AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?

Sonu Sood | Baahubali: ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಕಥೆ ಕೇಳದೆಯೂ ಆಫರ್​ ಒಪ್ಪಿಕೊಳ್ಳುವ ಹಲವು ಕಲಾವಿದರು ಇದ್ದಾರೆ. ಆದರೆ ಸೋನು ಸೂದ್​ ಅವರು ‘ಬಾಹುಬಲಿ’ ಚಿತ್ರಕ್ಕೆ ಸಹಿ ಮಾಡಲು ಸಾಧ್ಯವಾಗಲಿಲ್ಲ.

Sonu Sood: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?
ರಾಜಮೌಳಿ, ಸೋನು ಸೂದ್
TV9 Web
| Edited By: |

Updated on:Jun 25, 2022 | 10:09 AM

Share

ನಟ ಸೋನು ಸೂದ್​ (Sonu Sood) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದ ಸಿನಿಮಾಗಳಲ್ಲೂ ನಟಿಸಿರುವ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಲಾಕ್​ಡೌನ್​ ಸಮಯದಲ್ಲಿ ಅವರು ಮಾಡಿದ ಜನಪರ ಕಾರ್ಯದಿಂದಾಗಿ ರಿಯಲ್​ ಹೀರೋ ಎನಿಸಿಕೊಂಡಿದ್ದಾರೆ. ಅಚ್ಚರಿಯ ವಿಚಾರ ಏನೆಂದರೆ ಅವರು ‘ಬಾಹುಬಲಿ’  (Baahubali) ಸಿನಿಮಾದ ಆಫರ್​ ತಿರಸ್ಕರಿಸಿದ್ದರು! ಈ ವಿಚಾರವನ್ನು ಇತ್ತೀಚೆಗೆ ಅವರು ಬಾಯಿ ಬಿಟ್ಟಿದ್ದಾರೆ. ರಾಜಮೌಳಿ (Rajamouli) ನಿರ್ದೇಶನದ ಸಿನಿಮಾದಲ್ಲಿ ಚಿಕ್ಕ ಪಾತ್ರ ಸಿಕ್ಕರೂ ಸಾಕು ಎಂದು ಬಯಸುತ್ತಾರೆ ಕಲಾವಿದರು. ಆದರೆ ಸೋನು ಸೂದ್​ ಅವರು ಅವಕಾಶ ಕೈ ಚೆಲ್ಲಲು ಕಾರಣ ಏನು? ಈ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ‘ಬಾಹುಬಲಿ’ ಸಿನಿಮಾ ಮಾಡಲು ನಿರ್ದೇಶಕ ರಾಜಮೌಳಿ ಅವರು ಸಾಕಷ್ಟು ವರ್ಷ ಸಮಯ ಮೀಸಲಿಟ್ಟರು. ಅವರ ಜೊತೆ ಇನ್ನಿತರ ತಂತ್ರಜ್ಞರು ಮತ್ತು ಕಲಾವಿರು ಕೂಡ ಶ್ರಮಪಟ್ಟರು. ಆ ಪ್ರಾಜೆಕ್ಟ್​ ಮಾಡುವಾಗ ಬೇರೆ ಯಾವುದೇ ಸಿನಿಮಾವನ್ನೂ ಒಪ್ಪಿಕೊಳ್ಳಲು ಕಲಾವಿದರಿಗೆ ಸಾಧ್ಯವಾಗಿರಲಿಲ್ಲ. ಅದಕ್ಕೆಲ್ಲ ನಂತರ ಪ್ರತಿಫಲ ಸಿಕ್ಕಿತು ಎಂಬುದು ನಿಜ. ಆದರೆ ಹಲವು ವರ್ಷಗಳ ಕಾಲ ಒಂದೇ ಸಿನಿಮಾಗೆ ಡೇಟ್ಸ್​ ನೀಡುವುದು ನಿಜಕ್ಕೂ ಸವಾಲಿನ ಕೆಲಸ. ಅದೇ ಕಾರಣಕ್ಕಾಗಿ ಸೋನು ಸೂದ್​ ಅವರು ‘ಬಾಹುಬಲಿ’ ಚಿತ್ರದ ಆಫರ್​ ತಿರಸ್ಕರಿಸಿದ್ದರು.

ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಕಥೆ ಕೇಳದೆಯೂ ಆಫರ್​ ಒಪ್ಪಿಕೊಳ್ಳುವ ಹಲವು ಕಲಾವಿದರು ಇದ್ದಾರೆ. ಆದರೆ ಡೇಟ್ಸ್​ ನೀಡುವುದೇ ದೊಡ್ಡ ಚಾಲೆಂಜ್​. ರಾಜಮೌಳಿ ಟೀಮ್ ಕಡೆಯಿಂದ ಆಫರ್​ ಬಂದಾಗ ಸೋನು ಸೂದ್​ ಅವರು ಶಾರುಖ್​ ಖಾನ್​ ಜೊತೆ ‘ಹ್ಯಾಪಿ ನ್ಯೂ ಇಯರ್’​ ಸಿನಿಮಾ ಮಾಡುತ್ತಿದ್ದರು. ಇತ್ತ ರಾಜಮೌಳಿ ಅವರು ಹಲವು ತಿಂಗಳ ಡೇಟ್ಸ್​ ಕೇಳಿದರು. ಅದನ್ನು ಹೊಂದಿಸಲು ಸೋನು ಸೂದ್​ ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ ಅವಕಾಶವನ್ನು ಕೈ ಚೆಲ್ಲಬೇಕಾಯಿತು.

ಇದನ್ನೂ ಓದಿ
Image
ಕೆಟ್ಟ ಹಿಂದಿ ಚಿತ್ರಗಳನ್ನು ಮಾಡದಂತೆ ಸೌತ್​ ನನ್ನನ್ನು ಉಳಿಸುತ್ತಿದೆ ಎಂದ ಸೋನು ಸೂದ್
Image
Sonu Sood: ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸೋನು ಸೂದ್​ಗೆ ಹಣ ಬರೋದು ಎಲ್ಲಿಂದ? ಪೂರ್ತಿ ವಿವರ ನೀಡಿದ ನಟ
Image
ಬಿಯರ್​ ದಾನ ಮಾಡಿ ಎಂದು ಸೋನು ಸೂದ್​ಗೆ ಮನವಿ ಮಾಡಿದ ಭೂಪ; ರಿಯಲ್​ ಹೀರೋ ಉತ್ತರ ಏನು?
Image
ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರಕ್ಕೆ ಇಳಿದ ಸೋನು ಸೂದ್​; ನೀವು ಮಾತು ತಪ್ಪಿದಿರಿ ಎಂದ ಫ್ಯಾನ್ಸ್​

ತೆಲುಗಿನಲ್ಲಿ ಸೋನು ಸೂದ್​ ಅವರಿಗೆ ಸಿಕ್ಕಾಪಟ್ಟೆ ಫ್ಯಾನ್​ ಫಾಲೋಯಿಂಗ್​ ಇದೆ. ಅನುಷ್ಕಾ ಶೆಟ್ಟಿ ನಟನೆಯ ‘ಅರುಂಧತಿ’ ಸಿನಿಮಾದಲ್ಲಿ ಅವರು ಮಾಡಿದ ವಿಲನ್​ ಪಾತ್ರವನ್ನು ಪ್ರೇಕ್ಷಕರು ಮರೆಯಲು ಸಾಧ್ಯವಿಲ್ಲ. ಸದ್ಯ ರಿಯಲ್​ ಲೈಫ್​ನಲ್ಲಿ ಹೀರೋ ಎನಿಸಿಕೊಂಡಿರುವ ಅವರಿಗೆ ಯಾರೂ ಕೂಡ ಸಿನಿಮಾದಲ್ಲಿ ವಿಲನ್​ ಪಾತ್ರ ನೀಡುತ್ತಿಲ್ಲ. ಲಾಕ್​ಡೌನ್​ನಲ್ಲಿ ಶುರುವಾದ ಅವರ ಸಮಾಜಮುಖಿ ಕಾರ್ಯಗಳು ಇಂದಿಗೂ ನಡೆಯುತ್ತಿವೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

Sonu Sood: 4 ಕಾಲು, 4 ಕೈ ಇರುವ ಬಾಲಕಿಗೆ ಸರ್ಜರಿ ಮಾಡಿಸಿದ ಸೋನು ಸೂದ್​; ರಿಯಲ್​ ಹೀರೋಗೆ ಜನರ ಆಶೀರ್ವಾದ

Published On - 10:09 am, Sat, 25 June 22

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ