AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು? ಈ ನಟನಿಗೆ ಎಲ್ಲಿಂದ ಬರುತ್ತೆ ಇಷ್ಟೊಂದು ಹಣ?

ಸೋನು ಸೂದ್​ ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ನಟಿಸುತ್ತಿದ್ದ ಸೋನು ಪಡೆಯುತ್ತಿದ್ದ ಸಂಭಾವನೆ 2 ಕೋಟಿ ರೂಪಾಯಿ ಎನ್ನಲಾಗಿದೆ

ಸೋನು ಸೂದ್​ ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು? ಈ ನಟನಿಗೆ ಎಲ್ಲಿಂದ ಬರುತ್ತೆ ಇಷ್ಟೊಂದು ಹಣ?
ಸೋನು ಸೂದ್​
ರಾಜೇಶ್ ದುಗ್ಗುಮನೆ
|

Updated on:Jun 02, 2021 | 3:47 PM

Share

ತೆರೆಮೇಲೆ ವಿಲನ್​ ಪಾತ್ರಗಳನ್ನು ಮಾಡುತ್ತಿದ್ದ ನಟ ಸೋನು ಸೂದ್​ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ ಸೋನು ಸೂದ್​ ಮಾಡುತ್ತಿರವ ಸಹಾಯಕ್ಕೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಗಾದರೆ, ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ? ಅವರು ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಸೋನು ಸೂದ್​ ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ನಟಿಸುತ್ತಿದ್ದ ಸೋನು ಪಡೆಯುತ್ತಿದ್ದ ಸಂಭಾವನೆ 2 ಕೋಟಿ ರೂಪಾಯಿ ಎನ್ನಲಾಗಿದೆ. ಇದು ನಿರ್ಮಾಪಕರಿಗೆ ಅಷ್ಟಾಗಿ ಹೊರೆ ಆಗುತ್ತಿರಲಿಲ್ಲ. ಆದರೆ, ಈಗ ಸೋನು ಸೂದ್​ ಖ್ಯಾತಿ ಹೆಚ್ಚಿದೆ. ಅವರ ಸಿನಿ ಕೆರಿಯರ್​ಗೂ ಇದು ಸಾಕಷ್ಟು ಮೈಲೇಜ್​​ ನೀಡಿದೆ. ಈ ಕಾರಣಕ್ಕೆ ಸೋನು ಸಂಭಾವನೆ ಹೆಚ್ಚಿಸಿಕೊಂಡಿದ್ದಾರಂತೆ.

ಸೋನು ಸೂದ್​ ತಾವು ಇನ್ಮುಂದೆ ವಿಲನ್​ ಪಾತ್ರ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಅವರು ಸಂಭಾವನೆಯನ್ನು ಎರಡರಿಂದ ಏಳು ಕೋಟಿ ರೂಪಾಯಿಗೆ ಏರಿಸಿಕೊಂಡಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಇದು ನಿರ್ಮಾಪಕರಿಗೆ ಸ್ವಲ್ಪ ಭಾರ ಎನಿಸುತ್ತಿದೆ. ಹೀಗಾಗಿ, ಕೆಲ ನಿರ್ಮಾಪಕರು ಸೋನು ಸೂದ್​ ಆಯ್ಕೆ ಮಾಡಿಕೊಳ್ಳಬೇಕು ಎಂಬ ನಿರ್ಧಾರದಿಂದ ಹಿಂದೆ ಸರಿದಿದ್ದಾರಂತೆ.

ಸೋನು ಸೂದ್​ ತಮ್ಮ ‘ಸೂದ್​ ಚ್ಯಾರಿಟಿ ಫೌಂಡೇಷನ್’​ ಮೂಲಕ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಫೌಂಡೇಷನ್​ಗೆ ಒಂದಷ್ಟು ಹಣ ಇವರ ದುಡಿಮೆಯಿಂದಲೇ ಬಂದರೆ, ಇನ್ನೂ ಕೆಲ ಭಾಗ ಸಂಸ್ಥೆಗಳು ಹಾಗೂ ದಾನಿಗಳು ನೀಡುತ್ತಿದ್ದಾರೆ. ಈ ಹಣವನ್ನು ಸೋನು ಸೂದ್​ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಸೋನು ಸೂದ್ ಅವರಿಗೆ ಕೇವಲ ನಟನೆಯಿಂದ ಮಾತ್ರ ಹಣ ಬರುತ್ತಿಲ್ಲ. ಅವರು ತಮ್ಮದೇ ಆದ ಟ್ರಾವೆಲ್​ ಏಜೆನ್ಸಿ ಹೊಂದಿದ್ದಾರೆ. ಇನ್ನು, ಹೋಟೆಲ್​ ಉದ್ಯಮದಲ್ಲೂ ಅವರು ತೊಡಗಿಕೊಂಡಿದ್ದಾರೆ. ಇದರಿಂದ ಸೋನು ಸೂದ್​ಗೆ ಹಣ ಬರುತ್ತಿದೆ. ಇದರಲ್ಲಿ ಒಂದಷ್ಟು ಹಣವನ್ನು ಅವರು ಸಮಾಜ ಸೇವೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಸೋನು ಸೂದ್​ ಅವರು ಮಾಡುತ್ತಿರುವ ಸಹಾಯದಿಂದ ಅನೇಕರ ಪ್ರಾಣ ಉಳಿದಿದೆ. ಹೀಗಾಗಿ, ಸಾಕಷ್ಟು ಮಂದಿ ಸೋನು ಸೂದ್​ ಅವರನ್ನು ದೇವರ ರೀತಿಯಲ್ಲಿ ಕಾಣುತ್ತಿದ್ದಾರೆ. ಕೆಲವರು ಸೋನು ಸೂದ್​ ಫೋಟೋಗೆ ಹಾಲಿನ ಅಭಿಷೇಕ ಮಾಡಿದರೆ, ಇನ್ನೂ ಕೆಲವರು ಅವರ ಫೋಟೋವನ್ನು ದೇವರ ಮನೆಯಲ್ಲಿ ಇಟ್ಟು ಪೂಜಿಸುತ್ತಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಸೋನು ಸೂದ್​ ಧನ್ಯವಾದ ಹೇಳಿದ್ದರು.

ಇದನ್ನೂ ಓದಿ: ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

Published On - 3:36 pm, Wed, 2 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು