AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

Sood Charity Foundation: ಎನ್​ಟಿಆರ್​ ಟ್ರಸ್ಟ್​ ಆಯೋಜಿಸಿದ್ದ ಝೂಮ್​ ಸಂವಾದದಲ್ಲಿ ಸೋನು ಸೂದ್​ ಭಾಗವಹಿಸಿದ್ದರು. ಆಗ ಅವರು ಯುವ ಜನತೆಯ ಜೊತೆ ಈ ವಿಚಾರವನ್ನು ಹಂಚಿಕೊಂಡರು.

ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?
ಸೋನು ಸೂದ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 13, 2021 | 2:22 PM

ಬಹುಭಾಷಾ ನಟ ಸೋನು ಸೂದ್​ ಅವರು ಮಾಡುವ ಕೆಲಸಗಳನ್ನು ಗಮನಿಸಿದರೆ ಅವರು ಮುಂದೊಂದು ದಿನ ರಾಜಕಾರಣಿ ಆಗುತ್ತಾರೆ ಎಂಬುದು ಹಲವರ ಭಾವನೆ. ಆದರೆ ತಾವು ರಾಜಕೀಯಕ್ಕೆ ಬರುವುದಿಲ್ಲ ಎಂದು ಸೋನು ಸೂದ್​ ಈಗಾಗಲೇ ಖಡಕ್​ ಆಗಿ ಹೇಳಿಬಿಟ್ಟಿದ್ದಾರೆ. ಅದೇನೇ ಇರಲಿ, ಅವರಿಗೆ ಒಬ್ಬ ರಾಜಕಾರಣಿಯನ್ನು ಕಂಡರೆ ಸಖತ್​ ಅಭಿಮಾನ. ಯಾರದು? ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು. ಈ ವಿಚಾರವನ್ನು ಸೋನು ಸೂದ್​ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ.

ಎನ್​ಟಿಆರ್​ ಟ್ರಸ್ಟ್​ ಆಯೋಜಿಸಿದ್ದ ಝೂಮ್​ ಸಂವಾದದಲ್ಲಿ ಸೋನು ಸೂದ್​ ಭಾಗವಹಿಸಿದ್ದರು. ಆಗ ಅವರು ಯುವ ಜನತೆಯ ಜೊತೆ ಈ ವಿಚಾರವನ್ನು ಹಂಚಿಕೊಂಡರು. ‘ನಾನು ನಟನಾಗಿ ಕೆಲಸ ಆರಂಭಿಸಿದಾಗ ಹೈದರಾಬಾದ್​​ನಲ್ಲಿ ಶೂಟಿಂಗ್​ ಇರುತ್ತಿತ್ತು. ಈ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ ತುಂಬ ಸುಂದರವಾಗಿತ್ತು. ಇಲ್ಲಿನ ಬೆಳವಣಿಗೆ ಕಂಡು ಅಚ್ಚರಿ ಆಗಿತ್ತು. ಅದಕ್ಕೆ ಚಂದ್ರಬಾಬು ನಾಯ್ಡು ಅವರು ಕಾರಣ ಎಂಬುದು ತಿಳಿಯಿತು. ಅವರನ್ನು ಬೇರೆ ರಾಜ್ಯಗಳಿಗೂ ಕರೆದುಕೊಂಡು ಹೋಗಿ ಅಲ್ಲಿನ ನಗರಗಳನ್ನೂ ಹೈದರಾಬಾದ್​ ರೀತಿ ಅಭಿವೃದ್ಧಿ ಪಡಿಸಬೇಕು ಅಂತ ನನ್ನ ಸ್ನೇಹಿತರ ಜೊತೆ ಚರ್ಚೆ ಮಾಡುತ್ತಿದ್ದೆ’ ಎಂದು ಸೋನು ಸೂದ್​ ಹೇಳಿದ್ದಾರೆ.

ಈಗ ತಾವು ಮಾಡುತ್ತಿರುವ ಅನೇಕ ಕೆಲಸಗಳಿಗೆ ಚಂದ್ರಬಾಬು ನಾಯ್ಡು ಅವರು ಕೂಡ ಸ್ಫೂರ್ತಿ ಎಂದು ಸೋನು ಹೇಳಿದ್ದಾರೆ. ಇಂದಿನ ಯುವಜನತೆ ಸಹ ಅವರಿಂದ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಲಾಕ್​ಡೌನ್​ನ ಕಷ್ಟದ ಸಂದರ್ಭದಲ್ಲಿ ಸೋನು ಸೂದ್​ ಮಾಡಿದ ಕೆಲಸಗಳನ್ನು ಚಂದ್ರಬಾಬು ನಾಯ್ಡು ಗಮನಿಸಿದ್ದಾರೆ. ನಿಸ್ವಾರ್ಥವಾಗಿ ಜನರ ಸೇವೆ ಮಾಡಿದ್ದಕ್ಕಾಗಿ ಈ ರಿಯಲ್​ ಹೀರೋಗೆ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು.

(ಚಂದ್ರಬಾಬು ನಾಯ್ಡು )

ಆಂಧ್ರ ಪ್ರದೇಶದ ಜೊತೆ ಸೋನು ಸೂದ್​ ಅವರಿಗೆ ವಿಶೇಷ ಬಾಂಧವ್ಯ ಇದೆ. ಯಾಕೆಂದರೆ ಅವರು ಮದುವೆ ಆಗಿರುವ ಹುಡುಗಿ ಸೊನಾಲಿ ಕೂಡ ಆಂಧ್ರದ ಗೋಧಾವರಿ ಜಿಲ್ಲೆಯವರು. ಇಂಜಿನಿಯರಿಂಗ್​ ಓದಲು ಸೊನಾಲಿ ನಾಗ್​ಪುರಕ್ಕೆ ಬಂದಿದ್ದಾರೆ ಅಲ್ಲಿ ಸೋನು ಸೂದ್​ ಪರಿಚಯವಾಗಿತ್ತು. ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಸೋನು ತಮ್ಮ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಿದ್ದಾರೆ. ಐಎಎಸ್​ ಮಾಡಬೇಕು ಎಂದುಕೊಂಡಿರುವ ಬಡ ವಿದ್ಯಾರ್ಥಿಗಳ ಕೋಚಿಂಗ್​ಗೆ ಸ್ಕಾಲರ್​ಶಿಪ್​ ನೀಡುವ ಕಾರ್ಯಕ್ಕೆ ಅವರು ಇತ್ತೀಚೆಗಷ್ಟೇ ಚಾಲನೆ ನೀಡಿದರು.

ಇದನ್ನೂ ಓದಿ:

Sonu Sood: ಐಎಎಸ್​ ಕನಸು ಕಂಡ ಬಡವರಿಗೆ ಸೋನು ಸೂದ್ ಕೊಡ್ತಾರೆ ಸ್ಕಾಲರ್​ಶಿಪ್​; ಅರ್ಜಿ ಸಲ್ಲಿಸೋದು ಹೇಗೆ?

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ