AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL​ ರದ್ದಾದ ಬಳಿಕ ಆಸೀಸ್​ ಆಟಗಾರರನ್ನು ಮನೆಗೆ ಕಳಿಸಲು ಸೋನು ಸೂದ್​ಗೆ ಮನವಿ; ನಟನ ಉತ್ತರ ಏನು?

Sonu Sood: ‘ಈಗಲೇ ನಿಮ್ಮ ಬ್ಯಾಗ್​ಗಳನ್ನು ಪ್ಯಾಕ್​ ಮಾಡಿಕೊಳ್ಳಿ’ ಎಂದು ಟ್ವೀಟ್​ ಮಾಡುವ ಮೂಲಕ ತಾವು ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸಲು ಸಿದ್ಧ ಎಂದು ಸೋನು ಸೂದ್​ ತಿಳಿಸಿದ್ದಾರೆ.

IPL​ ರದ್ದಾದ ಬಳಿಕ ಆಸೀಸ್​ ಆಟಗಾರರನ್ನು ಮನೆಗೆ ಕಳಿಸಲು ಸೋನು ಸೂದ್​ಗೆ ಮನವಿ; ನಟನ ಉತ್ತರ ಏನು?
ಸೋನು ಸೂದ್​
ಮದನ್​ ಕುಮಾರ್​
|

Updated on: May 07, 2021 | 11:36 AM

Share

ನಟ ಸೋನು ಸೂದ್​ ಮಾಡುತ್ತಿರುವ ಸಾಮಾಜಿಕ ಕೆಲಸಗಳು ಒಂದೆರಡಲ್ಲ. ಕಳೆದ ವರ್ಷ ಲಾಕ್​ಡೌನ್​ ವೇಳೆ ಶುರುವಾದ ಅವರ ಸಮಾಜಸೇವೆ ಇಂದಿಗೂ ಮುಂದುವರಿದಿದೆ. ಲಾಕ್​ಡೌನ್​ನಿಂದಾಗಿ ತಮ್ಮ ತಮ್ಮ ಊರುಗಳಿಗೆ ಮರಳಲು ಸಾಧ್ಯವಾಗದೇ ಇರುವ ಎಷ್ಟೋ ಜನರಿಗೆ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ರಿಯಲ್​ ಹೀರೋ ಎನಿಸಿಕೊಂಡಿದ್ದರು. ಕೊರೊನಾ ಹಾವಳಿಯಿಂದ ತತ್ತರಿಸಿರುವ ಅನೇಕರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಅಚ್ಚರಿ ಎಂದರೆ ಐಪಿಎಲ್​ ರದ್ದಾದ ಬಳಿಕ ತಮ್ಮ ದೇಶಕ್ಕೆ ಮರಳಲು ಕಷ್ಟಪಡುತ್ತಿರುವ ಆಸ್ಟ್ರೇಲಿಯಾ ಆಟಗಾರರಿಗೂ ಕೂಡ ಸಹಾಯ ಮಾಡಿ ಎಂದು ಈಗ ಸೋನು ಸೂದ್​ಗೆ ಬೇಡಿಕೆ ಇಡಲಾಗಿದೆ!

ನೆಟ್ಟಿಗರೊಬ್ಬರು ಸೋನು ಸೂದ್​ಗೆ ಈ ಬಗ್ಗೆ ಟ್ವಿಟರ್​ನಲ್ಲಿ ಪ್ರಶ್ನೆ ಮಾಡಿದ್ದಾರೆ. ‘ಆಸ್ಟ್ರೇಲಿಯಾ ಆಟಗಾರರರನ್ನು ಮನೆಗೆ ಕಳಿಸಲು ಸಹಾಯ ಮಾಡುತ್ತೀರಾ ಸೋನು ಭಾಯ್​?’ ಎಂದು ಕೇಳಲಾಗಿದೆ. ಅದರ ಜೊತೆ ಅವರು ಹಂಚಿಕೊಂಡಿರುವ ಕಾರ್ಟೂನ್​ ಗಮನ ಸೆಳೆಯುತ್ತಿದೆ. ‘ನಮ್ಮನ್ನು ಮನೆಗೆ ಕಳಿಸಲು ನೀವು ಮಧ್ಯೆ ಪ್ರವೇಶಿಸಬೇಕು’ ಎಂದು ಆಸ್ಟ್ರೇಲಿಯಾ ಆಟಗಾರರಾದ ಡೇವಿಡ್​ ವಾರ್ನರ್​, ಗ್ಲೆನ್​ ಮ್ಯಾಕ್ಸ್​ವೆಲ್​ ಹಾಗೂ ಸ್ಟೀವ್​ ಸ್ಮಿತ್​ ಅವರು ಸೋನುಗೆ ಮೆಸೇಜ್​ ಮೂಲಕ ವಿನಂತಿ ಮಾಡಿಕೊಳ್ಳುತ್ತಿರುವ ರೀತಿಯಲ್ಲಿ ಕಾರ್ಟೂನ್​ ರಚಿಸಲಾಗಿದೆ.

ಈ ಟ್ವೀಟ್​ಗೆ ಸೋನು ಸೂದ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಈಗಲೇ ನಿಮ್ಮ ಬ್ಯಾಗ್​ಗಳನ್ನು ಪ್ಯಾಕ್​ ಮಾಡಿಕೊಳ್ಳಿ’ ಎಂದು ಟ್ವೀಟ್​ ಮಾಡುವ ಮೂಲಕ ತಾವು ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಆದರೆ ಇದೆಲ್ಲವೂ ಒಂದು ತಮಾಷೆಯ ಸಂಭಾಷಣೆ. ಆ ಕಾರಣಕ್ಕಾಗಿಯೇ ಅವರು ಈ ಟ್ವೀಟ್​ನಲ್ಲಿ ಜೋರಾಗಿ ನಗುವ ಎಮೋಜಿಗಳನ್ನು ಬಳಸಿದ್ದಾರೆ. ಸದ್ಯ ಆಸ್ಟ್ರೇಲಿಯಾ ಆಟಗಾರರನ್ನು ಮನೆಗೆ ಕಳಿಸುವ ಜವಾಬ್ದಾರಿ ಬಿಸಿಸಿಐ ಮೇಲಿದೆ.

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚಿರುವ ಕಾರಣ ಭಾರತದಿಂದ ಆಸ್ಟ್ರೇಲಿಯಾಗೆ ಬರುವವರ ಮೇಲೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ಐಪಿಎಲ್​ ರದ್ದಾದ ಬಳಿಕ ತಮ್ಮ ತವರಿಗೆ ಮರಳಲು ಆಸ್ಟ್ರೇಲಿಯಾ ಆಟಗಾರರಿಗೆ ಕಷ್ಟ ಆಗುತ್ತಿದೆ. ಸದ್ಯ ಅವರನ್ನು ಬೇರೆ ದೇಶಗಳಿಗೆ ಕಳಿಸಿ, ಅಲ್ಲಿ ನಿಗದಿತ ದಿನಗಳವರೆಗೆ ಕ್ವಾರಂಟೈನ್​ನಲ್ಲಿ ಇರಿಸಿದ ನಂತರ ಆಸ್ಟ್ರೇಲಿಯಾಗೆ ಕಳಿಸುವ ಬಗ್ಗೆ ಪ್ರಯತ್ನಗಳು ಜಾರಿಯಲ್ಲಿವೆ.

ಇದನ್ನೂ ಓದಿ:

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ವಿವರ ಕಳುಹಿಸು ಸಹೋದರ.. 10 ನಿಮಿಷದಲ್ಲಿ ಸಿಲಿಂಡರ್ ತಲುಪಿಸುತ್ತೇನೆ! ಸುರೇಶ ರೈನಾ ಕಷ್ಟಕ್ಕೆ ನೆರವಾದ ಸೋನು ಸೂದ್

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ