AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಆದರೂ ‘ಪುಷ್ಪ’ ತಂಡ ಇಂಥ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ?

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?
ರಶ್ಮಿಕಾ ಮಂದಣ್ಣ, ಸೋನು ಸೂದ್​
TV9 Web
| Edited By: |

Updated on: Aug 01, 2021 | 9:30 AM

Share

ನಟ ಸೋನು ಸೂದ್​ (Sonu Sood) ಮಾಡಿರುವ ಸಮಾಜಮುಖಿ ಕಾರ್ಯಗಳಿಗೆ ಜನರು ಶರಣು ಎಂದಿದ್ದಾರೆ. ಸಿನಿಮಾಗಳಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುವ ಈ ನಟನಿಗೆ ನಿಜಜೀವನದಲ್ಲಿ ‘ರಿಯಲ್​ ಹೀರೋ’ ಎಂಬ ಪಟ್ಟ ಸಿಕ್ಕಿದೆ. ಕಳೆದ ವರ್ಷ ಲಾಕ್​ಡೌನ್​ ಸಮಯದಲ್ಲಿ ಆರಂಭವಾದ ಅವರ ಜನಪರ ಕಾರ್ಯಗಳು ಇಂದಿಗೂ ಮುಂದುವರಿದಿವೆ. ಸೋನು ಸೂದ್​ಗೆ ಸಿನಿಮಾ ಆಫರ್​ಗಳು ಹೆಚ್ಚಾಗಿವೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್​ ಇದೆ. ಇಷ್ಟು ವರ್ಷ ವಿಲನ್​ ಆಗಿ ನಟಿಸುತ್ತಿದ್ದ ಅವರನ್ನು ಜನರು ಇನ್ಮುಂದೆ ನೆಗೆಟಿವ್​ ಪಾತ್ರಗಳಲ್ಲಿ ಒಪ್ಪಿಕೊಳ್ಳುವುದು ಕಷ್ಟ. ಅದರ ನಡುವೆಯೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa) ಚಿತ್ರದ ಕುರಿತು ಒಂದು ಅಚ್ಚರಿಯ ಸುದ್ದಿ ಹರಿದಾಡುತ್ತಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿರುವ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿದೆ. ಎರಡನೇ ಪಾರ್ಟ್​ನಲ್ಲಿ ವಿಲನ್​ ಪಾತ್ರಕ್ಕೆ ಸೋನು ಸೂದ್​ ಅವರಿಗೆ ಆಫರ್​ ನೀಡಲಾಗಿದೆ ಎಂಬ ಸುದ್ದು ಕೇಳಿಬಂದಿದೆ. ಆದರೆ ಈ ಸುದ್ದಿಯ ಬಗ್ಗೆ ಚಿತ್ರತಂಡದವರಾಗಲೀ, ಸೋನು ಸೂದ್​ ಆಗಲೀ ಈವರೆಗೆ ಸ್ಪಷ್ಟನೆ ನೀಡಿಲ್ಲ. ಆದರೆ ದಟ್ಟವಾಗಿ ಹಬ್ಬಿರುವ ಈ ಸುದ್ದಿ​ ಬಗ್ಗೆ ಸೋನು ಸೂದ್​ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಹಾಗಾಗಿ ‘ಪುಷ್ಪ’ ಚಿತ್ರದ ನಿರ್ದೇಶಕ ಸುಕುಮಾರ್​ ಅವರು ಸೋನು ಸೂದ್​ಗೆ ವಿಲನ್​ ಪಾತ್ರ ನೀಡುವುದು ಅಸಾಧ್ಯ ಎಂದು ಒಂದು ವರ್ಗದ ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಕಡೆಗೂ ಅಸಲಿಯತ್ತು ಏನು ಎಂಬುದು ಚಿತ್ರತಂಡದಿಂದಲೇ ಸ್ಪಷ್ಟವಾಗಬೇಕು.

ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದಾರೆ. ಸನ್ನಿ ಲಿಯೋನ್​ ಕೂಡ ಈ ಚಿತ್ರದಲ್ಲಿ ಒಂದು ಐಟಂ ಡ್ಯಾನ್ಸ್​ ಮಾಡಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಆ ಹಾಡಿಗಾಗಿ ಅವರು ಬರೋಬ್ಬರಿ 50 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:

ಇಷ್ಟೆಲ್ಲ ಸಹಾಯ ಮಾಡಿದ ಸೋನು ಸೂದ್​ಗೆ ಜನರಿಂದ ಸಿಕ್ಕಿದ್ದೇನು? ಅದನ್ನು ಅಳತೆ ಮಾಡಲು ಸಾಧ್ಯವಿಲ್ಲ

ತಾಯಿ ಫೋಟೋ ಜೊತೆ ಸೋನು ಸೂದ್​ ಭಾವುಕ ಪತ್ರ; ಮನಮುಟ್ಟುವ ಸಾಲುಗಳು ಇಲ್ಲಿವೆ..

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು