AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್​ ಆರಂಭವಾದ ಬೆನ್ನಲ್ಲೇ ನಟ ಸೋನು ಸೂದ್​ ತೆಗೆದುಕೊಂಡ್ರು ಮಹತ್ವದ ನಿರ್ಧಾರ

ಸೋನು ಸೂದ್​ ಅವರು ಸಾಕಷ್ಟು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ಕೈಯಲ್ಲಿ ಕೆಲ ಟಾಲಿವುಡ್​ ಸಿನಿಮಾಗಳಿವೆ. ಇನ್ನೂ ಕೆಲವನ್ನು ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.

ಸಿನಿಮಾ ಶೂಟಿಂಗ್​ ಆರಂಭವಾದ ಬೆನ್ನಲ್ಲೇ ನಟ ಸೋನು ಸೂದ್​ ತೆಗೆದುಕೊಂಡ್ರು ಮಹತ್ವದ ನಿರ್ಧಾರ
ಸೋನು ಸೂದ್​
TV9 Web
| Edited By: |

Updated on:Jul 16, 2021 | 5:01 PM

Share

ನಟ ಸೋನು ಸೂದ್​ ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಅವರು ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಸಹಾಯ ಕೇಳಿದ ಕೆಲವೇ ನಿಮಿಷಗಳಲ್ಲಿ ಸೋನು ಸೂದ್​ ಕಡೆಯಿಂದ ಸ್ಪಂದನೆ ಸಿಗುತ್ತಿದೆ. ಸೋನು ಸೂದ್​ ಮಾಡಿದ ಸಮಾಜಮುಖಿ ಕಾರ್ಯದಿಂದ ಅವರಿಗೆ ಸಿನಿಮಾ ಆಫರ್​ಗಳ ಸಂಖ್ಯೆಯೂ ಹೆಚ್ಚಿದೆ. ಈಗ ಸೋನು ಸೂದ್​ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಸೋನು ಸೂದ್​ ಅವರು ಸಾಕಷ್ಟು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ಕೈಯಲ್ಲಿ ಕೆಲ ಟಾಲಿವುಡ್​ ಸಿನಿಮಾಗಳಿವೆ. ಇನ್ನೂ ಕೆಲವನ್ನು ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಈ ಕಾರಣಕ್ಕೆ ಅವರು ಶೂಟಿಂಗ್​​ಗಾಗಿ ಹೈದರಾಬಾದ್​ಗೆ ತೆರಳಬೇಕು. ಹೀಗಾಗಿ, ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಬಂಜಾರ ಹಿಲ್ಸ್​ನಲ್ಲಿ ಸೋನು ಮನೆ ಖರೀದಿ ಮಾಡಿದ್ದಾರೆ ಎನ್ನುತ್ತಿವೆ ಮೂಲಗಳು. ಸಾಕಷ್ಟು ಸಿನಿಮಾ ಶೂಟಿಂಗ್​ ಇದ್ದಾಗ ಹೋಟೆಲ್​ನಲ್ಲಿ ತಿಂಗಳಾನುಗಟ್ಟಲೆ ಉಳಿದುಕೊಳ್ಳೋದು ಕಷ್ಟವಾಗುತ್ತದೆ. ಕೊವಿಡ್​ ಸಂದರ್ಭದಲ್ಲಿ ಅದು ಸುರಕ್ಷಿತವೂ ಅಲ್ಲ. ಈ ಕಾರಣಕ್ಕೆ ಸ್ವಂತ ಮನೆ ಹೊಂದಿದರೆ ಉತ್ತಮ ಎನ್ನುವ ನಿರ್ಧಾರ ಅವರದ್ದು. ಈ ಕಾರಣಕ್ಕೆ ಸೋನು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮನೆಯನ್ನು ಕೇವಲ ಉಳಿದುಕೊಳ್ಳೋಕೆ ಮಾತ್ರ ಸೋನು ಬಳಕೆ ಮಾಡಿಕೊಳ್ಳುತ್ತಿಲ್ಲ. ಚಾರಿಟಿ ಕೆಲಸಕ್ಕೂ ಈ ಮನೆ ಬಳಕೆ ಆಗಲಿದೆ. ಅಗತ್ಯವಿರುವ ವಸ್ತುಗಳನ್ನು ಇದೇ ಮನೆಯಲ್ಲಿ ಸ್ಟೋರ್​ ಮಾಡಿ ಇಡಬಹುದು ಎಂಬುದು ಸೋನು ಸೂದ್​ ಆಲೋಚನೆ. ಈ ಕಾರಣಕ್ಕೆ ಅವರಿಗೆ ಮನೆ ಖರೀದಿ ಮಾಡುವುದು ಅತ್ಯಗತ್ಯವಾಗಿತ್ತು.

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿ ಸೋನು ಸೂದ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಟಾಲ ಶಿವ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.  ಇತ್ತೀಚೆಗೆ ಸಿನಿಮಾ ಕೊನೆಯ ಹಂತದ ಶೂಟಿಂಗ್​ ಆರಂಭಗೊಂಡಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು.

ಕೊವಿಡ್​ ಮೊದಲನೆ ಅಲೆ ಕಾಣಿಸಿಕೊಂಡ ನಂತರದಲ್ಲಿ ಸೋನು ಸೂದ್​ ಸಹಾಯಕ್ಕೆ ನಿಂತಿದ್ದರು. ಇದಕ್ಕೆ ಭಾರೀ ಮೆಚ್ಚುಗೆ ಬಂದ ಹಿನ್ನೆಲೆಯಲ್ಲಿ ಅವರು ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಅವರು ತೆಲುಗು ಚಿತ್ರರಂಗದ ಮಾ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: Sonu Sood: ದೂಕುಡು ಸಿನಿಮಾದಲ್ಲಿ ಸೋನು ಸೂದ್​ಗೆ ಹೊಡೆದದ್ದಕ್ಕೆ ಸಿಟ್ಟಿನಿಂದ ಮನೆಯ ಟಿವಿ ಕುಟ್ಟಿ ಪುಡಿ ಮಾಡಿದ ಪೋರ

Published On - 4:59 pm, Fri, 16 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್