AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಆದರೂ ‘ಪುಷ್ಪ’ ತಂಡ ಇಂಥ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ?

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?
ರಶ್ಮಿಕಾ ಮಂದಣ್ಣ, ಸೋನು ಸೂದ್​
Follow us
TV9 Web
| Updated By: ಮದನ್​ ಕುಮಾರ್​

Updated on: Aug 01, 2021 | 9:30 AM

ನಟ ಸೋನು ಸೂದ್​ (Sonu Sood) ಮಾಡಿರುವ ಸಮಾಜಮುಖಿ ಕಾರ್ಯಗಳಿಗೆ ಜನರು ಶರಣು ಎಂದಿದ್ದಾರೆ. ಸಿನಿಮಾಗಳಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುವ ಈ ನಟನಿಗೆ ನಿಜಜೀವನದಲ್ಲಿ ‘ರಿಯಲ್​ ಹೀರೋ’ ಎಂಬ ಪಟ್ಟ ಸಿಕ್ಕಿದೆ. ಕಳೆದ ವರ್ಷ ಲಾಕ್​ಡೌನ್​ ಸಮಯದಲ್ಲಿ ಆರಂಭವಾದ ಅವರ ಜನಪರ ಕಾರ್ಯಗಳು ಇಂದಿಗೂ ಮುಂದುವರಿದಿವೆ. ಸೋನು ಸೂದ್​ಗೆ ಸಿನಿಮಾ ಆಫರ್​ಗಳು ಹೆಚ್ಚಾಗಿವೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್​ ಇದೆ. ಇಷ್ಟು ವರ್ಷ ವಿಲನ್​ ಆಗಿ ನಟಿಸುತ್ತಿದ್ದ ಅವರನ್ನು ಜನರು ಇನ್ಮುಂದೆ ನೆಗೆಟಿವ್​ ಪಾತ್ರಗಳಲ್ಲಿ ಒಪ್ಪಿಕೊಳ್ಳುವುದು ಕಷ್ಟ. ಅದರ ನಡುವೆಯೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ’ (Pushpa) ಚಿತ್ರದ ಕುರಿತು ಒಂದು ಅಚ್ಚರಿಯ ಸುದ್ದಿ ಹರಿದಾಡುತ್ತಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿರುವ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿದೆ. ಎರಡನೇ ಪಾರ್ಟ್​ನಲ್ಲಿ ವಿಲನ್​ ಪಾತ್ರಕ್ಕೆ ಸೋನು ಸೂದ್​ ಅವರಿಗೆ ಆಫರ್​ ನೀಡಲಾಗಿದೆ ಎಂಬ ಸುದ್ದು ಕೇಳಿಬಂದಿದೆ. ಆದರೆ ಈ ಸುದ್ದಿಯ ಬಗ್ಗೆ ಚಿತ್ರತಂಡದವರಾಗಲೀ, ಸೋನು ಸೂದ್​ ಆಗಲೀ ಈವರೆಗೆ ಸ್ಪಷ್ಟನೆ ನೀಡಿಲ್ಲ. ಆದರೆ ದಟ್ಟವಾಗಿ ಹಬ್ಬಿರುವ ಈ ಸುದ್ದಿ​ ಬಗ್ಗೆ ಸೋನು ಸೂದ್​ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಬಡವರ ಬಂಧುವಾಗಿ, ರಿಯಲ್​ ಹೀರೋ ಎನಿಸಿಕೊಂಡಿರುವ ಸೋನು ಸೂದ್​ ಅವರನ್ನು ಯಾವುದೇ ಸಿನಿಮಾದಲ್ಲಿ ವಿಲನ್​ ಆಗಿ ಮಾಡಿದರೆ ಅದು ಜನರ ಸೆಂಟಿಮೆಂಟ್​ಗೆ ಹೊಡೆತಕೊಟ್ಟಂತೆ ಆಗಲಿದೆ. ಹಾಗಾಗಿ ‘ಪುಷ್ಪ’ ಚಿತ್ರದ ನಿರ್ದೇಶಕ ಸುಕುಮಾರ್​ ಅವರು ಸೋನು ಸೂದ್​ಗೆ ವಿಲನ್​ ಪಾತ್ರ ನೀಡುವುದು ಅಸಾಧ್ಯ ಎಂದು ಒಂದು ವರ್ಗದ ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಕಡೆಗೂ ಅಸಲಿಯತ್ತು ಏನು ಎಂಬುದು ಚಿತ್ರತಂಡದಿಂದಲೇ ಸ್ಪಷ್ಟವಾಗಬೇಕು.

ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದಾರೆ. ಸನ್ನಿ ಲಿಯೋನ್​ ಕೂಡ ಈ ಚಿತ್ರದಲ್ಲಿ ಒಂದು ಐಟಂ ಡ್ಯಾನ್ಸ್​ ಮಾಡಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಆ ಹಾಡಿಗಾಗಿ ಅವರು ಬರೋಬ್ಬರಿ 50 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:

ಇಷ್ಟೆಲ್ಲ ಸಹಾಯ ಮಾಡಿದ ಸೋನು ಸೂದ್​ಗೆ ಜನರಿಂದ ಸಿಕ್ಕಿದ್ದೇನು? ಅದನ್ನು ಅಳತೆ ಮಾಡಲು ಸಾಧ್ಯವಿಲ್ಲ

ತಾಯಿ ಫೋಟೋ ಜೊತೆ ಸೋನು ಸೂದ್​ ಭಾವುಕ ಪತ್ರ; ಮನಮುಟ್ಟುವ ಸಾಲುಗಳು ಇಲ್ಲಿವೆ..

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್