AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಆದರೂ ‘ಪುಷ್ಪ’ ತಂಡ ಇಂಥ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ?

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?
ರಶ್ಮಿಕಾ ಮಂದಣ್ಣ, ಸೋನು ಸೂದ್​
TV9 Web
| Edited By: |

Updated on: Aug 01, 2021 | 9:30 AM

Share

ನಟ ಸೋನು ಸೂದ್​ (Sonu Sood) ಮಾಡಿರುವ ಸಮಾಜಮುಖಿ ಕಾರ್ಯಗಳಿಗೆ ಜನರು ಶರಣು ಎಂದಿದ್ದಾರೆ. ಸಿನಿಮಾಗಳಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುವ ಈ ನಟನಿಗೆ ನಿಜಜೀವನದಲ್ಲಿ ‘ರಿಯಲ್​ ಹೀರೋ’ ಎಂಬ ಪಟ್ಟ ಸಿಕ್ಕಿದೆ. ಕಳೆದ ವರ್ಷ ಲಾಕ್​ಡೌನ್​ ಸಮಯದಲ್ಲಿ ಆರಂಭವಾದ ಅವರ ಜನಪರ ಕಾರ್ಯಗಳು ಇಂದಿಗೂ ಮುಂದುವರಿದಿವೆ. ಸೋನು ಸೂದ್​ಗೆ ಸಿನಿಮಾ ಆಫರ್​ಗಳು ಹೆಚ್ಚಾಗಿವೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್​ ಇದೆ. ಇಷ್ಟು ವರ್ಷ ವಿಲನ್​ ಆಗಿ ನಟಿಸುತ್ತಿದ್ದ ಅವರನ್ನು ಜನರು ಇನ್ಮುಂದೆ ನೆಗೆಟಿವ್​ ಪಾತ್ರಗಳಲ್ಲಿ ಒಪ್ಪಿಕೊಳ್ಳುವುದು ಕಷ್ಟ. ಅದರ ನಡುವೆಯೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa) ಚಿತ್ರದ ಕುರಿತು ಒಂದು ಅಚ್ಚರಿಯ ಸುದ್ದಿ ಹರಿದಾಡುತ್ತಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿರುವ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿದೆ. ಎರಡನೇ ಪಾರ್ಟ್​ನಲ್ಲಿ ವಿಲನ್​ ಪಾತ್ರಕ್ಕೆ ಸೋನು ಸೂದ್​ ಅವರಿಗೆ ಆಫರ್​ ನೀಡಲಾಗಿದೆ ಎಂಬ ಸುದ್ದು ಕೇಳಿಬಂದಿದೆ. ಆದರೆ ಈ ಸುದ್ದಿಯ ಬಗ್ಗೆ ಚಿತ್ರತಂಡದವರಾಗಲೀ, ಸೋನು ಸೂದ್​ ಆಗಲೀ ಈವರೆಗೆ ಸ್ಪಷ್ಟನೆ ನೀಡಿಲ್ಲ. ಆದರೆ ದಟ್ಟವಾಗಿ ಹಬ್ಬಿರುವ ಈ ಸುದ್ದಿ​ ಬಗ್ಗೆ ಸೋನು ಸೂದ್​ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಹಾಗಾಗಿ ‘ಪುಷ್ಪ’ ಚಿತ್ರದ ನಿರ್ದೇಶಕ ಸುಕುಮಾರ್​ ಅವರು ಸೋನು ಸೂದ್​ಗೆ ವಿಲನ್​ ಪಾತ್ರ ನೀಡುವುದು ಅಸಾಧ್ಯ ಎಂದು ಒಂದು ವರ್ಗದ ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಕಡೆಗೂ ಅಸಲಿಯತ್ತು ಏನು ಎಂಬುದು ಚಿತ್ರತಂಡದಿಂದಲೇ ಸ್ಪಷ್ಟವಾಗಬೇಕು.

ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದಾರೆ. ಸನ್ನಿ ಲಿಯೋನ್​ ಕೂಡ ಈ ಚಿತ್ರದಲ್ಲಿ ಒಂದು ಐಟಂ ಡ್ಯಾನ್ಸ್​ ಮಾಡಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಆ ಹಾಡಿಗಾಗಿ ಅವರು ಬರೋಬ್ಬರಿ 50 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:

ಇಷ್ಟೆಲ್ಲ ಸಹಾಯ ಮಾಡಿದ ಸೋನು ಸೂದ್​ಗೆ ಜನರಿಂದ ಸಿಕ್ಕಿದ್ದೇನು? ಅದನ್ನು ಅಳತೆ ಮಾಡಲು ಸಾಧ್ಯವಿಲ್ಲ

ತಾಯಿ ಫೋಟೋ ಜೊತೆ ಸೋನು ಸೂದ್​ ಭಾವುಕ ಪತ್ರ; ಮನಮುಟ್ಟುವ ಸಾಲುಗಳು ಇಲ್ಲಿವೆ..

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ