AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್​ ಆರಂಭವಾದ ಬೆನ್ನಲ್ಲೇ ನಟ ಸೋನು ಸೂದ್​ ತೆಗೆದುಕೊಂಡ್ರು ಮಹತ್ವದ ನಿರ್ಧಾರ

ಸೋನು ಸೂದ್​ ಅವರು ಸಾಕಷ್ಟು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ಕೈಯಲ್ಲಿ ಕೆಲ ಟಾಲಿವುಡ್​ ಸಿನಿಮಾಗಳಿವೆ. ಇನ್ನೂ ಕೆಲವನ್ನು ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.

ಸಿನಿಮಾ ಶೂಟಿಂಗ್​ ಆರಂಭವಾದ ಬೆನ್ನಲ್ಲೇ ನಟ ಸೋನು ಸೂದ್​ ತೆಗೆದುಕೊಂಡ್ರು ಮಹತ್ವದ ನಿರ್ಧಾರ
ಸೋನು ಸೂದ್​
TV9 Web
| Edited By: |

Updated on:Jul 16, 2021 | 5:01 PM

Share

ನಟ ಸೋನು ಸೂದ್​ ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಅವರು ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಸಹಾಯ ಕೇಳಿದ ಕೆಲವೇ ನಿಮಿಷಗಳಲ್ಲಿ ಸೋನು ಸೂದ್​ ಕಡೆಯಿಂದ ಸ್ಪಂದನೆ ಸಿಗುತ್ತಿದೆ. ಸೋನು ಸೂದ್​ ಮಾಡಿದ ಸಮಾಜಮುಖಿ ಕಾರ್ಯದಿಂದ ಅವರಿಗೆ ಸಿನಿಮಾ ಆಫರ್​ಗಳ ಸಂಖ್ಯೆಯೂ ಹೆಚ್ಚಿದೆ. ಈಗ ಸೋನು ಸೂದ್​ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಸೋನು ಸೂದ್​ ಅವರು ಸಾಕಷ್ಟು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ಕೈಯಲ್ಲಿ ಕೆಲ ಟಾಲಿವುಡ್​ ಸಿನಿಮಾಗಳಿವೆ. ಇನ್ನೂ ಕೆಲವನ್ನು ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಈ ಕಾರಣಕ್ಕೆ ಅವರು ಶೂಟಿಂಗ್​​ಗಾಗಿ ಹೈದರಾಬಾದ್​ಗೆ ತೆರಳಬೇಕು. ಹೀಗಾಗಿ, ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಬಂಜಾರ ಹಿಲ್ಸ್​ನಲ್ಲಿ ಸೋನು ಮನೆ ಖರೀದಿ ಮಾಡಿದ್ದಾರೆ ಎನ್ನುತ್ತಿವೆ ಮೂಲಗಳು. ಸಾಕಷ್ಟು ಸಿನಿಮಾ ಶೂಟಿಂಗ್​ ಇದ್ದಾಗ ಹೋಟೆಲ್​ನಲ್ಲಿ ತಿಂಗಳಾನುಗಟ್ಟಲೆ ಉಳಿದುಕೊಳ್ಳೋದು ಕಷ್ಟವಾಗುತ್ತದೆ. ಕೊವಿಡ್​ ಸಂದರ್ಭದಲ್ಲಿ ಅದು ಸುರಕ್ಷಿತವೂ ಅಲ್ಲ. ಈ ಕಾರಣಕ್ಕೆ ಸ್ವಂತ ಮನೆ ಹೊಂದಿದರೆ ಉತ್ತಮ ಎನ್ನುವ ನಿರ್ಧಾರ ಅವರದ್ದು. ಈ ಕಾರಣಕ್ಕೆ ಸೋನು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮನೆಯನ್ನು ಕೇವಲ ಉಳಿದುಕೊಳ್ಳೋಕೆ ಮಾತ್ರ ಸೋನು ಬಳಕೆ ಮಾಡಿಕೊಳ್ಳುತ್ತಿಲ್ಲ. ಚಾರಿಟಿ ಕೆಲಸಕ್ಕೂ ಈ ಮನೆ ಬಳಕೆ ಆಗಲಿದೆ. ಅಗತ್ಯವಿರುವ ವಸ್ತುಗಳನ್ನು ಇದೇ ಮನೆಯಲ್ಲಿ ಸ್ಟೋರ್​ ಮಾಡಿ ಇಡಬಹುದು ಎಂಬುದು ಸೋನು ಸೂದ್​ ಆಲೋಚನೆ. ಈ ಕಾರಣಕ್ಕೆ ಅವರಿಗೆ ಮನೆ ಖರೀದಿ ಮಾಡುವುದು ಅತ್ಯಗತ್ಯವಾಗಿತ್ತು.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿ ಸೋನು ಸೂದ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಟಾಲ ಶಿವ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.  ಇತ್ತೀಚೆಗೆ ಸಿನಿಮಾ ಕೊನೆಯ ಹಂತದ ಶೂಟಿಂಗ್​ ಆರಂಭಗೊಂಡಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು.

ಕೊವಿಡ್​ ಮೊದಲನೆ ಅಲೆ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್​ ಸಹಾಯಕ್ಕೆ ನಿಂತಿದ್ದರು. ಇದಕ್ಕೆ ಭಾರೀ ಮೆಚ್ಚುಗೆ ಬಂದ ಹಿನ್ನೆಲೆಯಲ್ಲಿ ಅವರು ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಅವರು ತೆಲುಗು ಚಿತ್ರರಂಗದ ಮಾ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: Sonu Sood: ದೂಕುಡು ಸಿನಿಮಾದಲ್ಲಿ ಸೋನು ಸೂದ್​ಗೆ ಹೊಡೆದದ್ದಕ್ಕೆ ಸಿಟ್ಟಿನಿಂದ ಮನೆಯ ಟಿವಿ ಕುಟ್ಟಿ ಪುಡಿ ಮಾಡಿದ ಪೋರ

Published On - 4:59 pm, Fri, 16 July 21

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್