Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ ಪ್ರಧಾನಮಂತ್ರಿ ಅಭ್ಯರ್ಥಿ? ಮುಂದಿನ ಚುನಾವಣೆ ಬಗ್ಗೆ ಮಾತನಾಡಿದ ಸ್ಟಾರ್​ ನಟಿ

Prime Minister: ಕಳೆದ ವರ್ಷ ಕೊರೊನಾ ವೈರಸ್​ ಕಾಟ ಶುರುವಾದಾಗಿನಿಂದಲೂ ಸೋನು ಸೂದ್​ ಅವರು ಜನರ ಸಹಾಯಕ್ಕೆ ನಿಂತಿದ್ದಾರೆ. ಇಂದಿಗೂ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಯಾವುದೇ ರಾಜಕಾರಣಿಯೂ ಮಾಡದಂತಹ ಸೇವೆಯನ್ನು ಅವರು ಮಾಡುತ್ತಿದ್ದಾರೆ.

ಸೋನು ಸೂದ್​ ಪ್ರಧಾನಮಂತ್ರಿ ಅಭ್ಯರ್ಥಿ? ಮುಂದಿನ ಚುನಾವಣೆ ಬಗ್ಗೆ ಮಾತನಾಡಿದ ಸ್ಟಾರ್​ ನಟಿ
ಸೋನು ಸೂದ್​ - ಹುಮಾ ಖುರೇಶಿ
Follow us
ಮದನ್​ ಕುಮಾರ್​
|

Updated on: Jun 01, 2021 | 8:43 AM

ನಟ ಸೋನು ಸೂದ್​ ಮಾಡುತ್ತಿರುವ ಜನಪರ ಕೆಲಸಗಳ ಪಟ್ಟಿ ತುಂಬ ದೊಡ್ಡದಿದೆ. ಸಿನಿಮಾಗಳಿಗಿಂತಲೂ ಹೆಚ್ಚಾಗಿ ಅವರೀಗ ಸಮಾಜಸೇವೆಯಿಂದಲೇ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರಿಂದ ಸಹಾಯ ಪಡೆದ ಅನೇಕರು ಅವರನ್ನು ದೇವರ ರೀತಿ ನೋಡುತ್ತಿದ್ದಾರೆ. ಹಾಗಾಗಿ ಜನರ ಮನಸ್ಸಿನಲ್ಲಿ ಸೋನು ಸೂದ್​ಗೆ ದೊಡ್ಡ ಸ್ಥಾನ ಸಿಕ್ಕಿದೆ. ಈ ಜನಬಲದ ಆಧಾರದ ಮೇಲೆ ಅವರೇನಾದರೂ ಚುನಾವಣೆಗೆ ಸ್ಪರ್ಧಿಸಿದರೆ ಏನಾಗಬಹುದು? ಈ ಪ್ರಶ್ನೆಗೆ ಕಾಲವೇ ಉತ್ತರಿಸಬೇಕು. ಅದಕ್ಕೂ ಮುನ್ನವೇ ಅವರು ಪ್ರಧಾನಮಂತ್ರಿ ಅಭ್ಯರ್ಥಿ ಆಗಬೇಕು ಎಂದು ಬಾಲಿವುಡ್​ ನಟಿ ಹುಮಾ ಖುರೇಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್​ನ​ ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿರುವ ಹುಮಾ ಖುರೇಶಿ ಅವರು ಇತ್ತೀಚೆಗೆ ಒಂದು ಮಾಧ್ಯಮಕ್ಕೆ ಸಂದರ್ಶನ ನೀಡಿದ್ದಾರೆ. ಆಗ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ಬಾಲಿವುಡ್​ನ ಯಾವ ಕಲಾವಿದರು ರಾಜಕೀಯಕ್ಕೆ ಎಂಟ್ರಿ ನೀಡಬೇಕು ಎಂದು ಕೇಳಿದ ಪ್ರಶ್ನೆಗೆ ಹುಮಾ ಖುರೇಶಿ ಅವರು ಒಂದು ಕ್ಷಣವೂ ಯೋಚಿಸದೇ ಸೋನು ಸೂದ್​ ಹೆಸರು ಹೇಳಿದರು. ಅಲ್ಲದೇ, ಸೋನು ಸೂದ್​ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನು ಅವರು ಹಂಚಿಕೊಂಡರು.

‘ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಟ ಸೋನು ಸೂದ್​ ಅವರು ಚುನಾವಣೆಗೆ ನಿಲ್ಲಬೇಕು. ನಾವೆಲ್ಲರೂ ವೋಟ್​ ಹಾಕುತ್ತೇವೆ. ಅದರಲ್ಲೂ ನಾನು ಖಂಡಿತವಾಗಿ ಅವರಿಗೆ ವೋಟ್​ ಹಾಕುತ್ತೇನೆ. ಸೋನು ಸೂದ್​ ನಮ್ಮ ದೇಶದ ಪ್ರಧಾನ ಮಂತ್ರಿ ಆಗಬೇಕು’ ಎಂದು ಹುಮಾ ಖುರೇಶಿ ಹಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರ-ವಿರೋಧದ ಚರ್ಚೆ ಕೂಡ ಈಗತಾನೇ ಶುರು ಆಗಿದೆ.

ಕಳೆದ ವರ್ಷ ಕೊರೊನಾ ವೈರಸ್​ ಕಾಟ ಶುರುವಾದಾಗಿನಿಂದಲೂ ಸೋನು ಸೂದ್​ ಅವರು ಜನರ ಸಹಾಯಕ್ಕೆ ನಿಂತಿದ್ದಾರೆ. ಇಂದಿಗೂ ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಯಾವುದೇ ರಾಜಕಾರಣಿಯೂ ಮಾಡದಂತಹ ಸೇವೆಯನ್ನು ಅವರು ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ ಮಾಡಿಸಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್​ ಸಿಲಿಂಡರ್​ ತಲುಪಿಸಿದ್ದಾರೆ. ಕಷ್ಟದಲ್ಲಿರುವ ಎಷ್ಟೋ ಜನರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ಅವರ ಸೂದ್​ ಚಾರಿಟಿ ಫೌಂಡೇಶನ್​ ಮೂಲಕ ಪ್ರತಿದಿನ ಸಾವಿರಾರು ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಇಷ್ಟೆಲ್ಲ ಕೆಲಸ ಮಾಡುತ್ತಿರುವ ಅವರು ಪೂರ್ಣಾವಧಿ ರಾಜಕೀಯಕ್ಕೆ ಬಂದರೆ ನಿಜಕ್ಕೂ ಜನರಿಗೆ ಒಳಿತಾಗುತ್ತದೆ ಎಂಬುದು ಹಲವರು ಅಭಿಪ್ರಾಯ.

ಇದನ್ನೂ ಓದಿ:

ಕೊವಿಡ್​ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಹಾಯಕ್ಕೆ ಮುಂದಾದ ಸೋನು ಸೂದ್

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ