ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್ ಜನರ ಸಹಾಯಕ್ಕೆ ನಿಂತರು. ನಂತರ ಅದನ್ನೇ ಮುಂದುವರಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಸೋನು ಸಹಾಯ ಮಾಡುತ್ತಲೇ ಬರುತ್ತಿದ್ದಾರೆ. ಅವರಿಂದಾಗಿ ಸಾಕಷ್ಟು ಜೀವಗಳು ಉಳಿದಿವೆ. ಅನೇಕ ಮನೆಗಳು ಬೆಳಗಿವೆ. ಈಗ ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ (Manvita Kamath) ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ನಟಿ ಮಾನ್ವಿತಾ ಕಾಮತ್. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ನಂತರ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಮೂರು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಮಧ್ಯೆ ಅವರ ಕುಟುಂಬದಲ್ಲಿ ಸಮಸ್ಯೆ ಒಂದು ಎದುರಾಗಿತ್ತು. ಇದಕ್ಕೆ ಸೋನು ಸೂದ್ ಫೌಂಡೇಷನ್ ಮೂಲಕ ಪರಿಹಾರ ಸಿಕ್ಕಿದೆ.

ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದೆ. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೋ ಸರ್. ಎಲ್ಲದಕ್ಕೂ ಧನ್ಯವಾದ’ ಎಂದಿದ್ದಾರೆ ಮಾನ್ವಿತಾ ಕಾಮತ್. ‘ನಮ್ಮ ಸಂಕಷ್ಟದಲ್ಲಿ ಏಂಜಲ್ ರೀತಿ ಬಂದಿರಿ. ನಿಮ್ಮಿಂದಾಗಿ ನನ್ನ ತಾಯಿ ಇಂದು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಮಾನ್ವಿತಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?

ಸೋನು ಸೂದ್ ಮಾಡಿದ ಸಹಾಯ ಒಂದೆರಡಲ್ಲ. ಅವರು ಅನೇಕರಿಗೆ ಸಹಾಯ ಮಾಡಿದ್ದಾರೆ. ಈ ಕಾರಣಕ್ಕೆ ಸೋನು ರಿಯಲ್ ಹೀರೋ ಆಗಿದ್ದಾರೆ. ವಿಲನ್ ಪಾತ್ರಗಳ ಮೂಲಕವೇ ಸೋನು ಸೂದ್ ಗಮನ ಸೆಳೆದವರು. ಆದರೆ, ಇತ್ತೀಚೆಗೆ ಅವರು ಹೀರೋ ಪಾತ್ರ ಮಾತ್ರ ಮಾಡುತ್ತಿದ್ದಾರೆ. ಸೋನು ಇಮೇಜ್​ಗೆ ತಕ್ಕಂತಹ ಪಾತ್ರಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

Published On - 5:44 pm, Thu, 25 August 22

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?