Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

Sood Charity Foundation: ಎನ್​ಟಿಆರ್​ ಟ್ರಸ್ಟ್​ ಆಯೋಜಿಸಿದ್ದ ಝೂಮ್​ ಸಂವಾದದಲ್ಲಿ ಸೋನು ಸೂದ್​ ಭಾಗವಹಿಸಿದ್ದರು. ಆಗ ಅವರು ಯುವ ಜನತೆಯ ಜೊತೆ ಈ ವಿಚಾರವನ್ನು ಹಂಚಿಕೊಂಡರು.

ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?
ಸೋನು ಸೂದ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 13, 2021 | 2:22 PM

ಬಹುಭಾಷಾ ನಟ ಸೋನು ಸೂದ್​ ಅವರು ಮಾಡುವ ಕೆಲಸಗಳನ್ನು ಗಮನಿಸಿದರೆ ಅವರು ಮುಂದೊಂದು ದಿನ ರಾಜಕಾರಣಿ ಆಗುತ್ತಾರೆ ಎಂಬುದು ಹಲವರ ಭಾವನೆ. ಆದರೆ ತಾವು ರಾಜಕೀಯಕ್ಕೆ ಬರುವುದಿಲ್ಲ ಎಂದು ಸೋನು ಸೂದ್​ ಈಗಾಗಲೇ ಖಡಕ್​ ಆಗಿ ಹೇಳಿಬಿಟ್ಟಿದ್ದಾರೆ. ಅದೇನೇ ಇರಲಿ, ಅವರಿಗೆ ಒಬ್ಬ ರಾಜಕಾರಣಿಯನ್ನು ಕಂಡರೆ ಸಖತ್​ ಅಭಿಮಾನ. ಯಾರದು? ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು. ಈ ವಿಚಾರವನ್ನು ಸೋನು ಸೂದ್​ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ.

ಎನ್​ಟಿಆರ್​ ಟ್ರಸ್ಟ್​ ಆಯೋಜಿಸಿದ್ದ ಝೂಮ್​ ಸಂವಾದದಲ್ಲಿ ಸೋನು ಸೂದ್​ ಭಾಗವಹಿಸಿದ್ದರು. ಆಗ ಅವರು ಯುವ ಜನತೆಯ ಜೊತೆ ಈ ವಿಚಾರವನ್ನು ಹಂಚಿಕೊಂಡರು. ‘ನಾನು ನಟನಾಗಿ ಕೆಲಸ ಆರಂಭಿಸಿದಾಗ ಹೈದರಾಬಾದ್​​ನಲ್ಲಿ ಶೂಟಿಂಗ್​ ಇರುತ್ತಿತ್ತು. ಈ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ ತುಂಬ ಸುಂದರವಾಗಿತ್ತು. ಇಲ್ಲಿನ ಬೆಳವಣಿಗೆ ಕಂಡು ಅಚ್ಚರಿ ಆಗಿತ್ತು. ಅದಕ್ಕೆ ಚಂದ್ರಬಾಬು ನಾಯ್ಡು ಅವರು ಕಾರಣ ಎಂಬುದು ತಿಳಿಯಿತು. ಅವರನ್ನು ಬೇರೆ ರಾಜ್ಯಗಳಿಗೂ ಕರೆದುಕೊಂಡು ಹೋಗಿ ಅಲ್ಲಿನ ನಗರಗಳನ್ನೂ ಹೈದರಾಬಾದ್​ ರೀತಿ ಅಭಿವೃದ್ಧಿ ಪಡಿಸಬೇಕು ಅಂತ ನನ್ನ ಸ್ನೇಹಿತರ ಜೊತೆ ಚರ್ಚೆ ಮಾಡುತ್ತಿದ್ದೆ’ ಎಂದು ಸೋನು ಸೂದ್​ ಹೇಳಿದ್ದಾರೆ.

ಈಗ ತಾವು ಮಾಡುತ್ತಿರುವ ಅನೇಕ ಕೆಲಸಗಳಿಗೆ ಚಂದ್ರಬಾಬು ನಾಯ್ಡು ಅವರು ಕೂಡ ಸ್ಫೂರ್ತಿ ಎಂದು ಸೋನು ಹೇಳಿದ್ದಾರೆ. ಇಂದಿನ ಯುವಜನತೆ ಸಹ ಅವರಿಂದ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಲಾಕ್​ಡೌನ್​ನ ಕಷ್ಟದ ಸಂದರ್ಭದಲ್ಲಿ ಸೋನು ಸೂದ್​ ಮಾಡಿದ ಕೆಲಸಗಳನ್ನು ಚಂದ್ರಬಾಬು ನಾಯ್ಡು ಗಮನಿಸಿದ್ದಾರೆ. ನಿಸ್ವಾರ್ಥವಾಗಿ ಜನರ ಸೇವೆ ಮಾಡಿದ್ದಕ್ಕಾಗಿ ಈ ರಿಯಲ್​ ಹೀರೋಗೆ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು.

(ಚಂದ್ರಬಾಬು ನಾಯ್ಡು )

ಆಂಧ್ರ ಪ್ರದೇಶದ ಜೊತೆ ಸೋನು ಸೂದ್​ ಅವರಿಗೆ ವಿಶೇಷ ಬಾಂಧವ್ಯ ಇದೆ. ಯಾಕೆಂದರೆ ಅವರು ಮದುವೆ ಆಗಿರುವ ಹುಡುಗಿ ಸೊನಾಲಿ ಕೂಡ ಆಂಧ್ರದ ಗೋಧಾವರಿ ಜಿಲ್ಲೆಯವರು. ಇಂಜಿನಿಯರಿಂಗ್​ ಓದಲು ಸೊನಾಲಿ ನಾಗ್​ಪುರಕ್ಕೆ ಬಂದಿದ್ದಾರೆ ಅಲ್ಲಿ ಸೋನು ಸೂದ್​ ಪರಿಚಯವಾಗಿತ್ತು. ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಸೋನು ತಮ್ಮ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಿದ್ದಾರೆ. ಐಎಎಸ್​ ಮಾಡಬೇಕು ಎಂದುಕೊಂಡಿರುವ ಬಡ ವಿದ್ಯಾರ್ಥಿಗಳ ಕೋಚಿಂಗ್​ಗೆ ಸ್ಕಾಲರ್​ಶಿಪ್​ ನೀಡುವ ಕಾರ್ಯಕ್ಕೆ ಅವರು ಇತ್ತೀಚೆಗಷ್ಟೇ ಚಾಲನೆ ನೀಡಿದರು.

ಇದನ್ನೂ ಓದಿ:

Sonu Sood: ಐಎಎಸ್​ ಕನಸು ಕಂಡ ಬಡವರಿಗೆ ಸೋನು ಸೂದ್ ಕೊಡ್ತಾರೆ ಸ್ಕಾಲರ್​ಶಿಪ್​; ಅರ್ಜಿ ಸಲ್ಲಿಸೋದು ಹೇಗೆ?

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ