AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ ಪ್ರಧಾನಮಂತ್ರಿ ಅಭ್ಯರ್ಥಿ? ಮುಂದಿನ ಚುನಾವಣೆ ಬಗ್ಗೆ ಮಾತನಾಡಿದ ಸ್ಟಾರ್​ ನಟಿ

Prime Minister: ಕಳೆದ ವರ್ಷ ಕೊರೊನಾ ವೈರಸ್​ ಕಾಟ ಶುರುವಾದಾಗಿನಿಂದಲೂ ಸೋನು ಸೂದ್​ ಅವರು ಜನರ ಸಹಾಯಕ್ಕೆ ನಿಂತಿದ್ದಾರೆ. ಇಂದಿಗೂ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಯಾವುದೇ ರಾಜಕಾರಣಿಯೂ ಮಾಡದಂತಹ ಸೇವೆಯನ್ನು ಅವರು ಮಾಡುತ್ತಿದ್ದಾರೆ.

ಸೋನು ಸೂದ್​ ಪ್ರಧಾನಮಂತ್ರಿ ಅಭ್ಯರ್ಥಿ? ಮುಂದಿನ ಚುನಾವಣೆ ಬಗ್ಗೆ ಮಾತನಾಡಿದ ಸ್ಟಾರ್​ ನಟಿ
ಸೋನು ಸೂದ್​ - ಹುಮಾ ಖುರೇಶಿ
ಮದನ್​ ಕುಮಾರ್​
|

Updated on: Jun 01, 2021 | 8:43 AM

Share

ನಟ ಸೋನು ಸೂದ್​ ಮಾಡುತ್ತಿರುವ ಜನಪರ ಕೆಲಸಗಳ ಪಟ್ಟಿ ತುಂಬ ದೊಡ್ಡದಿದೆ. ಸಿನಿಮಾಗಳಿಗಿಂತಲೂ ಹೆಚ್ಚಾಗಿ ಅವರೀಗ ಸಮಾಜಸೇವೆಯಿಂದಲೇ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರಿಂದ ಸಹಾಯ ಪಡೆದ ಅನೇಕರು ಅವರನ್ನು ದೇವರ ರೀತಿ ನೋಡುತ್ತಿದ್ದಾರೆ. ಹಾಗಾಗಿ ಜನರ ಮನಸ್ಸಿನಲ್ಲಿ ಸೋನು ಸೂದ್​ಗೆ ದೊಡ್ಡ ಸ್ಥಾನ ಸಿಕ್ಕಿದೆ. ಈ ಜನಬಲದ ಆಧಾರದ ಮೇಲೆ ಅವರೇನಾದರೂ ಚುನಾವಣೆಗೆ ಸ್ಪರ್ಧಿಸಿದರೆ ಏನಾಗಬಹುದು? ಈ ಪ್ರಶ್ನೆಗೆ ಕಾಲವೇ ಉತ್ತರಿಸಬೇಕು. ಅದಕ್ಕೂ ಮುನ್ನವೇ ಅವರು ಪ್ರಧಾನಮಂತ್ರಿ ಅಭ್ಯರ್ಥಿ ಆಗಬೇಕು ಎಂದು ಬಾಲಿವುಡ್​ ನಟಿ ಹುಮಾ ಖುರೇಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್​ನ​ ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿರುವ ಹುಮಾ ಖುರೇಶಿ ಅವರು ಇತ್ತೀಚೆಗೆ ಒಂದು ಮಾಧ್ಯಮಕ್ಕೆ ಸಂದರ್ಶನ ನೀಡಿದ್ದಾರೆ. ಆಗ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ಬಾಲಿವುಡ್​ನ ಯಾವ ಕಲಾವಿದರು ರಾಜಕೀಯಕ್ಕೆ ಎಂಟ್ರಿ ನೀಡಬೇಕು ಎಂದು ಕೇಳಿದ ಪ್ರಶ್ನೆಗೆ ಹುಮಾ ಖುರೇಶಿ ಅವರು ಒಂದು ಕ್ಷಣವೂ ಯೋಚಿಸದೇ ಸೋನು ಸೂದ್​ ಹೆಸರು ಹೇಳಿದರು. ಅಲ್ಲದೇ, ಸೋನು ಸೂದ್​ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನು ಅವರು ಹಂಚಿಕೊಂಡರು.

‘ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಟ ಸೋನು ಸೂದ್​ ಅವರು ಚುನಾವಣೆಗೆ ನಿಲ್ಲಬೇಕು. ನಾವೆಲ್ಲರೂ ವೋಟ್​ ಹಾಕುತ್ತೇವೆ. ಅದರಲ್ಲೂ ನಾನು ಖಂಡಿತವಾಗಿ ಅವರಿಗೆ ವೋಟ್​ ಹಾಕುತ್ತೇನೆ. ಸೋನು ಸೂದ್​ ನಮ್ಮ ದೇಶದ ಪ್ರಧಾನ ಮಂತ್ರಿ ಆಗಬೇಕು’ ಎಂದು ಹುಮಾ ಖುರೇಶಿ ಹಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರ-ವಿರೋಧದ ಚರ್ಚೆ ಕೂಡ ಈಗತಾನೇ ಶುರು ಆಗಿದೆ.

ಕಳೆದ ವರ್ಷ ಕೊರೊನಾ ವೈರಸ್​ ಕಾಟ ಶುರುವಾದಾಗಿನಿಂದಲೂ ಸೋನು ಸೂದ್​ ಅವರು ಜನರ ಸಹಾಯಕ್ಕೆ ನಿಂತಿದ್ದಾರೆ. ಇಂದಿಗೂ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಯಾವುದೇ ರಾಜಕಾರಣಿಯೂ ಮಾಡದಂತಹ ಸೇವೆಯನ್ನು ಅವರು ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ ಮಾಡಿಸಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್​ ಸಿಲಿಂಡರ್​ ತಲುಪಿಸಿದ್ದಾರೆ. ಕಷ್ಟದಲ್ಲಿರುವ ಎಷ್ಟೋ ಜನರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ಅವರ ಸೂದ್​ ಚಾರಿಟಿ ಫೌಂಡೇಶನ್​ ಮೂಲಕ ಪ್ರತಿದಿನ ಸಾವಿರಾರು ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಇಷ್ಟೆಲ್ಲ ಕೆಲಸ ಮಾಡುತ್ತಿರುವ ಅವರು ಪೂರ್ಣಾವಧಿ ರಾಜಕೀಯಕ್ಕೆ ಬಂದರೆ ನಿಜಕ್ಕೂ ಜನರಿಗೆ ಒಳಿತಾಗುತ್ತದೆ ಎಂಬುದು ಹಲವರು ಅಭಿಪ್ರಾಯ.

ಇದನ್ನೂ ಓದಿ:

ಕೊವಿಡ್​ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಹಾಯಕ್ಕೆ ಮುಂದಾದ ಸೋನು ಸೂದ್

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ