AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL​ ರದ್ದಾದ ಬಳಿಕ ಆಸೀಸ್​ ಆಟಗಾರರನ್ನು ಮನೆಗೆ ಕಳಿಸಲು ಸೋನು ಸೂದ್​ಗೆ ಮನವಿ; ನಟನ ಉತ್ತರ ಏನು?

Sonu Sood: ‘ಈಗಲೇ ನಿಮ್ಮ ಬ್ಯಾಗ್​ಗಳನ್ನು ಪ್ಯಾಕ್​ ಮಾಡಿಕೊಳ್ಳಿ’ ಎಂದು ಟ್ವೀಟ್​ ಮಾಡುವ ಮೂಲಕ ತಾವು ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸಲು ಸಿದ್ಧ ಎಂದು ಸೋನು ಸೂದ್​ ತಿಳಿಸಿದ್ದಾರೆ.

IPL​ ರದ್ದಾದ ಬಳಿಕ ಆಸೀಸ್​ ಆಟಗಾರರನ್ನು ಮನೆಗೆ ಕಳಿಸಲು ಸೋನು ಸೂದ್​ಗೆ ಮನವಿ; ನಟನ ಉತ್ತರ ಏನು?
ಸೋನು ಸೂದ್​
ಮದನ್​ ಕುಮಾರ್​
|

Updated on: May 07, 2021 | 11:36 AM

Share

ನಟ ಸೋನು ಸೂದ್​ ಮಾಡುತ್ತಿರುವ ಸಾಮಾಜಿಕ ಕೆಲಸಗಳು ಒಂದೆರಡಲ್ಲ. ಕಳೆದ ವರ್ಷ ಲಾಕ್​ಡೌನ್​ ವೇಳೆ ಶುರುವಾದ ಅವರ ಸಮಾಜಸೇವೆ ಇಂದಿಗೂ ಮುಂದುವರಿದಿದೆ. ಲಾಕ್​ಡೌನ್​ನಿಂದಾಗಿ ತಮ್ಮ ತಮ್ಮ ಊರುಗಳಿಗೆ ಮರಳಲು ಸಾಧ್ಯವಾಗದೇ ಇರುವ ಎಷ್ಟೋ ಜನರಿಗೆ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ರಿಯಲ್​ ಹೀರೋ ಎನಿಸಿಕೊಂಡಿದ್ದರು. ಕೊರೊನಾ ಹಾವಳಿಯಿಂದ ತತ್ತರಿಸಿರುವ ಅನೇಕರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಅಚ್ಚರಿ ಎಂದರೆ ಐಪಿಎಲ್​ ರದ್ದಾದ ಬಳಿಕ ತಮ್ಮ ದೇಶಕ್ಕೆ ಮರಳಲು ಕಷ್ಟಪಡುತ್ತಿರುವ ಆಸ್ಟ್ರೇಲಿಯಾ ಆಟಗಾರರಿಗೂ ಕೂಡ ಸಹಾಯ ಮಾಡಿ ಎಂದು ಈಗ ಸೋನು ಸೂದ್​ಗೆ ಬೇಡಿಕೆ ಇಡಲಾಗಿದೆ!

ನೆಟ್ಟಿಗರೊಬ್ಬರು ಸೋನು ಸೂದ್​ಗೆ ಈ ಬಗ್ಗೆ ಟ್ವಿಟರ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ‘ಆಸ್ಟ್ರೇಲಿಯಾ ಆಟಗಾರರರನ್ನು ಮನೆಗೆ ಕಳಿಸಲು ಸಹಾಯ ಮಾಡುತ್ತೀರಾ ಸೋನು ಭಾಯ್​?’ ಎಂದು ಕೇಳಲಾಗಿದೆ. ಅದರ ಜೊತೆ ಅವರು ಹಂಚಿಕೊಂಡಿರುವ ಕಾರ್ಟೂನ್​ ಗಮನ ಸೆಳೆಯುತ್ತಿದೆ. ‘ನಮ್ಮನ್ನು ಮನೆಗೆ ಕಳಿಸಲು ನೀವು ಮಧ್ಯೆ ಪ್ರವೇಶಿಸಬೇಕು’ ಎಂದು ಆಸ್ಟ್ರೇಲಿಯಾ ಆಟಗಾರರಾದ ಡೇವಿಡ್​ ವಾರ್ನರ್​, ಗ್ಲೆನ್​ ಮ್ಯಾಕ್ಸ್​ವೆಲ್​ ಹಾಗೂ ಸ್ಟೀವ್​ ಸ್ಮಿತ್​ ಅವರು ಸೋನುಗೆ ಮೆಸೇಜ್​ ಮೂಲಕ ವಿನಂತಿ ಮಾಡಿಕೊಳ್ಳುತ್ತಿರುವ ರೀತಿಯಲ್ಲಿ ಕಾರ್ಟೂನ್​ ರಚಿಸಲಾಗಿದೆ.

ಈ ಟ್ವೀಟ್​ಗೆ ಸೋನು ಸೂದ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಈಗಲೇ ನಿಮ್ಮ ಬ್ಯಾಗ್​ಗಳನ್ನು ಪ್ಯಾಕ್​ ಮಾಡಿಕೊಳ್ಳಿ’ ಎಂದು ಟ್ವೀಟ್​ ಮಾಡುವ ಮೂಲಕ ತಾವು ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಆದರೆ ಇದೆಲ್ಲವೂ ಒಂದು ತಮಾಷೆಯ ಸಂಭಾಷಣೆ. ಆ ಕಾರಣಕ್ಕಾಗಿಯೇ ಅವರು ಈ ಟ್ವೀಟ್​ನಲ್ಲಿ ಜೋರಾಗಿ ನಗುವ ಎಮೋಜಿಗಳನ್ನು ಬಳಸಿದ್ದಾರೆ. ಸದ್ಯ ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸುವ ಜವಾಬ್ದಾರಿ ಬಿಸಿಸಿಐ ಮೇಲಿದೆ.

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚಿರುವ ಕಾರಣ ಭಾರತದಿಂದ ಆಸ್ಟ್ರೇಲಿಯಾಗೆ ಬರುವವರ ಮೇಲೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಐಪಿಎಲ್​ ರದ್ದಾದ ಬಳಿಕ ತಮ್ಮ ತವರಿಗೆ ಮರಳಲು ಆಸ್ಟ್ರೇಲಿಯಾ ಆಟಗಾರರಿಗೆ ಕಷ್ಟ ಆಗುತ್ತಿದೆ. ಸದ್ಯ ಅವರನ್ನು ಬೇರೆ ದೇಶಗಳಿಗೆ ಕಳಿಸಿ, ಅಲ್ಲಿ ನಿಗದಿತ ದಿನಗಳವರೆಗೆ ಕ್ವಾರಂಟೈನ್​ನಲ್ಲಿ ಇರಿಸಿದ ನಂತರ ಆಸ್ಟ್ರೇಲಿಯಾಗೆ ಕಳಿಸುವ ಬಗ್ಗೆ ಪ್ರಯತ್ನಗಳು ಜಾರಿಯಲ್ಲಿವೆ.

ಇದನ್ನೂ ಓದಿ:

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ವಿವರ ಕಳುಹಿಸು ಸಹೋದರ.. 10 ನಿಮಿಷದಲ್ಲಿ ಸಿಲಿಂಡರ್ ತಲುಪಿಸುತ್ತೇನೆ! ಸುರೇಶ ರೈನಾ ಕಷ್ಟಕ್ಕೆ ನೆರವಾದ ಸೋನು ಸೂದ್

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ